Karnataka's Mysore Sandal Soap should be promoted across the country: MB Patil

ಕರ್ನಾಟಕದ ಮೈಸೂರು ಸ್ಯಾಂಡಲ್ ಸೋಪ್ಗೆ ದೇಶಾದ್ಯಂತ ಪ್ರಚಾರ ಸಿಗಬೇಕು: ಎಂಬಿ ಪಾಟೀಲ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (Karnataka’s Mysore Sandal Soap) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ (Tamannaah) ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.

ಆದರೆ ಇದು ಕೆಲ ಕನ್ನಡ ಪರ ಹೋರಾಟಗಾರರು, ಕೆಲ ಖಾಸಗಿ ನ್ಯೂಸ್ ಚಾನಲ್‌ಗಳ ಆಕ್ಷೇಪಕ್ಕೆ ಕಾರಣವಾಗಿದೆ.

ಈ ಕುರಿತಂತೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿದ್ದು ತಮನ್ನಾ ಆಯ್ಕೆಗೆ ಕಾರಣ ಹೇಳಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ರಾಜ್ಯದ ಅಸ್ಮಿತೆ ಮತ್ತು ಹೆಮ್ಮೆಯ ಸಂಕೇತವಾಗಿದೆ. ವಚನ ಪರಂಪರೆಯಿಂದ ಬಂದಿರುವ ನನಗೆ ಕನ್ನಡ-ಕನ್ನಡಿಗ-ಕರ್ನಾಟಕಗಳ ಮೇಲೆ ಅಪಾರ ಗೌರವ ಮತ್ತು ಎಲ್ಲರಿಗಿಂತ ಹೆಚ್ಚಿನ ಬದ್ಧತೆ ಇದೆ.

ಇಲ್ಲಿಯ ಕಲಾವಿದರ ಬಗ್ಗೆ ಅಭಿಮಾನವೂ ಇದೆ. ಆದರೆ, ವ್ಯಾಪಾರದ ಪ್ರಶ್ನೆ ಬಂದಾಗ ಇಲ್ಲಿಯ ಸ್ಪರ್ಧಾತ್ಮಕತೆಯನ್ನು ನೋಡಬೇಕು. ಹೀಗಾಗಿ ಪರಿಣತರ ತಂಡದ ತೀರ್ಮಾನದಂತೆ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಇದನ್ನು ನಕಾರಾತ್ಮಕವಾಗಿ ನೋಡಬಾರದು ಎಂದು ಮನವಿ ಮಾಡಿದ್ದಾರೆ.

ತಮನ್ನಾ ಅವರ ನೇಮಕಕ್ಕೆ ಕೆಲವರು ಕನ್ನಡದ ಹೆಸರು ಹೇಳಿಕೊಂಡು ತಕರಾರು ತೆಗೆದಿರುವ ಹಿನ್ನೆಲೆಯಲ್ಲಿ ಅವರು ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ನಾನು ಈ ಖಾತೆಯನ್ನು ವಹಿಸಿಕೊಂಡ ಮೇಲೆ ಕೆಎಸ್ಡಿಎಲ್ ನಲ್ಲಿ ಉತ್ಪಾದನೆ ಶೇಕಡ 40ರಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಾವೇನೂ ಹೊಸ ಯಂತ್ರೋಪಕರಣಗಳನ್ನು ಖರೀದಿಸಿಲ್ಲ. ಜತೆಗೆ ಎಫ್ ಎಂಸಿಜಿ ವಲಯದಲ್ಲಿ ಸಂಸ್ಥೆಯ ಬೆಳವಣಿಗೆ ಶೇಕಡ 15ರಷ್ಟಿದೆ.

ಈ ವಿಚಾರದಲ್ಲಿ ಗೋದ್ರೇಜ್ (ಶೇ.11), ಹಿಂದೂಸ್ತಾನ್ ಲಿವರ್ಸ್ (ಶೇ 9), ಐಟಿಸಿ (ಶೇಕಡ 8), ವಿಪ್ರೋ (ಶೇಕಡ 7) ಮುಂತಾದ ಉದ್ದಿಮೆಗಳನ್ನೂ ಕೆಎಸ್ಡಿಎಲ್ ಹಿಂದಿಕ್ಕಿದೆ.

ನಾವು ಕೆಎಸ್ಡಿಎಲ್ ವಹಿವಾಟನ್ನು ಮುಂದಿನ ಮೂರು ವರ್ಷಗಳಲ್ಲಿ 5,000 ಕೋಟಿ ರೂ.ಗೆ ಕೊಂಡೊಯ್ಯಲು ನಿರ್ಧರಿಸಿದ್ದೇವೆ. ಆಗ ಹಾಲಿವುಡ್ ನಟಿಯೊಬ್ಬರನ್ನೇ ಪ್ರಚಾರ ರಾಯಭಾರಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅಂತಹ ಪರಿಸ್ಥಿತಿ ಬರಲೆಂದು ನಾನು ಆಶಿಸುತ್ತೇನೆ ಎಂದು ಅವರು ವಿವರಿಸಿದ್ದಾರೆ.

ತಮನ್ನಾ ಅವರನ್ನು ನೇಮಿಸಿಕೊಳ್ಳುವ ಮೊದಲು ನಾವು ಕನ್ನಡದವರೇ ಆದ ದೀಪಿಕಾ ಪಡುಕೋಣೆ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಸಂಪರ್ಕಿಸಿದೆವು. ಜೊತೆಗೆ ಶ್ರೀಲೀಲಾ, ಪೂಜಾ ಹೆಗಡೆ, ಕಿಯಾರ ಅಡ್ವಾಣಿ ಅವರನ್ನೂ ಕೇಳಲಾಗಿದೆ.

ದೀಪಿಕಾ ಅವರು ಅವರದೇ ಉತ್ಪನ್ನಗಳ ಪ್ರಚಾರದಲ್ಲಿ ಇದ್ದಾರೆ. ಹೀಗಾಗಿ ಬರಲಿಲ್ಲ. ಉಳಿದವರು ಬೇರೆಬೇರೆ ಸೌಂದರ್ಯವರ್ಧಕಗಳು, ಕ್ರೀಮುಗಳು ಮತ್ತು ಸಾಬೂನುಗಳಿಗೆ ರೂಪದರ್ಶಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮುಂದಿನ ಎರಡು ವರ್ಷ ಅವರಾರೂ ತಮಗೆ ಬಿಡುವಿಲ್ಲ ಎಂದು ತಿಳಿಸಿದರು.

ಹೀಗಾಗಿ, ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ 28 ಮಿಲಿಯನ್ ಫಾಲೋಯರ್ಸ್ ಹೊಂದಿರುವ ತಮನ್ನಾ ಅವರನ್ನು ಅವರ ಅಖಿಲ ಭಾರತೀಯ ಮಟ್ಟದ ವರ್ಚಸ್ಸನ್ನು ನೋಡಿ ನೇಮಿಸಿಕೊಳ್ಳಲಾಯಿತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೆಎಸ್ಡಿಎಲ್ ಮೂಲಕ ಇತ್ತೀಚೆಗೆ 21 ಹೊಸ ಉತ್ಪನ್ನ ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ನಾವು ಪರಿಮಳಗಳ ಕ್ಷೇತ್ರಕ್ಕೂ ಕಾಲಿಡುತ್ತಿದ್ದೇವೆ. ಇದಕ್ಕೆಂದೇ ನಮ್ಮ ಅಧಿಕಾರಿಗಳನ್ನು ಅತ್ತರಿಗೆ ಹೆಸರಾಗಿರುವ ಉತ್ತರಪ್ರದೇಶದ ಕನೌಜ್ ಗೂ ಕಳಿಸಿಕೊಡಲಾಗಿತ್ತು.

ವ್ಯಾಪಾರದ ಪ್ರಶ್ನೆ ಬಂದಾಗ ನಾವು ಅದಕ್ಕೆ ತಕ್ಕ ಕಾರ್ಯತಂತ್ರವನ್ನೇ ರೂಪಿಸಬೇಕಾಗುತ್ತದೆ. ಬ್ರ್ಯಾಂಡ್ ಅಂಬಾಸಿಡರ್ ನೇಮಕವನ್ನು ತಪ್ಪಾಗಿ ಭಾವಿಸಬಾರದು.

ನಾವು ಅಧಿಕಾರಕ್ಕೆ ಬಂದಮೇಲೆ, ಕೆಎಸ್ಡಿಎಲ್ ವಹಿವಾಟು 1,700 ಕೋಟಿ ರೂ.ಗೂ ಹೆಚ್ಚಾಗಿದೆ. ಇದರ ಪೈಕಿ ರಾಜ್ಯದಲ್ಲಿ ನಡೆದಿರುವ ವಹಿವಾಟಿನ ಮೊತ್ತ 320 ಕೋಟಿ ರೂ. ಆಸುಪಾಸಿನಲ್ಲಿದೆಯಷ್ಟೆ ಎಂದು ಪಾಟೀಲ ಹೇಳಿದ್ದಾರೆ.

ಕೆಎಸ್ಡಿಎಲ್ ತರಹದಲ್ಲೇ ಎಂಎಸ್ಐಎಲ್ ಸಂಸ್ಥೆಗೂ ನಾವು ಹೊಸ ರೂಪ ನೀಡುತ್ತಿದ್ದು, ಸದ್ಯದಲ್ಲೇ ವಾರ್ಷಿಕ 10 ಸಾವಿರ ಕೋಟಿ ರೂ. ವಹಿವಾಟಿನ ಗುರಿಯುಳ್ಳ ಚಿಟ್ ಫಂಡ್ ಆರಂಭಿಸುತ್ತಿದ್ದೇವೆ.

ಹುಬ್ಬಳ್ಳಿಯಲ್ಲಿರುವ ಎನ್ಜಿಎಫ್ ಅನ್ನು ಕೂಡ ಉಳಿಸಿಕೊಳ್ಳಬೇಕಾಗಿದೆ. ನಾವು ಅಖಿಲ ಭಾರತ ಮಟ್ಟವನ್ನು ಮೀರಿ ಜಾಗತಿಕ ಸ್ತರದಲ್ಲಿ ಯೋಚಿಸಬೇಕಾಗಿದೆ. ಕೆಎಸ್ಡಿಎಲ್ ಅನ್ನು ಕೇವಲ ಭಾರತವಲ್ಲ, ಅಂತಾರಾಷ್ಟ್ರೀಯ ಬ್ರ್ಯಾಂಡ್ ಆಗಿಸಬೇಕೆನ್ನುವುದು ನಮ್ಮ ಹೆಗ್ಗುರಿ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ವೇಳೆ ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ ಇದ್ದರು.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!