ದೊಡ್ಡಬಳ್ಳಾಪುರ: ಶ್ರದ್ಧಾಭಕ್ತಿ ಸಂಭ್ರಮಗಳಿಂದ ಶ್ರೀ ಶನೇಶ್ವರ ಜಯಂತಿ

Doddaballapura: Sri Shaneshwara Jayanti celebrated with devotional celebrations

ದೊಡ್ಡಬಳ್ಳಾಪುರ; ನಗರದ ಖಾಸ್‍ಬಾಗ್ ದರ್ಗಾಪುರದಲ್ಲಿನ ಶ್ರೀ ರಥಸಪ್ತಮಿ ಶನೇಶ್ವರ ಸ್ವಾಮಿ (Sri Rathasaptami Shaneshwara Swamy) ದೇವಾಲಯದಲ್ಲಿ ರಜತಮಹೋತ್ಸವ ಹಾಗೂ ಶ್ರೀ ಶನೇಶ್ವರ ಜಯಂತಿಯನ್ನು (Shaneshwara Jayanti) ಶ್ರದ್ಧಾಭಕ್ತಿ ಸಂಭ್ರಮಗಳಿಂದ ನೆರವೇರಿತು.

ಕಾರ್ಯಕ್ರಮದ ಅಂಗವಾಗಿ ಅಭಿಷೇಕ, ಬೆಳ್ಳಿ ಕವಚ ಧಾರಣೆ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಮಕರ, ಕುಂಭ, ಮೀನ ರಾಶಿಯವರಿಗೆ ವಿಶೇಷವಾಗಿ ಶನೇಶ್ವರ ಶಾಂತಿ ತಿಲ ಹೋಮ ಹಮ್ಮಿಕೊಳ್ಳಲಾಗಿತ್ತು.

ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಪಸೀಹಳ್ಳಿಯ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಯಜ್ಞ ಎಂದರೆ ಜಾಗೃತಿ ಎಂದು ಅರಿಯಬೇಕಿದ್ದು, ದೇವಾಲಯಗಳಲ್ಲಿ ಬಂದು ಹೋಗುವಾಗ ನಮ್ಮ ಮನಸ್ಸುಗಳ ಪರಿವರ್ತನೆಯಾಗಿ, ಸಮಾಜ ಮುಖಿ ಚಿಂತನೆ ಮಾಡುವುದನ್ನು ರೂಢಿಸಿಕೊಳ್ಳಬೇಕು.

ಜ್ಞಾನ, ಕರ್ಮ, ಉಪಾಸನೆಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಪ್ರಕೃತಿಯಲ್ಲಿ ಭಗವಂತನನ್ನು ನಾವು ವಿವಿಧ ರೀತಿಗಳಲ್ಲಿ ಆರಾಧಿಸುತ್ತಿದ್ದರೂ, ಬೇರೆ, ಬೇರೆ ಹೆಸರುಗಳಿದ್ದರೂ ನಮ್ಮ ಭಕ್ತಿ ಸಮರ್ಪಣೆಯಾಗುವುದು ಭಗವಂತನಿಗೆ.

ದೇವಾಲಯಗಳಿಗೆ ಬಂದು ನಮ್ಮ ಜಡತ್ವ, ನಕಾರಾತ್ಮಕ ಚಿಂತನೆಗಳನ್ನು ಬಿಟ್ಟು, ಒಳ್ಳೆಯ ಆಲೋಚನೆಗಳ ಮರು ಪೂರಣ ಮಾಡಿಕೊಳ್ಳಬೇಕು. ಸರಿ,ತಪ್ಪುಗಳ ವಿವೇಚನೆ ಇರಬೇಕು. ಮಾನವೀಯತೆಯನ್ನು ನಾವು ಮರೆಯಬಾರದು.

ಧಾರ್ಮಿಕ ಕಾರ್ಯಗಳ ಜೊತೆಗೆ ಪ್ರಕೃತಿಯನ್ನು ಉಳಿಸುವ ಕೆಲಸವಾಗಬೇಕಿದ್ದು, ಹುಟ್ಟು ಹಬ್ಬ ಮೊದಲಾದ ಸಂದರ್ಭಗಳಲ್ಲಿ ಸಸಿವ ನೆಟ್ಟು ಪರಿಸರ ಸಂರಕ್ಷಿಸುವ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಕಾರ್ಯ ಕೈಗೊಳ್ಳಬೇಕು ಎಂದರು.

ಈ ವೇಳೆ ಶ್ರೀ ರಥಸಪ್ತಮಿ ಶನೇಶ್ವರ ಸ್ವಾಮಿ ದೇವಾಲಯ ಸಮಿತಿಯ ಅಧ್ಯಕ್ಷ ಡಿ.ಎನ್.ದೊಡ್ಡನರಸಪ್ಪ, ಉಪಾಧ್ಯಕ್ಷ ಪೈಲ್ವಾನ್ ಶ್ರೀನಿವಾಸ್, ಪ್ರಧಾನ ಅರ್ಚಕ ಹಾಗೂ ಸಂಸ್ಥಾಪಕ ಎಂ.ಪುಟ್ಟಯ್ಯ, ಮುಖ್ಯ ಸಲಹೆಗಾರ ಎಂ.ಎಸ್.ಮಂಜುನಾಥ್, ವ್ಯವಸ್ಥಾಪಕ ಹಾಗೂ ಅರ್ಚಕ ಪು.ಮಹೇಶ್, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನ ಕುಂಟೆ ಮೊದಲಾದವರು ಹಾಜರಿದ್ದರು.

ಕಾರ್ಯಕ್ರಮದ ಅಂಗವಾಗಿ ಗಂಗಾಧರಯ್ಯ ಅವರಿಂದ ಹರಿಕಥೆ, ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮಗಳು ನಡೆದವು.

ಸಂಜೆ ಲಲಿತಾ ಸಹಸ್ರನಾಮ, ಪ್ರಾಕಾರೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಕನಕಾಭಿಷೇಕ ಭಜನೆ ಕಾರ್ಯಕ್ರಮಗಳು ನಡೆದವು.

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]