Our children, who were supposed to survive, were trampled to death: DK Shivakumar

ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾದರು: ಡಿಕೆ ಶಿವಕುಮಾರ್ ಭಾವುಕ

ಬೆಂಗಳೂರು: “ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ಲೋಪದೋಷ ಸರಿಪಡಿಸಲಾಗುವುದು. ಇದರಿಂದ ನಾವು ಪಾಠವನ್ನು ಕಲಿಯಬೇಕಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭಾವುಕರಾದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಬುಧವಾರ ನಡೆದ ದುರ್ಘಟನೆ ಬಗ್ಗೆ ಕೇಳಿದಾಗ, ನಮ್ಮ ರಾಜ್ಯದಲ್ಲಿ ಇಂತಹ ದುರ್ಘಟನೆ ನಡೆಯುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆರ್ ಸಿಬಿ ತಂಡ ಬೆಂಗಳೂರಿಗೆ ಬರುತ್ತಿರುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ನಮ್ಮ ಸರ್ಕಾರದ ಮುಂದೆ ಬೇರೆ ಆಯ್ಕೆ ಇರಲಿಲ್ಲ.

ಈ ದುರ್ಘಟನೆ ನಡೆದಿರುವುದು ನಮ್ಮ ಕುಟುಂಬದಲ್ಲೇ ಎಂದು ಭಾವಿಸಿದ್ದೇವೆ. ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ.

ಈ ನೋವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಸತ್ತವರು ನಮ್ಮ ಕುಟುಂಬದ ಸದಸ್ಯರು. ಈ ಪರಿಸ್ಥಿತಿಯಲ್ಲಿ ನಾವು ಸಂತಾಪ ಸೂಚಿಸಬೇಕು. ರಾಜಕೀಯ ಮಾಡಬಾರದು. ಈ ದುರ್ಘಟನೆಯ ಹೊಣೆಯನ್ನು ಒಬ್ಬರೂ ಇಬ್ಬರ ಮೇಲೆ ಹಾಕಲು ಆಗುವುದಿಲ್ಲ ಎಂದು ತಿಳಿಸಿದರು.

18 ವರ್ಷಗಳ ಕಾಲ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಲ್ಲಿ ಸಂತೋಷ ಕಟ್ಟೆಯೊಡೆದಿತ್ತು. ಹೀಗಾಗಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದರು ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ನಿನ್ನೆ ಆಸ್ಪತ್ರೆಯಲ್ಲಿ ಮೃತರ ಪೋಷಕರು ಮರಣೋತ್ತರ ಪರೀಕ್ಷೆ ಮಾಡಬೇಡಿ. ನಮ್ಮ ಮಗುವಿನ ಮೃತದೇಹ ನಮಗೆ ಕೊಡಿ ಎಂದು ಅಂಗಲಾಚಿದರು. ನಾವು ಆ ರೀತಿ ಪರೀಕ್ಷೆ ಮಾಡದೇ ಮೃತದೇಹವನ್ನು ಹಸ್ತಾಂತರ ಮಾಡಲು ಹೇಗೆ ಸಾಧ್ಯ? ಇದರಿಂದ ನಾಳೆ ಕಾನೂನಾತ್ಮಕ ಸಮಸ್ಯೆಗಳು ಎದುರಾಗುತ್ತವೆ. ಈ ಸಾವು ಯಾವ ಕಾರಣಕ್ಕೆ ಆಗಿದೆ ಎಂಬ ವೈಜ್ಞಾನಿಕ ವರದಿ ಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ರಾಜಕೀಯ ಮಾಡುವುದರಲ್ಲಿ ಅವರು ಮಾಸ್ಟರ್ ಮೈಂಡ್

ಬಿಜೆಪಿಯವರ ಟೀಕೆ ಬಗ್ಗೆ ಕೇಳಿದಾಗ, ಈ ವಿಚಾರದಲ್ಲಿ ನಾನು ರಾಜ್ಯದ ಜನತೆಗೆ ಉತ್ತರ ನೀಡಬೇಕೇ ಹೊರತು, ಬಿಜೆಪಿಯವರ ಹೇಳಿಕೆಗೆ ಉತ್ತರಿಸುವ ಅಗತ್ಯವಿಲ್ಲ. ಅವರ ಹೇಳಿಕೆಗಳು ಅಸಂಬದ್ಧ, ರಾಜಕೀಯ ಮಾಡುವುದರಲ್ಲಿ ಅವರು ಮಾಸ್ಟರ್ ಮೈಂಡ್ ಗಳು ಎಂದು ತಿಳಿಸಿದರು.

ಕುಮಾರಸ್ವಾಮಿ ಹಾಗೂ ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಇದೇ ಅವರ ವೃತ್ತಿ. ಅವರ ಆಡಳಿತ ಅವಧಿಯಲ್ಲಿ ಏನೆಲ್ಲಾ ಆಗಿದೆ ಎಂದು ಪಟ್ಟಿ ನೀಡಬಹುದು. ಆದರೆ ಅವರ ಮಟ್ಟಕ್ಕೆ ಇಳಿದು ರಾಜಕಾರಣ ಮಾಡಲು ನನಗೆ ಇಚ್ಛೆ ಇಲ್ಲ. ಆದರೆ ಬಾಳಿ ಬದುಕಬೇಕಾಗಿದ್ದ 14-15 ವರ್ಷದ ಮಕ್ಕಳು ಸತ್ತಿರುವುದನ್ನು ಕಣ್ಣಾರೆ ನೋಡಿದ್ದೇನೆ. ಇದನ್ನು ಯಾವುದೇ ಕುಟುಂಬ ಅರಗಿಸಿಕೊಳ್ಳಲು ಸಾಧ್ಯವಿಲ್ಲ.

ಪೊಲೀಸ್ ಆಯುಕ್ತರು ಈ ಕಾರ್ಯಕ್ರಮವನ್ನು 10 ನಿಮಿಷಗಳಲ್ಲಿ ಮುಗಿಸಿ ಎಂದು ಹೇಳಿದರು. ನಾನು ಕೂಡ ಆರ್ ಸಿಬಿ ತಂಡದ ಜೊತೆ ಮಾತನಾಡಿ ಕಾರ್ಯಕ್ರಮವನ್ನು ಮೊಟಕುಗೊಳಿಸಲಾಯಿತು ಎಂದು ಭಾವುಕರಾದರು.

ಕೆಎಸ್ ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕೆಎಸ್ ಸಿಎಗೆ ಹೋಗಲು ಸಾಧ್ಯವಾದಾಗ ನನ್ನ ಕಾರಿನಲ್ಲೇ ಅವರನ್ನು ಕರೆದುಕೊಂಡು ಹೋಗಬೇಕಾಯಿತು. ಕ್ರೀಡಾಂಗಣಕ್ಕೆ ಹೋಗುವಾಗ ಈ ರೀತಿ ದುರ್ಘಟನೆ ನಡೆದಿದೆ ಎಂದು ಮಾಧ್ಯಮ ಸ್ನೇಹಿತರು ನನಗೆ ಮಾಹಿತಿ ನೀಡಿದರು. ನಂತರ ಆಯುಕ್ತರು ನನಗೆ ಮಾಹಿತಿ ನೀಡಿದರು ಎಂದರು.

ಅಧಿವೇಶನದಲ್ಲಿ ಚರ್ಚೆಗೆ ಬಂದಾಗ ಅವರ ಕಾಲದ ಘಟನೆಗಳ ಬಗ್ಗೆ ಪ್ರಸ್ತಾಪಿಸುತ್ತೇನೆ

ಈ ಘಟನೆ ಬಗ್ಗೆ ರಾಜಕೀಯದವರು ಏನೇ ಟೀಕೆ ಮಾಡಿದರೂ ಲೆಕ್ಕ ಇಲ್ಲ. ಅವರ ಚೇಷ್ಟೆ ಇದ್ದಿದ್ದೆ. ಸಿ.ಟಿ ರವಿ, ಕುಮಾರಸ್ವಾಮಿ, ಅಶೋಕ್ ಸೇರಿದಂತೆ ಎಲ್ಲರದ್ದು ಕೇವಲ ರಾಜಕಾರಣ. ಇದೆಲ್ಲದಕ್ಕೂ ಬೇರೆ ಸಮಯದಲ್ಲಿ ಚರ್ಚೆ ಮಾಡುತ್ತೇನೆ. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಅವರ ಕಾಲದಲ್ಲಿ ಏನಾಗಿತ್ತು ಎಂದು ನಾನು ಪ್ರಸ್ತಾಪ ಮಾಡುತ್ತೇನೆ.

ಈಗ ರಾಜಕಾರಣ ಮಾಡುವುದಿಲ್ಲ. ಮಾಧ್ಯಮದವರು ಕೂಡ ಈ ಸಂದರ್ಭದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಬೇಡಿ. ರಾಜಕುಮಾರ್ ಅವರು ಸತ್ತಾಗ ಏನೆಲ್ಲಾ ಆಯಿತು ಎಂದು ನಾನು ಈಗ ಮಾತನಾಡಲು ಬಯಸುವುದಿಲ್ಲ. ಅಂತಹ ನೀಚ ರಾಜಕಾರಣ ಮಾಡಲು ನನಗೆ ಇಷ್ಟವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸದಾ ಹೆಣದ ಮೇಲೆ ರಾಜಕೀಯ ಮಾಡುತ್ತಾರೆ. ಇದೇ ಅವರ ರಾಜಕೀಯ ಅಜೆಂಡಾ ಎಂದು ತಿರುಗೇಟು ನೀಡಿದರು.

ಈ ಸಾವಿಗೆ ನೀವೇ ಹೊಣೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಕೇಳಿದಾಗ, ಕುಮಾರಸ್ವಾಮಿಗೆ ನಾನು ಆಮೇಲೆ ಉತ್ತರ ನೀಡುತ್ತೇನೆ. ನಾನು ಕನಕಪುರದಲ್ಲಿ ನ್ಯಾಯಾಲಯ ವಿಚಾರಣೆ ಹಾಜರಾಗಿದ್ದೆ. ಪೊಲೀಸ್ ಅಧಿಕಾರಿಗಳು ಮೆರವಣಿಗೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದ ತಕ್ಷಣವೇ ನಾನು ಬೆಂಗಳೂರಿನತ್ತ ಧಾವಿಸಿದೆ. ಜನ ಬರುವುದನ್ನು ತಡೆಯಲು ಮೆಟ್ರೋ ಸಂಚಾರವನ್ನೇ ಸ್ಥಗಿತಗೊಳಿಸಲಾಯಿತು ಎಂದು ತಿಳಿಸಿದರು.

ರಾಜಕೀಯ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆರ್. ಅಶೋಕ (R. Ashoka)

[ccc_my_favorite_select_button post_id="112891"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!