ದೊಡ್ಡಬಳ್ಳಾಪುರ: ಕ್ಯಾನ್ಸರ್ (Cancer) ಸಮಸ್ಯೆಯಿಂದ ಬಳಲುತ್ತಿದ್ದ ತಾಲೂಕಿನ ಕಂಚಿನಾಳ ಗ್ರಾಮದ ಮಹಿಳೆಯೋರ್ವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ (Dharmasthala) ಆರ್ಥಿಕ ನೆರವನ್ನು ನೀಡಲಾಗಿದೆ.
ಕ್ರಿಟಿಕಲ್ ಇಲ್ ನೆಸ್ ಫಂಡ್ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದಿಂದ ರೂ.25,000 ಗಳನ್ನು ಕ್ಯಾನ್ಸರ್ ಪೀಡಿತ ಮಹಿಳೆಯ ಚಿಕಿತ್ಸೆಗಾಗಿ ಮಂಜೂರಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಉಮಾರಬ್ಬ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ದಿನೇಶ್, ಗ್ರಾಮ ಪಂಚಾಯತಿ ಸದಸ್ಯ ಮಧು, ವಲಯದ ಮೇಲ್ವಿಚಾರಕರಾದ ರಘು,
ಸೇವಾ ಪ್ರತಿನಿಧಿ ಸರ್ವೇಶ್ ಮತ್ತಿತರರಿದ್ದರು.