ಮೋದಿ ಸರ್ಕಾರಕ್ಕೆ ಮಗ್ಗಲ ಮುಳ್ಳಾದ ಟ್ರಂಪ್; ನನ್ನಿಂದ ಭಾರತ-ಪಾಕ್ ಚೆನ್ನಾಗಿದ್ದಾರೆಂದು ಉವಾಚ| Video ನೋಡಿ

Operation Sindoora: Trump is a thorn in the side of the Modi government

ನವದೆಹಲಿ; ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಹತ್ಯೆಗೈದ ಪಾಪಿ ಪಾಕಿಸ್ತಾನದ ಉಗ್ರರ ವಿರುದ್ಧ ಪ್ರತಿಕಾರವಾಗಿ ಭಾರತೀಯ ಸೇನೆ (Indian Army) ಆಪರೇಷನ್ ಸಿಂಧೂರ (Operation Sindoora) ಕಾರ್ಯಾಚರಣೆ ಆರಂಭಿಸಿ, ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಮರ್ಮಾಘಾತವನ್ನು ಉಂಟುಮಾಡಿತ್ತು.

ಆದರೆ ಕೇಂದ್ರದ ಮೋದಿ ಸರ್ಕಾರ (Modi government) ಭಾರತೀಯ ಸೇನೆ ಆಪರೇಷನ್ ಸಿಂಧೂರದ (Operation Sindoora) ಮೂಲಕ ದಿಟ್ಟ ಹೋರಾಟ ನಡೆಸುತ್ತಿದ್ದರೆ, ಇತ್ತ ರಾತ್ರೋರಾತ್ರಿ ಕದನ ವಿರಾಮ (Ceasefire) ಘೋಷಣೆ ಮಾಡಿಬಿಟ್ಟಿತು.

ಕೇಂದ್ರದ ಸರ್ಕಾರದ ಈ ಏಕಾಏಕಿ ನಿಲುವು ದೇಶವಾಸಿಗಳಲ್ಲಿ, ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿ, ಮೋದಿ ಸರ್ಕಾರ ವಿರೋಧ ಪಕ್ಷಗಳಿಂದ ವಾಗ್ದಾಳಿ ಎದುರಿಸಿದೆ.

ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಮಿತ್ರ, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಗಳು ಕೇಂದ್ರ ಸರ್ಕಾರವನ್ನು ಮಗ್ಗಲ ಮುಳ್ಳಾಗಿ ಕಾಡುತ್ತಿದೆ. ಪದೇ ಪದೆ ಸುದ್ದಿಗೋಷ್ಠಿ ನಡೆಸಿ, ಭಾರತ-ಪಾಕ್ ನಡುವೆ ಯುದ್ದ ನಿಲ್ಲಲು ನಾನೆ ಕಾರಣ ಎಂಬಂತೆ ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ.

ಇದು ಭಾರತದ ಸಾರ್ವಭೌಮತ್ವ, ರಕ್ಷಣೆ ವಿಚಾರದಲ್ಲಿ ಟ್ರಂಪ್ ಮೂಗು ತೂರಿಸಲು ಅವಕಾಶ ಕೊಟ್ಟವರು ಯಾರು..? ಆತನ ವ್ಯಾಪಾರ ವಹಿವಾಟು ಆಸೆ ತೋರಿಸಿದ್ದು ಯಾರಿಗೆ..? ಎಂಬ ಪ್ರಶ್ನೆಗೆ ಕಾರಣವಾಗಿ ವಿರೋಧ ಪಕ್ಷಗಳ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರಿಸಲಾಗದ ಸ್ಥಿತಿ ಎದುರಾಗಿದೆ.

ಇನ್ನೂ ನಿನ್ನೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂಧೂರ ನಿಂತಿಲ್ಲ, ಇದು ವಿರಾಮವಷ್ಟೇ ಎಂದಿದ್ದಾರೆ. ಆದರೆ ಬೆನ್ನಲ್ಲೇ ಇಂದು ಕೂಡ ಟ್ರಂಪ್ ಮತ್ತೆ ಮೂಗು ತೂರಿಸಿದ್ದು, ನನ್ನಿಂದ ಭಾರತ-ಪಾಕ್ ಇಬ್ಬರೂ ಈಗ ಚೆನ್ನಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನಾವು ಭಾರತದೊಂದಿಗೆ ವ್ಯವಹರಿಸುತ್ತಿದ್ದೇವೆ, ಪಾಕಿಸ್ತಾನದೊಂದಿಗೆ ವ್ಯವಹರಿಸುತ್ತಿದ್ದೇವೆ ಮತ್ತು ಸಂಭಾವ್ಯ ಪರಮಾಣು ಯುದ್ಧವನ್ನು ವ್ಯಾಪಾರದ ಮೂಲಕ ನಿಲ್ಲಿಸಲು ಸಾಧ್ಯವಾಯಿತು ಎಂಬ ಅಂಶದ ಬಗ್ಗೆ ನನಗೆ ಅತ್ಯಂತ ಹೆಮ್ಮೆಯಿದೆ ಎಂದು ನಾನು ಭಾವಿಸುತ್ತೇನೆ.

ಸಾಮಾನ್ಯವಾಗಿ ಅವರು ಅದನ್ನು ಗುಂಡುಗಳ ಮೂಲಕ ಮಾಡುತ್ತಾರೆ. ನಾವು ಅದನ್ನು ವ್ಯಾಪಾರದ ಮೂಲಕ ಮಾಡುತ್ತೇವೆ. ಹಾಗಾಗಿ ನನಗೆ ಅದರ ಬಗ್ಗೆ ತುಂಬಾ ಹೆಮ್ಮೆ ಇದೆ.

ಯಾರೂ ಅದರ ಬಗ್ಗೆ ಮಾತನಾಡುವುದಿಲ್ಲ. ಆದರೆ ಪಾಕಿಸ್ತಾನ ಮತ್ತು ಭಾರತದ ನಡುವೆ ನಮಗೆ ತುಂಬಾ ತೀವ್ರರೂಪದ ಸಂಭಾವ್ಯ ಯುದ್ಧ ನಡೆಯುತ್ತಿತ್ತು. ಮತ್ತು ಈಗ, ನೀವು ನೋಡಿದರೆ, ಅವರು ಚೆನ್ನಾಗಿದ್ದಾರೆ ಎಂದಿದ್ದಾರೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]