Bamul elections: Congress announces support for JDS candidate Huskur Anand..!

ಬಮೂಲ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಆನಂದ್ ಅವರಿಗೆ ಬೆಂಬಲ ಘೋಷಿಸಿದ ದೊಡ್ಡಬಳ್ಳಾಪುರ ಕಾಂಗ್ರೆಸ್..!

ದೊಡ್ಡಬಳ್ಳಾಪುರ: ಮೇ.25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (Bamul) ದೊಡ್ಡಬಳ್ಳಾಪುರ ನಿರ್ದೇಶಕ ಸ್ಥಾನದ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ (JDS) ಬೆಂಬಲಿತ ಅಭ್ಯರ್ಥಿ ಹುಸ್ಕೂರು ಆನಂದ್ ಅವರಿಗೆ ನಿರೀಕ್ಷಿಸಿದಂತೆ ಕಾಂಗ್ರೆಸ್ (Congress) ಬೆಂಬಲ ಘೋಷಿಸಿದೆ.

ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ (G.Lakshmipathi) ಅವರು, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಹುಸ್ಕೂರು ಆನಂದ್ ಅವರಿಗೆ ಯಾವುದೇ ಷರತ್ತುಗಳಿಲ್ಲದೆ ಬಾಹ್ಯ ಬೆಂಬಲ ನೀಡುತ್ತಿರುವುದಾಗಿ ಹೇಳಿದರು.

ಅಂದು ನಾವು ಮಾಡಿದ ಆ ಮೂರು ತಪ್ಪುಗಳಿಂದ ಇಂದು ನೋವು ಅನುಭವಿಸುತ್ತಿದ್ದೇವೆ. ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿಗೆ ಸೇರ್ಪಡೆಗೊಂಡ ಬಿ.ಸಿ ಆನಂದ್ ಗೆ ಬಮೂಲ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು, ಮುಖಂಡರ ಒಮ್ಮತದ ಮೇರೆಗೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ.ಆನಂದ್ ಅವರಿಗೆ ಬಾಹ್ಯ ಬೆಂಬಲ ನೀಡಲಾಗುತ್ತಿದೆ.

ಬಿ.ಸಿ.ಆನಂದ್ ನಮ್ಮ ಪಕ್ಷದ ಸಹಕಾರದಿಂದ ಹಲವು ಅಧಿಕಾರಗಳನ್ನು ಅನುಭವಿಸಿ, ಒಂದು ಹಂತಕ್ಕೆ ಬೆಳೆದು ನಿಂತ ಮೇಲೆ ವೆಂಕಟರಮಣಯ್ಯ, ಪಕ್ಷ ನೀಡಿದ ಸಹಕಾರವನ್ನು ಮರೆತು, ದ್ರೋಹ ಮಾಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರಿಗೆ ಬುದ್ದಿ ಕಲಿಸುವ ಕಾಲ ಬಂದಿದೆ.

ನಮ್ಮ ಪಕ್ಷದಿಂದ ಬಮೂಲ್ ಚುನಾವಣೆಗೆ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು, ಆದರೆ, ಅವರ ನಾಮಪತ್ರಗಳನ್ನು ವಾಪಸ್ ಪಡೆಯುವಂತೆ ಮಾಡಿ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಅವರಿಗೆ ಬಾಹ್ಯ ಬೆಂಬಲ ಸೂಚಿಸಿದ್ದೇವೆ ಎಂದರು.

ನಮಗೆ ಅಧಿಕೃತವಾಗಿ ಜೆಡಿಎಸ್ ನಿಂದ ಬೆಂಬಲ ಬೇಡಿಕೆ ಇಟ್ಟಿದ್ದರು, ಅಲ್ಲದೆ ಜೆಡಿಎಸ್ ಪಕ್ಷದಿಂದ ಬೆಂಬಲಿಸುವಂತೆ ಪತ್ರ ನೀಡಿದ್ದರು, ನಾವು ಈ ಕುರಿತು ಹೈಕಮಾಂಡ್ ಗಮನಕ್ಕೆ ತಂದು, ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರ ಜತೆ ಸಭೆ ನಡೆಸಿ, ಚರ್ಚೆ ಮಾಡಿ, ಒಮ್ಮತದಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ.

ನಾವು ಯಾವ ಬೇಡಿಕೆ ಇಡದೇ, ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಅವರಿಗೆ ಬಾಹ್ಯ ಬೆಂಬಲ ಸೂಚಿಸಿದ್ದೇವೆ. ತಾಲೂಕಿನ ರೈತರ ಅಭಿವೃದ್ಧಿಗಾಗಿ ಎಲ್ಲರು ಸಹಕರಿಸಬೇಕು ಎಂದು ತಿಳಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ (T Venkataramanaiah) ಮಾತನಾಡಿ, ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವ ವಿಚಾರವಾಗಿ ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಪಕ್ಷದ ವರಿಷ್ಠರು, ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆಹೆಚ್ ಮುನಿಯಪ್ಪ ಒಳಗೊಂಡಂತೆ ಹಲವು ಹಿರಿಯ ಪ್ರಮುಖರ ಜೊತೆ ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ.

ಕ್ರಮ ಸಂಖ್ಯೆ 2 ಹಣ್ಣಿನ ಬುಟ್ಟಿ ಗುರುತು ಪಡೆದಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿ ಹುಸ್ಕೂರ್ ಟಿ ಆನಂದ್ ಅವರಿಗೆ ತಾಲೂಕಿನ ರೈತರು, ಹಾಲು ಉತ್ಪಾದಕರು, ನಿರ್ದೇಶಕರು, ಅಧ್ಯಕ್ಷರು ಬೆಂಬಲ ನೀಡಿ, ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಈ ಹಿಂದೆ ದೊಡ್ಡಬಳ್ಳಾಪುರದಲ್ಲಿ ಟೆಟ್ರಾ ಪ್ಯಾಕೇಟ್ ತಯಾರಿಕಾ ಘಟಕ ಸ್ಥಾಪನೆಗೆ ಚಿಂತನೆ ನಡೆಸಲಾಗಿತ್ತು. ಬದಲಾದ ಸನ್ನಿವೇಶದಲ್ಲಿ ಅದು ಕಾರ್ಯರೂಪಕ್ಕೆ ಬಂದಿಲ್ಲ, ಮುಂದಿನ ದಿನಗಳಲ್ಲಿ ನಮ್ಮದೇ ಪಕ್ಷದ ಆಡಳಿಮಂಡಳಿ ಬರುತ್ತೆ, ನಮ್ಮದೇ ಪಕ್ಷದ ಕೆಎಂಎಫ್ ಆಡಳಿತ ಬರುತ್ತೆ. ತಾಲೂಕಿನ ಮುಖಂಡರು ತೆರಳಿ ಮನವೊಲಿಸಿ ಟೆಟ್ರಾಪ್ಯಾಕೆಟ್ ತಯಾರಿಕಾ ಘಟಕ ಸ್ಥಾಪನೆ ಮಾಡಲು ಕೋರುತ್ತೇವೆ. ಇದರಿಂದ ತಾಲೂಕಿನ ಜನರಿಗೆ ಉದ್ಯೋಗ ದೊರಕಲಿದೆ. ಈ ನಿಟ್ಟಿನಲ್ಲಿ ಡೈರಿ ಅಧ್ಯಕ್ಷರು ಜೆಡಿಎಸ್ -ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮತ ನೀಡಬೇಕೆಂದು ವೆಂಕಟರಮಣಯ್ಯ ಕೋರಿದರು.

ಇನ್ನೂ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಮಾತನಾಡಿ, ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಕಾರಣ ಎಲ್ಲರೂ ನನ್ನ ಮಿತ್ರರಾಗಿದ್ದಾರೆ. ಈಗ ಜೆಡಿಎಸ್ ನಲ್ಲಿರುವೆ. ಲಕ್ಷ್ಮೀಪತಿ ಅವರು ಹೇಳಿದಂತೆ ಬಿಸಿ ಆನಂದ್ ಅವರು ಕಾಂಗ್ರೆಸ್ ಗೆ ಯಾವ ರೀತಿ ಮೋಸ ಮಾಡಿದ್ದಾರೆ ಎಂಬುದನ್ನು ಹೇಳಿದಂತೆ, ಜೆಡಿಎಸ್ ಗೆ ಏನ್ ಮಾಡಿದ್ದಾರೆ ಎಂಬುದನ್ನು ನಿನ್ನೆ ಜೆಡಿಎಸ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ನಾವು ಮುನೇಗೌಡರೊಂದಿಗೆ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರೊಂದಿಗೆ ಚರ್ಚೆ ನಡೆಸಿ, ನಿಮ್ಮ ಪಕ್ಷದಿಂದ ಅಭ್ಯರ್ಥಿ ಮಾಡಿ ನಾವು ಬೆಂಬಲ ನೀಡುತ್ತೇವೆ. ಇಲ್ಲ ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಿ ಎಂದು ಕೋರಲಾಗಿತ್ತು. ಈ ಕುರಿತು ಸಭೆ ನಡೆಸಿ ನೀವೆ ಸ್ಪರ್ಧೆ ಮಾಡಿ ಬೆಂಬಲ ಸೂಚಿಸುತ್ತೇವೆ ಎಂದ ಕಾಂಗ್ರೆಸ್ ಪಕ್ಷಕ್ಕದ ಮುಖಂಡರಿಗೆ ಧನ್ಯವಾದ.

ಈ ಚುನಾವಣೆ ಪಕ್ಷಾತೀತ ಚುನಾವಣೆ ಆಗಿರುವ ಕಾರಣ, ದೊಡ್ಡಬಳ್ಳಾಪುರ ತಾಲೂಕಿನ ಕಾಂಗ್ರೆಸ್, ಜೆಡಿಎಸ್ ಎಲ್ಲಾ ಡೈರಿ ಅಧ್ಯಕ್ಷರಿಗೆ ಮನವಿ ಏನೆಂದರೆ, ಪಕ್ಷಾತೀತ ಚುನಾವಣೆಯಲ್ಲಿ ನನಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ದೊಡ್ಡಬಳ್ಳಾಪುರ ಕಸಬಾ ಹೋಬಳಿ ಅಧ್ಯಕ್ಷ ಅಪ್ಪಿ ವೆಂಕಟೇಶ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ತಿಪ್ಪೂರು ಬೈರೇಗೌಡ, ತೂಬಗೆರೆ ಹೋಬಳಿ ಬ್ಲಾಕ್ ಅಧ್ಯಕ್ಷ ರಂಗಪ್ಪ, ತಾಪಂ ಮಾಜಿ ಅಧ್ಯಕ್ಷರಾದ ಲಾವಣ್ಣ ನಾಗರಾಜ್, ನಾರಾಯಣಗೌಡ, ಕಂಟನಕುಂಟೆ ಕೃಷ್ಣಮೂರ್ತಿ ಮತ್ತಿತರರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!