Our children, who were supposed to survive, were trampled to death: DK Shivakumar

ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾದರು: ಡಿಕೆ ಶಿವಕುಮಾರ್ ಭಾವುಕ

ಬೆಂಗಳೂರು: “ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ಲೋಪದೋಷ ಸರಿಪಡಿಸಲಾಗುವುದು. ಇದರಿಂದ ನಾವು ಪಾಠವನ್ನು ಕಲಿಯಬೇಕಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭಾವುಕರಾದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬುಧವಾರ ನಡೆದ ದುರ್ಘಟನೆ ಬಗ್ಗೆ ಕೇಳಿದಾಗ, ನಮ್ಮ ರಾಜ್ಯದಲ್ಲಿ ಇಂತಹ ದುರ್ಘಟನೆ ನಡೆಯುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆರ್ ಸಿಬಿ ತಂಡ ಬೆಂಗಳೂರಿಗೆ ಬರುತ್ತಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ನಮ್ಮ ಸರ್ಕಾರದ ಮುಂದೆ ಬೇರೆ ಆಯ್ಕೆ ಇರಲಿಲ್ಲ.

ಈ ದುರ್ಘಟನೆ ನಡೆದಿರುವುದು ನಮ್ಮ ಕುಟುಂಬದಲ್ಲೇ ಎಂದು ಭಾವಿಸಿದ್ದೇವೆ. ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ.

ಈ ನೋವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಸತ್ತವರು ನಮ್ಮ ಕುಟುಂಬದ ಸದಸ್ಯರು. ಈ ಪರಿಸ್ಥಿತಿಯಲ್ಲಿ ನಾವು ಸಂತಾಪ ಸೂಚಿಸಬೇಕು. ರಾಜಕೀಯ ಮಾಡಬಾರದು. ಈ ದುರ್ಘಟನೆಯ ಹೊಣೆಯನ್ನು ಒಬ್ಬರೂ ಇಬ್ಬರ ಮೇಲೆ ಹಾಕಲು ಆಗುವುದಿಲ್ಲ ಎಂದು ತಿಳಿಸಿದರು.

18 ವರ್ಷಗಳ ಕಾಲ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಲ್ಲಿ ಸಂತೋಷ ಕಟ್ಟೆಯೊಡೆದಿತ್ತು. ಹೀಗಾಗಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದರು ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ನಿನ್ನೆ ಆಸ್ಪತ್ರೆಯಲ್ಲಿ ಮೃತರ ಪೋಷಕರು ಮರಣೋತ್ತರ ಪರೀಕ್ಷೆ ಮಾಡಬೇಡಿ. ನಮ್ಮ ಮಗುವಿನ ಮೃತದೇಹ ನಮಗೆ ಕೊಡಿ ಎಂದು ಅಂಗಲಾಚಿದರು. ನಾವು ಆ ರೀತಿ ಪರೀಕ್ಷೆ ಮಾಡದೇ ಮೃತದೇಹವನ್ನು ಹಸ್ತಾಂತರ ಮಾಡಲು ಹೇಗೆ ಸಾಧ್ಯ? ಇದರಿಂದ ನಾಳೆ ಕಾನೂನಾತ್ಮಕ ಸಮಸ್ಯೆಗಳು ಎದುರಾಗುತ್ತವೆ. ಈ ಸಾವು ಯಾವ ಕಾರಣಕ್ಕೆ ಆಗಿದೆ ಎಂಬ ವೈಜ್ಞಾನಿಕ ವರದಿ ಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ರಾಜಕೀಯ ಮಾಡುವುದರಲ್ಲಿ ಅವರು ಮಾಸ್ಟರ್ ಮೈಂಡ್

ಬಿಜೆಪಿಯವರ ಟೀಕೆ ಬಗ್ಗೆ ಕೇಳಿದಾಗ, ಈ ವಿಚಾರದಲ್ಲಿ ನಾನು ರಾಜ್ಯದ ಜನತೆಗೆ ಉತ್ತರ ನೀಡಬೇಕೇ ಹೊರತು, ಬಿಜೆಪಿಯವರ ಹೇಳಿಕೆಗೆ ಉತ್ತರಿಸುವ ಅಗತ್ಯವಿಲ್ಲ. ಅವರ ಹೇಳಿಕೆಗಳು ಅಸಂಬದ್ಧ, ರಾಜಕೀಯ ಮಾಡುವುದರಲ್ಲಿ ಅವರು ಮಾಸ್ಟರ್ ಮೈಂಡ್ ಗಳು ಎಂದು ತಿಳಿಸಿದರು.

ಕುಮಾರಸ್ವಾಮಿ ಹಾಗೂ ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಇದೇ ಅವರ ವೃತ್ತಿ. ಅವರ ಆಡಳಿತ ಅವಧಿಯಲ್ಲಿ ಏನೆಲ್ಲಾ ಆಗಿದೆ ಎಂದು ಪಟ್ಟಿ ನೀಡಬಹುದು. ಆದರೆ ಅವರ ಮಟ್ಟಕ್ಕೆ ಇಳಿದು ರಾಜಕಾರಣ ಮಾಡಲು ನನಗೆ ಇಚ್ಛೆ ಇಲ್ಲ. ಆದರೆ ಬಾಳಿ ಬದುಕಬೇಕಾಗಿದ್ದ 14-15 ವರ್ಷದ ಮಕ್ಕಳು ಸತ್ತಿರುವುದನ್ನು ಕಣ್ಣಾರೆ ನೋಡಿದ್ದೇನೆ. ಇದನ್ನು ಯಾವುದೇ ಕುಟುಂಬ ಅರಗಿಸಿಕೊಳ್ಳಲು ಸಾಧ್ಯವಿಲ್ಲ.

ಪೊಲೀಸ್ ಆಯುಕ್ತರು ಈ ಕಾರ್ಯಕ್ರಮವನ್ನು 10 ನಿಮಿಷಗಳಲ್ಲಿ ಮುಗಿಸಿ ಎಂದು ಹೇಳಿದರು. ನಾನು ಕೂಡ ಆರ್ ಸಿಬಿ ತಂಡದ ಜೊತೆ ಮಾತನಾಡಿ ಕಾರ್ಯಕ್ರಮವನ್ನು ಮೊಟಕುಗೊಳಿಸಲಾಯಿತು ಎಂದು ಭಾವುಕರಾದರು.

ಕೆಎಸ್ ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕೆಎಸ್ ಸಿಎಗೆ ಹೋಗಲು ಸಾಧ್ಯವಾದಾಗ ನನ್ನ ಕಾರಿನಲ್ಲೇ ಅವರನ್ನು ಕರೆದುಕೊಂಡು ಹೋಗಬೇಕಾಯಿತು. ಕ್ರೀಡಾಂಗಣಕ್ಕೆ ಹೋಗುವಾಗ ಈ ರೀತಿ ದುರ್ಘಟನೆ ನಡೆದಿದೆ ಎಂದು ಮಾಧ್ಯಮ ಸ್ನೇಹಿತರು ನನಗೆ ಮಾಹಿತಿ ನೀಡಿದರು. ನಂತರ ಆಯುಕ್ತರು ನನಗೆ ಮಾಹಿತಿ ನೀಡಿದರು ಎಂದರು.

ಅಧಿವೇಶನದಲ್ಲಿ ಚರ್ಚೆಗೆ ಬಂದಾಗ ಅವರ ಕಾಲದ ಘಟನೆಗಳ ಬಗ್ಗೆ ಪ್ರಸ್ತಾಪಿಸುತ್ತೇನೆ

ಈ ಘಟನೆ ಬಗ್ಗೆ ರಾಜಕೀಯದವರು ಏನೇ ಟೀಕೆ ಮಾಡಿದರೂ ಲೆಕ್ಕ ಇಲ್ಲ. ಅವರ ಚೇಷ್ಟೆ ಇದ್ದಿದ್ದೆ. ಸಿ.ಟಿ ರವಿ, ಕುಮಾರಸ್ವಾಮಿ, ಅಶೋಕ್ ಸೇರಿದಂತೆ ಎಲ್ಲರದ್ದು ಕೇವಲ ರಾಜಕಾರಣ. ಇದೆಲ್ಲದಕ್ಕೂ ಬೇರೆ ಸಮಯದಲ್ಲಿ ಚರ್ಚೆ ಮಾಡುತ್ತೇನೆ. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಅವರ ಕಾಲದಲ್ಲಿ ಏನಾಗಿತ್ತು ಎಂದು ನಾನು ಪ್ರಸ್ತಾಪ ಮಾಡುತ್ತೇನೆ.

ಈಗ ರಾಜಕಾರಣ ಮಾಡುವುದಿಲ್ಲ. ಮಾಧ್ಯಮದವರು ಕೂಡ ಈ ಸಂದರ್ಭದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಬೇಡಿ. ರಾಜಕುಮಾರ್ ಅವರು ಸತ್ತಾಗ ಏನೆಲ್ಲಾ ಆಯಿತು ಎಂದು ನಾನು ಈಗ ಮಾತನಾಡಲು ಬಯಸುವುದಿಲ್ಲ. ಅಂತಹ ನೀಚ ರಾಜಕಾರಣ ಮಾಡಲು ನನಗೆ ಇಷ್ಟವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸದಾ ಹೆಣದ ಮೇಲೆ ರಾಜಕೀಯ ಮಾಡುತ್ತಾರೆ. ಇದೇ ಅವರ ರಾಜಕೀಯ ಅಜೆಂಡಾ ಎಂದು ತಿರುಗೇಟು ನೀಡಿದರು.

ಈ ಸಾವಿಗೆ ನೀವೇ ಹೊಣೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಕೇಳಿದಾಗ, ಕುಮಾರಸ್ವಾಮಿಗೆ ನಾನು ಆಮೇಲೆ ಉತ್ತರ ನೀಡುತ್ತೇನೆ. ನಾನು ಕನಕಪುರದಲ್ಲಿ ನ್ಯಾಯಾಲಯ ವಿಚಾರಣೆ ಹಾಜರಾಗಿದ್ದೆ. ಪೊಲೀಸ್ ಅಧಿಕಾರಿಗಳು ಮೆರವಣಿಗೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದ ತಕ್ಷಣವೇ ನಾನು ಬೆಂಗಳೂರಿನತ್ತ ಧಾವಿಸಿದೆ. ಜನ ಬರುವುದನ್ನು ತಡೆಯಲು ಮೆಟ್ರೋ ಸಂಚಾರವನ್ನೇ ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]