PM E-Drive Project of National Importance: HD Kumaraswamy

PM E-ಡ್ರೈವ್ ರಾಷ್ಟ್ರೀಯ ಮಹತ್ವದ ಯೋಜನೆ: ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯ ಅನುಷ್ಠಾನವನ್ನು ಪರಿಶೀಲನೆ ಹಾಗೂ ಅದನ್ನು ಮತ್ತಷ್ಟು ವೇಗವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಅಂತರ ಸಚಿವಾಲಯ ಸಮನ್ವಯ ಸಭೆಯನ್ನು ನಡೆಸಿದರು.

ನವದೆಹಲಿಯ ತಮ್ಮ ಸಚಿವಾಲಯದಲ್ಲಿ ಸಚಿವರು ಕರೆದಿದ್ದ ಈ ಸಭೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಇ-ಡ್ರೈವ್ ಅನುಷ್ಠಾನಕ್ಕೆ ಬಂದಿದ್ದು, ಇದನ್ನು ರಾಷ್ಟ್ರೀಯ ಮಹತ್ವದ ಯೋಜನೆ ಎಂದು ಪರಿಗಣಿಸಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಕಟಿಬದ್ಧವಾಗಿ ಕೆಲಸ ಮಾಡಬೇಕು ಎಂದು ಸಚಿವರು ಒತ್ತಿ ಹೇಳಿದರು.

ಪ್ರಧಾನಿಗಳ ದೂರದೃಷ್ಟಿಯಂತೆ ಈ ಯೋಜನೆಯು ಮಾಲಿನ್ಯ ಮುಕ್ತ ಸಾರಿಗೆ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಸಾಂಪ್ರದಾಯಿಕ ಇಂಧನಗಳ ಮೇಲಿನ ಭಾರತದ ಅವಲಂಬನೆಯನ್ನು ಕಡಿಮೆ ಮಾಡಲು ರಾಷ್ಟ್ರವ್ಯಾಪಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರಕ್ಕೆ ಅಗತ್ಯವಾದ ಪೂರಕ ವ್ಯವಸ್ಥೆಯನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಸಮನ್ವಯತೆ ಅತ್ಯಗತ್ಯ ಎಂದು ಸಚಿವರು ಪ್ರತಿಪಾದಿಸಿದರು.

₹2,000 ಕೋಟಿ ವೆಚ್ಚ

ಪಿಎಂ ಇ- ಡ್ರೈವ್ ಯೋಜನೆ ಮೂಲಕ ₹2,000 ಕೋಟಿ ವೆಚ್ಚದಲ್ಲಿ ದೇಶಾದ್ಯಂತ ಸುಮಾರು 72,000 ಸಾರ್ವಜನಿಕ ಎಲೆಕ್ಟ್ರಿಕ್ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಬೆಂಬಲ ನೀಡುತ್ತದೆ. ಈ ಕೇಂದ್ರಗಳನ್ನು 50 ರಾಷ್ಟ್ರೀಯ ಹೆದ್ದಾರಿ ಕಾರಿಡಾರ್‌ಗಳಲ್ಲಿ, ಮೆಟ್ರೋ ನಗರಗಳು, ಟೋಲ್ ಪ್ಲಾಜಾಗಳು, ರೈಲ್ವೆ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಇಂಧನ ಮಳಿಗೆಗಳು ಮತ್ತು ರಾಜ್ಯ ಹೆದ್ದಾರಿಗಳಂತಹ ಹೆಚ್ಚಿನ ದಟ್ಟಣೆಯ ತಾಣಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಭಾರತವು ಸುಸ್ಥಿರ ಸಾರಿಗೆಗೆ ಜಾಗತಿಕ ಮಟ್ಟದಲ್ಲಿ ಮಾದರಿಯಾಗುವ ಹಾದಿಯಲ್ಲಿದೆ. ಪಿಎಂ ಇ- ಡ್ರೈವ್ ಯೋಜನೆಯು ನಮ್ಮ ನಾಗರಿಕರಿಗೆ ಸ್ವಚ್ಛ, ಕೈಗೆಟುಕುವ ಮತ್ತು ಅನುಕೂಲಕರ ಸಾರಿಗೆ ಆಯ್ಕೆಗಳಿಗೆ ಅವಕಾಶ ನೀಡುವ ಗುರಿಯನ್ನು ಹೊಂದಿರುವ ಪರಿವರ್ತನಾತ್ಮಕ ಉಪಕ್ರಮವಾಗಿದೆ.

ನಾವು ಕೇವಲ ಮೂಲಸೌಕರ್ಯವನ್ನು ನಿರ್ಮಿಸುತ್ತಿಲ್ಲ, ಇಂಧನ ಭದ್ರತೆ ಮತ್ತು ಹಸಿರು ಆರ್ಥಿಕ ಬೆಳವಣಿಗೆಗೆ ನಾವು ಅಡಿಪಾಯವನ್ನು ನಿರ್ಮಿಸುತ್ತಿದ್ದೇವೆ ಎಂದು ಅವರು ಹೇಳಿದರು.

ನೋಡೆಲ್ ಏಜೆನ್ಸಿಯಾಗಿ ಬಿಎಚ್‌ಇಎಲ್

ಈ ಉಪಕ್ರಮದ ಅನುಷ್ಠಾನದಲ್ಲಿ ವಿವಿಧ ಪಾಲುದಾರರ ಸಮಗ್ರ ಪಾತ್ರವನ್ನು ಸಚಿವರು ಶ್ಲಾಘಿಸಿದರು. ಬಿಎಚ್‌ಇಎಲ್ (ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್) ಅನ್ನು ಬೇಡಿಕೆ ಒಟ್ಟುಗೂಡಿಸುವಿಕೆಗೆ ಮತ್ತು ಭಾರತದಾದ್ಯಂತ ಇವಿ ಬಳಕೆದಾರರಿಗೆ ಒಂದೇ ವೇದಿಕೆಯಾಗಿ ಕಾರ್ಯನಿರ್ವಹಿಸುವ ಏಕೀಕೃತ ಡಿಜಿಟಲ್ ಸೂಪರ್ ಅಪ್ಲಿಕೇಶನ್‌ನ ಅಭಿವೃದ್ಧಿಗಾಗಿ ನೋಡಲ್ ಏಜೆನ್ಸಿಯಾಗಿ ಪರಿಗಣಿಸಲಾಗುತ್ತಿದೆ ಎಂದ ಸಚಿವರು ಮಾಹಿತಿ ನೀಡಿದರು.

ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ರಾಷ್ಟ್ರೀಯ ನಿಯೋಜನೆಯನ್ನು ಪತ್ತೆಹಚ್ಚಲು ಈ ಅಪ್ಲಿಕೇಶನ್ ನೈಜ-ಸಮಯದ ಸ್ಲಾಟ್ ಬುಕಿಂಗ್, ಪಾವತಿ ವ್ಯವಸ್ಥೆ, ಚಾರ್ಜರ್ ಲಭ್ಯತೆಯ ಸ್ಥಿತಿ ಮತ್ತು ಪ್ರಗತಿ ಡ್ಯಾಶ್‌ಬೋರ್ಡ್‌ಗಳನ್ನು ಒಳಗೊಂಡಿರುತ್ತದೆ.

ಚಾರ್ಜರ್ ಸ್ಥಾಪನೆಗಳಿಗೆ ಪ್ರಸ್ತಾವನೆಗಳನ್ನು ಸಂಗ್ರಹಿಸಲು ಮತ್ತು ಮೌಲ್ಯಮಾಪನ ಮಾಡಲು ಬಿಎಚ್‌ಇಎಲ್ ವತಿಯಿಂದ ರಾಜ್ಯಗಳು ಮತ್ತು ಸಚಿವಾಲಯಗಳೊಂದಿಗೆ ಸಮನ್ವಯ ಸಾಧಿಸಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದರು.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!