ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

Rain causes chaos in Bengaluru: BY Vijayendra objects to state government's fun

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಹೊಸಪೇಟೆಯಲ್ಲಿ ಮೋಜು ಮಾಡುತ್ತಿದೆ. ಎರಡು ವರ್ಷ ಪೂರ್ಣಗೊಳಿಸಿದ್ದನ್ನು ತಿಳಿಸಿ ಮೋಜು ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಟೀಕಿಸಿದ್ದಾರೆ.

ಬಿಜೆಪಿ ನಿಯೋಗವು ಇಂದು ಸಿಲ್ಕ್ ಬೋರ್ಡಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿತ್ತು. ಮಳೆ ಹಾನಿಗೆ ಕಾರಣಗಳು, ಆಗಿರುವ ಹಾನಿ ಕುರಿತು ನಿಯೋಗವು ಪರಿಶೀಲಿಸಿತು. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳ ಕಡೆ ಮುಖ್ಯಮಂತ್ರಿಗಳು ಗಮನ ಕೊಡಬೇಕು. ಕೆಲಸಗಳನ್ನು ತ್ವರಿತ ಗತಿಯಲ್ಲಿ ಮುಗಿಸಬೇಕು ಎಂದು ಅವರು ಆಗ್ರಹಿಸಿದರು. ರಾಜ್ಯ ಸರಕಾರವು ಒಂದು ಅಯೋಗ್ಯ ಸರಕಾರ ಎಂದು ಅವರು ಆರೋಪಿಸಿದರು. ಈ ಸರಕಾರಕ್ಕೆ ಮಾನ ಮರ್ಯಾದೆ ಯಾವುದೂ ಇಲ್ಲ ಎಂದು ಟೀಕಿಸಿದರು.

ಕೆಲವೇ ಕೆಲವು ಗಂಟೆ ಮಳೆ ಬಂದ ಸಂದರ್ಭದಲ್ಲಿ ಇಡೀ ಬೆಂಗಳೂರು ಮಹಾನಗರವು ಜಲಾವೃತವಾಗಿದೆ. ನಾಲ್ಕು ಜನರು ಪ್ರಾಣ ಕಳಕೊಂಡಿದ್ದಾರೆ.

ಡಿಕೆ ಶಿವಕುಮಾರ್ (DK Shivakumar), ಸಿದ್ದರಾಮಯ್ಯನವರು (Siddaramaiah) ಗ್ರೇಟರ್ ಬೆಂಗಳೂರು ಬಗ್ಗೆ ಮಾತನಾಡುತ್ತಾರೆ. ಬೆಂಗಳೂರಿಗೆ ಕೇವಲ ಗ್ರೇಟರ್ ಹೆಸರು ಸೇರಿಸಿದರೆ ಸಾಕಾಗುವುದಿಲ್ಲ ಸ್ವಾಮೀ.. ಎಂದರಲ್ಲದೆ, ಬೆಂಗಳೂರಿನ ಅಭಿವೃದ್ಧಿಗೆÉ ಎಷ್ಟು ಸಾವಿರ ಕೋಟಿ ಅನುದಾನ ಕೊಡಲಾಗಿದೆ ಎಂದು ಪ್ರಶ್ನಿಸಿದರು.

ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಸಾವಿರಾರು ಕೋಟಿ ಅನುದಾನದಲ್ಲಿ ಅನೇಕ ಕಾಮಗಾರಿಗಳು ನಡೆಯುತ್ತಿತ್ತು. ಆ ಗುತ್ತಿಗೆದಾರರಿಗೆ ಹಣ ಪಾವತಿಸದ ಕಾರಣ ಇವತ್ತು ಕೆಲಸ ಕಾರ್ಯಗಳು, ಅಭಿವೃದ್ಧಿ ಕಾಮಗಾರಿಗಳು ಹಾಗೇ ನಿಂತಿವೆ ಎಂದು ಗಮನ ಸೆಳೆದರು.

ಡಿ.ಕೆ.ಶಿವಕುಮಾರ್ ಅವರು ಟಾಲೆಸ್ಟ್ ಟವರ್, ಸುರಂಗ ರಸ್ತೆ ಕುರಿತು ಮಾತನಾಡುತ್ತಾರೆ. ಬೆಂಗಳೂರಿನ ಮಹಾಜನತೆ, ಜನಸಾಮಾನ್ಯರು ಇವುಗಳನ್ನು ಕೇಳುತ್ತಿಲ್ಲ. ಬಂದ ಮಳೆಯ ನೀರು ಸರಿಯಾಗಿ ಹೋಗುವ ವ್ಯವಸ್ಥೆ ಆಗಬೇಕು. ರಾಜಕಾಲುವೆಯನ್ನು ಸರಿಪಡಿಸಬೇಕು. ಕೆರೆಗಳ ಒತ್ತುವರಿ ಸರಿಪಡಿಸಲು ಬಯಸುತ್ತಾರೆ ಎಂದು ತಿಳಿಸಿದರು.

ಹೂಳು ತೆಗೆಯುವಂತೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ನಿನ್ನೆ ಅಧಿಕಾರಿಗಳಿಗೆ ಹೇಳುತ್ತಿದ್ದರು. ಯಾಕೆ ಮಳೆ ಬರುವುದು ಗೊತ್ತಿಲ್ಲವೇ? ಮಳೆ ಯಾವ ತಿಂಗಳಲ್ಲಿ ಬರುತ್ತದೆಂದು ಇವರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು. ಅಧಿಕಾರಿಗಳಿಗೆ ಸರಿಯಾಗಿ ತಿಳಿಸಿ ಮುಂಗಾರು ಮಳೆಗೆ ಮೊದಲು ಕೆಲಸ ಯಾಕೆ ಮಾಡಿಸಿಲ್ಲ ಎಂದು ಕೇಳಿದರು.

ಗ್ರೇಟರ್ ಬೆಂಗಳೂರು, ವಾಟರ್ ಬೆಂಗಳೂರು ಆಗಿದೆ

ವಿರೋಧ ಪಕ್ಷದ ನಾಯಕ ಆರ್.ಅಶೋಕ (R Ashoka) ಮಾತನಾಡಿ, ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್‌ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ ತಿಳಿಸಿ ಎಂದು ಆಗ್ರಹಿಸಿದರು.

ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಐದು ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್‌ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು.

ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಮಕೆ ಶಿವಕುಮಾರ್‌ (DK Shivakumar) ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್‌ ಬೋರ್ಡ್‌ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ.

ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್‌ ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ. ಬೆಂಗಳೂರಿಗೆ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ದೂರಿದರು.

ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್‌ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಯಾವ ಕೆಲಸವೂ ಆಗಿಲ್ಲ. ಏಪ್ರಿಲ್‌ 15 ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್‌ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ ಎಂದರು.

ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರತಿ ವರ್ಷ ಏಳೆಂಟು ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್‌ ಸರ್ಕಾರ ಬೆಂಗಳೂರಿಗೆ ನೀಡಿರುವ ಹಣವೆಲ್ಲವನ್ನೂ ಸುರಂಗ ನಿರ್ಮಿಸಲು ಬಳಸಲಾಗುತ್ತಿದೆ.

ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್‌ ಬೆಂಗಳೂರು ಹೋಗಿ ವಾಟರ್‌ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ ಎಂದು ದೂರಿದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]