RCB enters Qualifier-1

ಗುಡ್ಮಾರ್ನಿಂಗ್ ನ್ಯೂಸ್: ನಾಯಕ ಜಿತೇಶ್ ಗರ್ಜನೆ.. ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟ RCB

ಲಕ್ನೋ: ಬೌಲಿಂಗ್ ಸಂದರ್ಭದಲ್ಲಿ ಆತಂಕ ಎದುರಾದರೂ, ಬ್ಯಾಟಿಂಗ್ ವೇಳೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ನಾಯಕ ಜಿತೇಶ್‌ ಶರ್ಮಾ (Jitesh sharma) ಆರ್ಭಟಿಸಿದ ಪರಿಣಾಮ ಲಕ್ನೋ ಸೂಪರ್‌ ಜೈಂಟ್ಸ್‌ (LSG) ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ.

ಈ ಮೂಲಕ 18ನೇ ಆವೃತ್ತಿಯ ಲೀಗ್‌ ಪಂದ್ಯಗಳನ್ನು ಮುಗಿಸಿದ್ದು, ಕ್ವಾಲಿಫೈಯರ್‌-1ಗೆ ಲಗ್ಗೆಯಿಟ್ಟಿದೆ.

ಟಾಸ್‌ ಗೆದ್ದ RCB ಮೊದಲು ಬ್ಯಾಟಿಂಗ್‌ ಲಕ್ನೋ ತಂಡಕ್ಕೆ ಅವಕಾಶ ನೀಡಿತು. ಅದೇನ್ ಕರ್ಮಾನೋ ಏನೋ ಎಲ್ಲಾ ಕಡೆ ವಿಫಲವಾದವರಿಗೆ RCB ಪುನರ್ಜನ್ಮ ನೀಡುತ್ತೆ ಎಂಬ ಮಾತಿನಿಂತೆ, ಈ ಸರಣಿಯ ಉದ್ದಕ್ಕೂ ಸಿಕ್ ಸಿಕ್ಕಾಗೆ ವಿಕೆಟ್ ಚೆಲ್ಲುತ್ತಿದ್ದ ಪಂತ್‌, ಇಂದಿನ ಪಂದ್ಯದಲ್ಲಿ ಶತಕದ ಪಲ್ಟಿಯ ನೆರವಿನಿಂದ 3 ವಿಕೆಟ್‌ ನಷ್ಟಕ್ಕೆ 227 ರನ್‌ ಗಳಿಸಿತ್ತು.

ಈ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ (RCB) 18.4 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 230 ರನ್‌ ಗಳಿಸಿ ಗೆದ್ದು ಬೀಗಿದೆ.

ಈ ಮೂಲಕ ಏಕನಾ ಕ್ರೀಡಾಂಗಣದಲ್ಲಿ ಅತಿದೊಡ್ಡ ಮೊತ್ತ ಚೇಸಿಂಗ್‌ ಮಾಡಿದ ದಾಖಲೆಯನ್ನೂ RCB ಬರೆದಿದೆ.

ಚೇಸಿಂಗ್‌ ಆರಂಭಿಸಿದ ಆರ್‌ಸಿಬಿ ಬಿರುಸಿನ ಆಟಕ್ಕೆ ಮುಂದಾಯಿತು. ಮೊದಲ ವಿಕೆಟಿಗೆ ವಿರಾಟ್‌ ಕೊಹ್ಲಿ (Virat Kohli), ಸಾಲ್ಟ್‌ ಜೋಡಿ 34 ಎಸೆತಗಳಲ್ಲಿ 61 ರನ್‌ಗಳ ಜೊತೆಯಾಟ ನೀಡಿತ್ತು.

ಆದರೆ ರಜತ್ ಪಾಟೀದಾರ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌ ಒಬ್ಬರ ಹಿಂದೆ ಒಬ್ಬರು ವಿಕೆಟ್‌ ಒಪ್ಪಿಸಿದ ಪರಿಣಾಮ ಮತ್ತೆ ಆರ್‌ಸಿಬಿಗೆ ಗೆಲುವು ಅತಂಕ ಸೃಷ್ಟಿಸಿತ್ತು.

ಭರ್ಜರಿ ಅಟ

ಬಳಿಕ ಜಿತೇಶ್‌ ಶರ್ಮಾ – ಮಯಾಂಕ್‌ ಅಗರ್ವಾಲ್‌ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರು. ಮುರಿಯದ 5ನೇ ವಿಕೆಟಿಗೆ ಈ ಜೋಡಿ 45 ಎಸೆತಗಳಲ್ಲಿ ಸ್ಫೋಟಕ 107 ರನ್‌ ಬಾರಿಸಿತು. ಇದು ತಂಡದ ಗೆಲುವನ್ನು ಸುಲಭವಾಗಿಸಿತು.

ಜಿತೇಶ್‌ ಶರ್ಮಾ 33 ಎಸೆತಗಳಲ್ಲಿ 85 ರನ್‌ (6 ಸಿಕ್ಸರ್‌, 8 ಬೌಂಡರಿ) ಚಚ್ಚಿದ್ರೆ, ವಿರಾಟ್‌ ಕೊಹ್ಲಿ 54 ರನ್‌ (30 ಎಸೆತ, 10 ಬೌಂಡರಿ), ಮಯಾಂಕ್‌ ಅಗರ್ವಾಲ್‌ 41 ರನ್‌ (23 ಎಸೆತ, 5 ಬೌಂಡರಿ) ಫಿಲ್‌ ಸಾಲ್ಟ್‌ 30 ರನ್‌ (19 ಎಸೆತ, 6 ಬೌಂಡರಿ), ರಜತ್‌ ಪಾಟೀದಾರ್‌ 14 ರನ್‌ ಗಳಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!