Bengaluru as 'Asia's MRO hub

‘ಏಷ್ಯಾದ ಎಂಆರ್‌ಒ ಕೇಂದ್ರ’ವಾಗಿ ಬೆಂಗಳೂರು

ಬೆಂಗಳೂರು: ದೇವನಹಳ್ಳಿಯಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ದೇಶಿ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೊ (Indigo)- ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಸಂಪೂರ್ಣ ನವೀಕರಣದ (MRO) ಸೌಲಭ್ಯ ಆರಂಭಿಸಲು ₹1,100 ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆ ಮಾಡಲಿದೆ.

ಇಂಡಿಗೊ-ದ ಈ ಮಹತ್ವದ ನಿರ್ಧಾರವನ್ನು ಸ್ವಾಗತಿಸಿರುವ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು, ʼಅತ್ಯಾಧುನಿಕ ʼಎಂಆರ್‌ಒʼ ಸೌಲಭ್ಯಕ್ಕೆ ಇಂಡಿಗೊ ಮಾಡಲಿರುವ ಬಂಡವಾಳ ಹೂಡಿಕೆಯು, ಕರ್ನಾಟಕವನ್ನು ಏಷ್ಯಾದ ʼಎಂಆರ್‌ಒʼ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸುವ ನಮ್ಮ ಮುನ್ನೋಟವನ್ನು ಬಲಪಡಿಸಲಿದೆ. ಈ ಉಪಕ್ರಮವು ರಾಜ್ಯದಲ್ಲಿ ಉನ್ನತ ಗುಣಮಟ್ಟದ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿರುವ ಜೊತೆಗೆ ಬೆಂಗಳೂರಿನಲ್ಲಿ ಜಾಗತಿಕ ಸ್ಪರ್ಧಾತ್ಮಕ ವಿಮಾನಯಾನ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲಿದೆʼ ಎಂದು ಹೇಳಿದ್ದಾರೆ.

ʼಈ ʼಎಂಆರ್‌ಒʼ ಘಟಕ ನಿರ್ಮಾಣದಿಂದ ಬೆಂಗಳೂರು ಈಗ ʼಏಷ್ಯಾದ ಎಂಆರ್‌ಒ ಕೇಂದ್ರʼವಾಗಿ ಬೆಳೆಯಲಿದೆ. ಕರ್ನಾಟಕವು ಈಗ ವಿಮಾನಯಾನ ಮೂಲಸೌಲಭ್ಯ ಕ್ಷೇತ್ರದಲ್ಲಿ ಪ್ರಾದೇಶಿಕ ನಾಯಕತ್ವಕ್ಕೆ ಭಾಜನವಾಗಲಿದೆ.

ಕೈಗಾರಿಕಾ ಬೆಳವಣಿಗೆ ಮತ್ತು ಗರಿಷ್ಠ ಪರಿಣತಿಯ ಉದ್ಯೋಗ ಸೃಷ್ಟಿಗೆ ರಾಜ್ಯದ ಬದ್ಧತೆಯನ್ನು ಪುನರುಚ್ಚರಿಸಲಿದೆ. ವೈಮಾಂತರಿಕ್ಷ ವಲಯದ ಅಭಿವೃದ್ಧಿ ಮತ್ತು ವಿಮಾನಯಾನ ಕ್ಷೇತ್ರದ ತಯಾರಿಕೆಗೆ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಬದ್ಧವಾಗಿದೆʼ ಎಂದು ಹೇಳಿದ್ದಾರೆ.

31 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಇಂಡಿಗೊದ ʼಎಂಆರ್‌ಒʼ ಸೌಲಭ್ಯವು ಮೂಲಸೌಲಭ್ಯ, ಯಂತ್ರೋಪಕರಣ, ಘಟಕ ನಿರ್ಮಾಣ ಮತ್ತಿತರ ಉದ್ದೇಶಗಳಿಗೆ ₹ 1,100 ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆ ಮಾಡಲಿದೆ.

ಎಂಆರ್‌ಒ ಸೌಲಭ್ಯದಲ್ಲಿ ಲಭ್ಯ ಇರಲಿರುವ ಅನುಕೂಲತೆಗಳು

4 ದೊಡ್ಡ ಮತ್ತು 8 ಚಿಕ್ಕ ವಿಮಾನಗಳ ಸರ್ವೀಸ್‌ಗೆ ನೆರವಾಗಲಿರುವ 4 ಹ್ಯಾಂಗರ್‌ಗಳು.

1 ದೊಡ್ಡ ಮತ್ತು 2 ಚಿಕ್ಕ ವಿಮಾನಗಳಿಗೆ ಅವಕಾಶ ಕಲ್ಪಿಸಲಿರುವ ಒಂದು ಪೇಂಟ್‌ ಹ್ಯಾಂಗರ್‌.

ಇಂಡಿಗೊ ಹೊಸದಾಗಿ ಸೇರ್ಪಡೆ ಮಾಡಲಿರುವ ದೊಡ್ಡ ಗಾತ್ರದ ಎ350 ವಿಮಾನಗಳು ಮತ್ತು ಎ320/ಎ321ಎಕ್ಸ್‌ಎಲ್‌ಆರ್‌ ವಿಮಾನಗಳಿಗೆ ನೆರವು

ಇಂಡಿಗೊದ ಪಾಲುದಾರ ವಿಮಾನಯಾನ ಸಂಸ್ಥೆಗಳ ವಿಮಾನಗಳ ಸರ್ವೀಸ್‌ಗೂ ಅವಕಾಶ.

ಈ ʼಎಂಆರ್‌ಒʼ ಸೌಲಭ್ಯವು ಜಾಗತಿಕ ವಿಮಾನಯಾನ ಕೇಂದ್ರವಾಗಿ ಬೆಂಗಳೂರಿನ ಸ್ಥಾನಮಾನ ಹೆಚ್ಚಿಸಲಿದ್ದು, ದೇಶದ ನಾಗರಿಕ ವಿಮಾನಯಾನ ಕ್ಷೇತ್ರವನ್ನು ಬಲಪಡಿಸಲಿದೆ.

ಈ ಯೋಜನೆಯು ಎಂಜಿನಿಯರಿಂಗ್‌, ಸರಕು ಸಾಗಣೆ, ಉಗ್ರಾಣ ಮತ್ತು ಪೂರಕ ಸೇವಾಕ್ಷೇತ್ರಗಳಲ್ಲಿ 750 ನೇರ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿದೆ. 2031ರ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು 1,300 ಕ್ಕೆ ಹೆಚ್ಚಿಸಲಿದೆ.

ಎಲ್ಲಕ್ಕಿಂತ ಮುಖ್ಯವಾಗಿ, ಈ ಸೌಲಭ್ಯವು ಜಾಗತಿಕ ಪ್ರಮುಖ ಮೂಲ ಸಲಕರಣೆ ತಯಾರಿಕಾ (ಒಇಎಂ) ಕಂಪನಿಗಳು, ಪೂರೈಕೆದಾರರನ್ನು ಆಕರ್ಷಿಸಲಿದ್ದು, ಪೂರಕ ಕೈಗಾರಿಕೆಗಳಿಗೆ ಉತ್ತೇಜನ ನೀಡಲಿದೆ.

ಏರ್‌ ಇಂಡಿಯಾ, ಟಿಎಎಸ್‌ಎಲ್‌, ಎಚ್‌ಎಎಲ್‌ – ಎಂಆರ್‌ಒ ಸೌಲಭ್ಯಗಳ ಸಾಲಿಗೆ ಈಗ ಇಂಡಿಗೊ ಸೇರ್ಪಡೆಯು ವಿಮಾನಯಾನ ಕ್ಷೇತ್ರದಲ್ಲಿನ ನಾವೀನ್ಯತೆ, ತಯಾರಿಕೆ ಮತ್ತು ನಿರ್ವಹಣೆ ವಲಯಗಳಲ್ಲಿ ಕರ್ನಾಟಕವನ್ನು ಏಷ್ಯಾದಲ್ಲಿಯೇ ಆದ್ಯತಾ ತಾಣವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!