ಹರಿತಲೇಖನಿ ದಿನಕ್ಕೊಂದು ಕಥೆ: ಶ್ರೀಕೃಷ್ಣ ಮರಣ ವೃತ್ತಾಂತ

Harithalekhani story: ಮಹಾಭಾರತ ಯುದ್ಧವನ್ನು ಮಹಾ ಯುದ್ಧವೆಂದರೆ ತಪ್ಪಾಗಲಾರದು. ಯಾಕೆಂದರೆ ಇದು ಒಂದೆರೆಡು ದಿನಗಳ ಕಾಲ ನಡೆದ ಯುದ್ಧವಲ್ಲ. ಬರೋಬ್ಬರಿ 18 ದಿನಗಳ ಕಾಲ ನಡೆದ ಯುದ್ಧ ಇದಾಗಿದೆ. ಮಹಾಭಾರತದ ಯುದ್ಧದ ಕುರಿತು ಇಂದಿಗೂ ಜನರಿಗೆ ತಿಳಿಯದ ರಹಸ್ಯಗಳು ಸಾಕಷ್ಟಿದೆ. ಅವುಗಳಲ್ಲಿ ಶ್ರೀಕೃಷ್ಣನ ಮರಣ ವೃತ್ತಾಂತವು ಒಂದು.

ಮಹಾಭಾರತದಲ್ಲಿ ಶ್ರೀಕೃಷ್ಣನ ಪಾತ್ರ ಏನೆಂಬುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ಶ್ರೀಕೃಷ್ಣ ಮರಣ ಹೊಂದಿದ್ದಾದರೂ ಹೇಗೆನ್ನುವುದು ಬಹಳಷ್ಟು ಜನರಿಗೆ ತಿಳಿದಿಲ್ಲ.

ಮಹಾಭಾರತ ಯುದ್ಧದ ನಂತರ ಶ್ರೀಕೃಷ್ಣನು ಸಾವನ್ನಪ್ಪುತ್ತಾನೆ. ಕೃಷ್ಣನ ಸಾವಿಗೆ ಸಂಬಂಧಿಸಿದಂತೆ ನಮ್ಮ ಸಮಾಜದಲ್ಲಿ ಅನೇಕ ದಂತಕಥೆಗಳು ಮತ್ತು ಕಥೆಗಳಿವೆ. ಧಾರ್ಮಿಕ ಗ್ರಂಥಗಳ ಪ್ರಕಾರ, ಕೃಷ್ಣನ ಸಾವು ಹೇಗಾಯಿತೆನ್ನುವುದರ ಕಥೆ ಇಲ್ಲಿದೆ.

ಮಹಾಭಾರತ ಯುದ್ಧದ ಸಮಯದಲ್ಲಿ ದುರ್ಯೋಧನನು ಹತನಾದಾಗ ಆತನ ತಾಯಿ ಗಾಂಧಾರಿಯು ತನ್ನ ಮಗನನ್ನು ಕಳೆದುಕೊಂಡು ಚಿಂತೆಗೆ ಒಳಗಾಗುತ್ತಾಳೆ. ದುರ್ಯೋಧನನ ಸಾವನ್ನು ನೆನೆದು ದುಃಖಿಸುತ್ತಿರುತ್ತಾಳೆ.

ಅದೇ ಸಮಯಕ್ಕೆ ಶ್ರೀಕೃಷ್ಣ ಹಾಗೂ ಪಾಂಡವರು ಗಾಂಧಾರಿಯಿದ್ದ ಅರಮನೆಗೆ ಬರುತ್ತಾರೆ. ಗಾಂಧಾರಿಯು ತನ್ನ ಪುತ್ರನ ಸಾವಿಗೆ ಕಾರಣರಾದ ಪಾಂಡವರನ್ನು ಕಂಡು ಕೋಪಗೊಳ್ಳುತ್ತಾಳೆ.

ಗಾಂಧಾರಿಯನ್ನು ಸಮಾಧಾನಿಸಲು ಕೃಷ್ಣ ಮುಂದಾದಾಗ ಗಾಂಧಾರಿಯು ಕೃಷ್ಣನನ್ನು ಕುರಿತು, ನನ್ನ 100 ಗಂಡುಮಕ್ಕಳು ಸಾಯುತ್ತಿರುವಾಗ ಭಗವಾನ್‌ ಶ್ರೀಕೃಷ್ಣನಾದ ನೀವಾದರೂ ಈ ಯುದ್ಧವನ್ನು ತಪ್ಪಿಸಬಹುದಿತ್ತಲ್ಲವೇ..? ಇದೇ ನಿಮ್ಮ ದೈವಿಕ ಗುಣವೇ..? ಎಂದು ಕೋಪದಿಂದ ಕೃಷ್ಣನನ್ನು ಕೇಳುತ್ತಾಳೆ.

ತನ್ನ 100 ಪುತ್ರರನ್ನು ಕಳೆದುಕೊಂಡು ಶೋಕದ ಸಮುದ್ರದಲ್ಲಿ ಮುಳುಗಿದ್ದ ಗಾಂಧಾರಿಯು ಕೋಪದಿಂದ ಶ್ರೀಕೃಷ್ಣನಿಗೆ ಇಂದಿನಿಂದ 36 ವರ್ಷದೊಳಗೆ ನೀವು ಸಾಯಬೇಕೆಂದು ಶಾಪವನ್ನು ನೀಡುತ್ತಾಳೆ.

ನಿಮ್ಮ ಪ್ರೀತಿಯ ದ್ವಾರಕ ನಗರವು ಪ್ರವಾಹಕ್ಕೆ ತುತ್ತಾಗಲಿ, ಯಾದವ ವಂಶದವರು ಅಥವಾ ಯದು ವಂಶದವರು ಹಾಗೂ ಕುರು ವಂಶದವರು ಹೊಡೆದಾಡಿಕೊಂಡೇ ಸಾಯಲಿ, ಒಬ್ಬರು ಇನ್ನೊಬ್ಬರನ್ನು ಕೊಲ್ಲುವುದರ ಮೂಲಕ ನಿಮ್ಮ ಎರಡೂ ವಂಶವು ನಿರ್ನಾಮವಾಗಲಿ ಎಂದು ಶಾಪವನ್ನು ನೀಡುತ್ತಾಳೆ.

ಯಾದವ ವಂಶದವರನ್ನು ಬೇರಾವ ವಂಶದವರಿಗೂ ಕೊಲ್ಲಲು ಸಾಧ್ಯವಾಗದ ಕಾರಣ ಪರಸ್ಪರ ಅವರೊಳಗೆ ಕಲಹಗಳುಂಟಾಗಿ ಒಬ್ಬರನ್ನೊಬ್ಬರು ಹೊಡೆದು ಸಾಯಿಸುವಂತಾಗಲಿ ಎಂದು ಆಕೆ ನುಡಿದಳು.

ಅ ಸಮಯದಲ್ಲಿ ಯಾದವ ಕುಲವು ಅಭಿವೃದ್ಧಿ ಹೊಂದುತ್ತಿರುವ ಕುಲವಾದರೂ ತಮ್ಮ ಅಧಿಕಾರದ ಮದದಿಂದ ಮಾದಕ ವ್ಯಸನಕ್ಕೆ ಒಳಗಾಗಿತ್ತು. ಸಣ್ಣ ಪುಟ್ಟ ವಿಷಯಕ್ಕೂ ಸಹೋದರರ ನಡುವೆ ಜಗಳವುಂಟಾಗಿ ಅದು ದೊಡ್ಡ ಯುದ್ಧಕ್ಕೆ ಕಾರಣವಾಯಿತು. ಯಾದವರು ಯುದ್ಧ ಭೂಮಿಯಲ್ಲಿ ಗಾಂಧಾರಿಯ ಶಾಪದಂತೆ ಪರಸ್ಪರ ಹೊಡೆದಾಡಿಕೊಂಡು ಸಾವನ್ನಪ್ಪಿದರು. ಹಾಗೂ ಇದರಲ್ಲಿ ಶ್ರೀಕೃಷ್ಣನ ಮಗ ಪ್ರದ್ಯುಮ್ನನು ಕೂಡ ಸಾಯುತ್ತಾನೆ.

ಯದು ವಂಶದ ವಿನಾಶವನ್ನಿರಿತ ಶ್ರೀಕೃಷ್ಣನು ಬೇಸರಗೊಂಡು ದ್ವಾರಕವನ್ನು ತೊರೆದು ಕಾಡಿಗೆ ಹೋಗಲು ನಿರ್ಧರಿಸುತ್ತಾನೆ. ಶ್ರೀಕೃಷ್ಣನು ಅರ್ಜುನನಿಗೆ ಯದುವಂಶದ ಜವಾಬ್ದಾರಿಯನ್ನು ನೀಡಿ ದ್ವಾರಕದಿಂದ ಹೊರಟು ಹೋಗುತ್ತಾನೆ. ನಂತರ ನೋಡುನೋಡುತ್ತಲೆ ಸಮುದ್ರದ ದೊಡ್ಡ ಅಲೆಯೊಂದು ಬಂದು ದ್ವಾರಕವನ್ನು ಅಪ್ಪಳಿಸಿ ಸಂಪೂರ್ಣ ನಗರವೇ ಜಲಾವೃತವಾಗುವಂತೆ ಮಾಡಿತು.

ಇತ್ತ ಶ್ರೀಕೃಷ್ಣನು ಕಾಡಿಗೆ ತೆರಳಿ ಅಲ್ಲಿ ಧ್ಯಾನಕ್ಕೆಂದು ಕುಳಿತುಕೊಳ್ಳುತ್ತಾನೆ. ಅದೇ ಸಮಯದಲ್ಲಿ ಜರಾ ಎನ್ನುವ ಬೇಟೆಗಾರನೋರ್ವನು ಕೃಷ್ಣನ ಪಾದವನ್ನು ಜಿಂಕೆಯೆಂದು ತಪ್ಪಾಗಿ ಭಾವಿಸಿ ಕೃಷ್ಣನನ್ನು ತನ್ನ ಬಾಣದಿಂದ ಹೊಡೆಯುತ್ತಾನೆ.

ಇದರಿಂದ ಕೃಷ್ಣನು ಧ್ಯಾನದಿಂದ ನೆಲಕ್ಕುರುಳಿದನು. ನಂತರ ಬೇಟೆಗಾರನು ಬಂದು ನೋಡಿದಾಗ ಅದು ಜಿಂಕೆಯಾಗಿರಲಿಲ್ಲ ಬದಲಾಗಿ ಭಗವಾನ್‌ ಶ್ರೀಕೃಷ್ಣನಾಗಿದ್ದನು. ತಕ್ಷಣವೇ ಆತ ಕೃಷ್ಣನಲ್ಲಿ ಕ್ಷಮೆಯನ್ನು ಯಾಚಿಸುತ್ತಾನೆ. ಆದರೆ ಕೃಷ್ಣ ಯಾವುದೇ ಬೇಸರವಿಲ್ಲದೆ ಆತನನ್ನು ಕ್ಷಮಿಸುತ್ತಾನೆ. ನಂತರ ಅದೇ ಸ್ಥಳದಲ್ಲಿ ಶ್ರೀಕೃಷ್ಣನ ಆತ್ಮವು ದೇಹವನ್ನು ತೊರೆದು ಸ್ವರ್ಗವನ್ನು ಸೇರುತ್ತದೆ.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!