Hemavati Express Canal; MLA Dr. H.D. Ranganath says he is ready for a fierce fight

ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್; ಉಗ್ರ ಹೋರಾಟಕ್ಕೂ ಸಿದ್ಧವೆಂದ ಶಾಸಕ ಡಾ.ಎಚ್.ಡಿ.ರಂಗನಾಥ್

ಕುಣಿಗಲ್: “ಕುಣಿಗಲ್ ತಾಲೂಕು ಆರಂಭದಿಂದಲೂ ಹೇಮಾವತಿ ನೀರಿನ ತನ್ನ ಪಾಲು 3.01 ಟಿಎಂಸಿ ನೀರನ್ನು ಪಡೆಯಲು ವಂಚಿತವಾಗಿದ್ದು, ಈ ಪಾಲಿನ ನೀರು ಪಡೆಯಲು ಲಿಂಕ್ ಕೆನಾಲ್ ಯೋಜನೆ ಅನಿವಾರ್ಯ. ಇದಕ್ಕಾಗಿ ಉಗ್ರ ಹೋರಾಟಕ್ಕೂ ಸಿದ್ಧ” ಎಂದು ಶಾಸಕ ಡಾ.ಎಚ್.ಡಿ.ರಂಗನಾಥ್ (Dr.H.D.Ranganath) ತಿಳಿಸಿದ್ದಾರೆ.

“ವೈ.ಕೆ. ರಾಮಯ್ಯ ಅವರ ಹೋರಾಟದ ಫಲವಾಗಿ ತುಮಕೂರು ಜಿಲ್ಲೆಯು ಹೇಮಾವತಿ ನೀರಿನ ಶೇ.49 ರಷ್ಟು ಪಾಲನ್ನು ಪಡೆಯುತ್ತಿದೆ. ಹೇಮಾವತಿ ಹೋರಾಟದ ತವರು ಕುಣಿಗಲ್ ತಾಲೂಕು. ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಟ್ಟ ಮೂಲ ಫಲಾನುಭವಿಗಳಾಗಿದ್ದರೂ ತಾಲೂಕು ತನ್ನ ಪಾಲಿನ ನೀರು ಪಡೆಯಲು ಸಾಧ್ಯವಾಗಿಲ್ಲ. ಕಳೆದ ಹತ್ತು ವರ್ಷಗಳಲ್ಲಿ ನಮಗೆ ಹರಿದಿರುವುದು ಕೇವಲ 300- 500 ಎಂಸಿಎಫ್ ನೀರು ಮಾತ್ರ. ಅಂದರೆ ಶೇ. 90 ನೀರು ನಮಗೆ ಬಂದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಅನ್ಯಾಯ ಸರಿಪಡಿಸಿ ಕುಣಿಗಲ್ ತಾಲ್ಲೂಕಿನ ಜನತೆಗೆ ತಮ್ಮ ಪಾಲಿನ ನೀರನ್ನು ಹರಿಸಲು 2018ರಲ್ಲಿ ಈ ಲಿಂಕ್ ಕೆನಾಲ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಯಿತು. ಹಲವಾರು ಕಾರಣಗಳಿಂದಾಗಿ ಕಾಮಗಾರಿಯು ವಿಳಂಭವಾಗಿತ್ತು. ಈ ಎಲ್ಲಾ ಅಡೆ-ತಡೆಗಳನ್ನು ಮೀರಿ ಕಾಮಗಾರಿಯು ಪ್ರಾರಂಭವಾಗಿ ಕುಣಿಗಲ್ ಜನತೆಯ ದಶಕಗಳ ಕನಸು ನನಸಾಗುವ ಹೊತ್ತಿನಲ್ಲಿ ಈ ಯೋಜನೆ ವಿರೋಧಿಸಿ ಹೋರಾಟಗಳು ನಡೆಯುತ್ತಿರುವುದು ವಿಷಾದನೀಯ ಸಂಗತಿ” ಎಂದು ಹೇಳಿದ್ದಾರೆ.

“ಕುಣಿಗಲ್ ತಾಲೂಕಿನ ಜನ ತನ್ನ ಪಾಲಿನ ನೀರು ಸಿಗದೇ ಇದ್ದರೂ, ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಡದೇ ಇರುವ ಜಿಲ್ಲೆಯ ಕೆಲವು ತಾಲ್ಲೂಕುಗಳ ಭಾಗಗಳಿಗೆ ಕುಡಿಯುವ ನೀರಿಗಾಗಿ ಹೇಮಾವತಿ ನೀರನ್ನು ಹಂಚಿಕೆ ಮಾಡಿದಾಗಲೂ ಯಾವುದೇ ವಿರೋಧ ವ್ಯಕ್ತಪಡಿಸದೇ ಔದಾರ್ಯತೆ ತೋರಿ ಸೌಹಾರ್ದತೆ ಮೆರೆದಿದ್ದರು. ಆದರೆ ಇಂದು ನಮ್ಮ ಪಾಲಿನ ನೀರನ್ನು ಪಡೆಯಲು ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ಅಡ್ಡಿಯುಂಟು ಮಾಡುತ್ತಿರುವುದು ಅತೀವ ನೋವಿನ ಸಂಗತಿಯಾಗಿದೆ” ಎಂದು ತಿಳಿಸಿದ್ದಾರೆ.

ಈ ಲಿಂಕ್ ಕೆನಾಲ್ ಪೈಪ್‌ಲೈನ್ ಕಾಮಗಾರಿಯನ್ನು ಕೇವಲ ಕುಣಿಗಲ್ ತಾಲ್ಲೂಕಿಗೆ ಹಂಚಿಕೆಯಾಗಿರುವ 388 ಕ್ಯೂಸೆಕ್ಸ್ ನೀರು ಮಾತ್ರ ಹರಿಸಲು ಸಾಧ್ಯವಾಗುವಂತೆ ಮಾತ್ರ ವಿನ್ಯಾಸಗೊಳಿಸಲಾಗಿದ್ದು, ಕುಣಿಗಲ್ ತಾಲ್ಲೂಕಿನ ಪಾಲಿನ ನೀರನ್ನು ಮಾತ್ರ ಕುಣಿಗಲ್ ತಾಲ್ಲೂಕಿಗೆ ಹರಿಸುವುದು ಲಿಂಕ್ ಕೆನಾಲ್ ಕಾಮಗಾರಿಯ ಏಕೈಕ ಉದ್ದೇಶವ. ಇದರಿಂದ ಜಿಲ್ಲೆಯ ಇತರೇ ತಾಲ್ಲೂಕುಗಳ ಪಾಲಿನ ನೀರಿಗೆ ಯಾವುದೇ ದಕ್ಕೆಯಾಗುವುದಿಲ್ಲ. ಇದೇ ವಿಚಾರವಾಗಿ ಅಧ್ಯಯನಕ್ಕಾಗಿ ಸರ್ಕಾರ ರಚಿಸಿದ್ದ ತಜ್ಞರ ಸಮಿತಿಯು ಸಹ ಈ ಯೋಜನೆ ಅಗತ್ಯತೆ ಹಾಗೂ ಇತರೆ ತಾಲೂಕಿನ ನೀರಿಗೆ ಧಕ್ಕೆಯಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು” ಎಂದಿದ್ದಾರೆ.

“ಕೆಲವು ಪಟ್ಟಭದ್ರರು ತಮ್ಮ ರಾಜಕೀಯ ಸ್ವಹಿತಾಸಕ್ತಿಗಳಿಗೆ ಯೋಜನೆ ಬಗ್ಗೆ ಅಪಪ್ರಚಾರ ಮಾಡುತ್ತಾ, ಜಿಲ್ಲೆಯ ಜನತೆಯ ಮಧ್ಯೆ ದ್ವೇಷದ ಬೀಜ ಬಿತ್ತಲು ಮುಂದಾಗಿದ್ದಾರೆ. ಜಿಲ್ಲೆಯ ರೈತ ಬಾಂಧವರು ಮತ್ತು ಸಂಘ-ಸಂಸ್ಥೆಗಳು ಇಂತಹ ರಾಜಕೀಯ ಸ್ವಹಿತಾಸಕ್ತಿಯ ಅಪಪ್ರಚಾರಗಳಿಗೆ ಕಿವಿಗೊಡದೇ ಕುಣಿಗಲ್ ತಾಲ್ಲೂಕಿನ ಜನತೆಗೆ ತಮ್ಮ ಪಾಲಿನ ನೀರನ್ನು ಪಡೆಯಲು ಕೈಗೊಂಡಿರುವ ಲಿಂಕ್ ಕೆನಾಲ್ ಕಾಮಗಾರಿಗೆ ಅಡ್ಡಿಪಡಿಸದೇ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಈ ಯೋಜನೆ ಜಾರಿಗೆ ಸರಿಯಾಗಿ ಸಹಕಾರ ಸಿಗದಿದ್ದರೆ, ಜಿಲ್ಲೆಯ ಮಗನಾಗಿ ಕುಣಿಗಲ್ ತಾಲೂಕಿನ ಜನತೆ ಪರವಾಗಿ ಉಗ್ರ ಹೋರಾಟ ಮಾಡಲು ಸಿದ್ಧನಿದ್ದೇನೆ” ಎಂದು ಮಾಧ್ಯಮ ಪ್ರಕಟಣೆ ಮೂಲಕ ಸಂದೇಶ ರವಾನಿಸಿದ್ದಾರೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!