ಈ ಸಲ ಕಪ್ ನಮ್ದು: RCB ಅಭಿಮಾನ ಮೆರೆದ ಗಣ್ಯರು

Celebrities who are fans of RCB

ಬೆಂಗಳೂರು: ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆ ಯಂತೆಯೇ 18ನೇ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.

ಈ ಮೂಲಕ ಕಳೆದ 18 ವರ್ಷಗಳಿಂದ ‘ ಈ ಸಲ ಕಪ್ ನಮ್ದೇ’ ಎಂದು ಗುನುಗುನಿಸುತ್ತಿದ್ದ ಅಭಿಮಾನಿಗಳ ಕನಸನ್ನು ‘ಈ ಸಲ ಕಪ್ ನಮ್ದು‘ ಎನ್ನುವಂತೆ ಸಾಕಾರ ಗೊಳಿಸಿದೆ.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ ಗಳ ಅಂತರದಲ್ಲಿ ಮಣಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಕಪ್ ಕನಸು ನನಸಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಸಂಭ್ರಮ ತಾಳಲಾರದೆ ಕಣ್ಣೀರಿಟ್ಟರು. ಈ ಗೆಲುವಿಗೆ ಎಬಿ ಡಿವಿಲಯರ್ಸ್, ಕ್ರಿಸ್‌ಗೇಲ್ ಸಾಕ್ಷಿಯಾದರು.

ಗೆಲುವು ಖಚಿತವಾಗುತ್ತಿದ್ದಂತೆ RCB ಅಭಿಮಾನಿಗಳ ತಾಳ್ಮೆಯ ಕಟ್ಟೆ ಹೊಡೆದು ಹೋಗಿದೆ. ನಡು ರಾತ್ರಿಯೇ ರಸ್ತೆಗಿಳಿದು ಪಟಾಹಿ ಕೊಡೆದು, ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿ ಸಂಭಮಾಚರಣೆ ಮಾಡಿದ್ದಾರೆ.

ಈ ಗೆಲುವಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ತಮಿಳುನಾಡಿನ ಎಲ್‌ಕೆ ಸ್ಟಾಲಿನ್, ತೆಲುಗು ಚಿತ್ರ ನಟ ಅಲ್ಲು ಅರವಿಂದ್ ಸೇರಿದಂತೆ ಅನೇಕರು ಶುಭಕೋರಿ ಟ್ವಿಟ್ ಮಾಡಿ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ‌.

ಸಿಎಂ ಸಿದ್ದರಾಮಯ್ಯ

Rrrrrrrrr…. Cccccccc…. Bbbbbbbbb….

ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಟ್ವಿಟ್ ಮಾಡಿದ್ದಾರೆ.

ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ.

ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.

ಇದು ಇತಿಹಾಸ ಸೃಷ್ಟಿಸಿದ ದಿನ..
ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದಿದ್ದಾರೆ..

ಡಿಸಿಎಂ ಡಿಕೆ ಶಿವಕುಮಾರ್

ಟಿ-20 ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮಣಿಸಿ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

18 ವರ್ಷಗಳ ಕನಸು ನನಸು ಮಾಡಿದ ಆರ್ ಸಿ ಬಿ ತಂಡಕ್ಕೆ ಹೃತ್ಪೂರ್ವಕ ಶುಭಾಶಯ ಹೇಳಿರುವ ಡಿ ಕೆ ಶಿವಕುಮಾರ್ ಅವರು, “ಈ ಸಲ ಕಪ್ ನಮ್ದೇ..” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಲ ಕಪ್ ನಮ್ದು: RCB ಅಭಿಮಾನ ಮೆರೆದ ಗಣ್ಯರು

ಬೆಂಗಳೂರಿನಲ್ಲಿ ಟಿವಿ ಪರದೆ ಮೂಲಕ ಪಂದ್ಯ ವೀಕ್ಷಿಸಿದ ಡಿಸಿಎಂ ಅವರು ಆರ್ ಸಿ ಬಿ ಗೆಲ್ಲುತ್ತಿದ್ದಂತೆ ಸಂಭ್ರಮ ಆಚರಿಸಿದರು.

ಈ ಒಂದು ಶುಭ ದಿನ, ಶುಭ ಘಳಿಗೆಗಾಗಿ ಇಡೀ ಕರ್ನಾಟಕ ಹಂಬಲಿಸಿತ್ತು. ಇದನ್ನು ಸಾಕಾರಗೊಳಿಸಿದ ರಜತ್ ಪಟೀದಾರ್ ಹಾಗೂ ವಿರಾಟ್ ಕೊಹ್ಲಿ ಅವರ ತಂಡಕ್ಕೆ ಮಾಧ್ಯಮ ಹೇಳಿಕೆಯಲ್ಲಿ ಶುಭ ಹಾರೈಸಿದ್ದಾರೆ.

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

ಐಪಿಎಲ್ 2025 ಟೂರ್ನಿಯಲ್ಲಿ ರೋಚಕ ಗೆಲುವು ಸಾಧಿಸಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಸಲ ಕಪ್ ನಮ್ದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ತಂಡ ಸ್ಪೂರ್ತಿಯಿಂದ ಆಡಿದ ಪಟಿದಾರ್ ಪಡೆಯನ್ನು ಹಾಗೂ ವಿಶೇಷವಾಗಿ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಆರ್ ಸಿಬಿ ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ.

ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

“ಈ ಸಲ ಕಪ್ ನಮ್ಮದೇ” 💛♥️

ಅಂತಿಮ #IPL ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಪ್ರಚಂಡ ಗೆಲುವಿನ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ #RCB ತಂಡಕ್ಕೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಭಕೋರಿದ್ದಾರೆ.

18 ವರ್ಷಗಳ ಕನ್ನಡಿಗರ ಕಾಯುವಿಕೆ, ದೇಶದ ಕ್ರಿಕೆಟ್ ಅಭಿಮಾನಿಗಳ ಹಾರೈಕೆಗೆ ತಕ್ಕ ಪ್ರತಿಫಲ ದೊರೆತಿದೆ. ತಮ್ಮ ನಿರಂತರ ಪರಿಶ್ರಮ ಹಾಗೂ ವಿರೋಚಿತ ಆಟದೊಂದಿಗೆ ಕನ್ನಡಿಗರ ಮನೆ ಮನ ಗೆದ್ದ ಪ್ರತಿಯೊಬ್ಬ ಆರ್.ಸಿ.ಬಿ ಆಟಗಾರರಿಗೂ ಅನಂತ ಅಭಿನಂದನೆಗಳು.

ಈಗ ವಿಶ್ವ ಕ್ರಿಕೆಟ್ ಪ್ರೇಮಿಗಳೂ ಸಂಭ್ರಮಿಸಿ ಹೇಳುತ್ತಿದ್ದಾರೆ ‘ಕಪ್ ನಮ್ಮದೇ’ ಎಂದು‌ ಟ್ವಿಟ್ ಮಾಡಿದ್ದಾರೆ.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ವೆಲ್ಡನ್ @RCBTweets! ಅಚ್ಚರಿಗಳಿಂದ ತುಂಬಿದ ಋತುವಿಗೆ ರೋಮಾಂಚಕ ಅಂತ್ಯ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಶುಭಕೋರಿದ್ದಾರೆ.

ವಿರಾಟ್ ಕೊಹ್ಲಿ, ನೀವು ವರ್ಷಗಳಿಂದ ಈ ಕನಸನ್ನು ಹೊತ್ತುಕೊಂಡಿದ್ದೀರಿ ಮತ್ತು ಇಂದು ರಾತ್ರಿ, ಕಿರೀಟವು ನಿಮಗೆ ನಿಜವಾಗಿಯೂ ಸರಿಹೊಂದುತ್ತದೆ. #KingKohli 👑

ಮುಂದಿನ ಋತುವಿನಲ್ಲಿ ಚೆನ್ನೈ ತಂಡ (CSK) ಬಲವಾದ ಪುನರಾಗಮನವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ಅವರು ಟ್ವಿಟ್ ಮಾಡಿದ್ದಾರೆ.

ಅಲ್ಲು ಅರ್ಜುನ್

ಕಾಯುವಿಕೆ ಮುಗಿಯಿತು. “ಈ ಸಲಾ ಕಪ್ ನಮ್ದೇ!” ಎಂದು ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಶುಭಕೋರಿದ್ದಾರೆ.

ಕೊನೆಗೂ! ❤️ ನಾವು 18 ವರ್ಷಗಳಿಂದ ಈ ದಿನಕ್ಕಾಗಿ ಕಾಯುತ್ತಿದ್ದೇವೆ.
ಆರ್‌ಸಿಬಿಗೆ ಅಭಿನಂದನೆಗಳು! ❤️ ಎಂದವರು ಟ್ವಿಟ್ ಮಾಡಿದ್ದಾರೆ.

ರಾಜಕೀಯ

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

"ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ

[ccc_my_favorite_select_button post_id="120925"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]