Is DK Shivakumar in tears?: Nikhil Kumaraswamy

ಡಿಕೆ ಶಿವಕುಮಾರ್‌ಗೆ ಕಣ್ಣೀರು ಬರುತ್ತಾ? ನನಗೇನೋ ಹಾಗೆ ಅನಿಸಿಲ್ಲ: ನಿಖಿಲ್ ಕುಮಾರಸ್ವಾಮಿ ಲೇವಡಿ

ಬೆಂಗಳೂರು: ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ನಡೆಯಬೇಕು. ಆಗ ಮಾತ್ರ ಅಮಾಯಕ ಜೀವಗಳಿಗೆ ಮತ್ತು ಹೆತ್ತವರಿಗೆ ನ್ಯಾಯ ಒದಗಿಸಲು ಸಾಧ್ಯ. ಸಾವಿನಲ್ಲೂ ನಿಮ್ಮ ಸಣ್ಣತನ ಮಾಡಬಾರದು, ಕ್ರೀಡಾ ಮನೋಭಾವದಿಂದ ನೋಡಬೇಕು ಎಂದು ಅವರು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾವಿನ ನಂತರವೂ ಡಿಕೆ ಶಿವಕುಮಾರ್ (DK Shivakumar) ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಕಪ್‌ ಗೆ ಮುತ್ತಿಕ್ಕಿ, ಫೋಟೋ ತೆಗೆಸಿಕೊಂಡು ರೀಲ್ಸ್‌ ಮಾಡಿದ್ದಾರೆ, ನಾಚಿಕೆ ಆಗಲ್ವಾ. ಈಗ ಕಣ್ಣೀರು ಹಾಕಿದರೆ ಪ್ರಯೋಜನ ಏನು ಎಂದು ಅವರು ಕಿಡಿಕಾರಿದರು.

ಕಾಲ್ತುಳಿತ ದುರಂತದಲ್ಲಿ 12 ರಿಂದ 33 ವರ್ಷದವರು ಸಾವನಪ್ಪಿದ್ದಾರೆ. ಸರ್ಕಾರ ಇವರಿಗೆ ಐವತ್ತು ಕೋಟಿ ಹಣ ಪರಿಹಾರ ನೀಡಿದರು ಹೋಗಿರುವ ಜೀವವನ್ನ ಮತ್ತೆ ತರಲು ಸಾಧ್ಯವಿಲ್ಲ. ಮಕ್ಕಳನ್ನ ಕಳೆದುಕೊಂಡ ಪೋಷಕರ ಭವಿಷ್ಯದ ಮುಂದಿನ ಸ್ಥಿತಿ ಏನು.? ಆ ಕುಟುಂಬದಲ್ಲಿ ಅಕ್ಕ ತಂಗಿ ಇದ್ದರೆ ಅವರ ವಿದ್ಯಾಭ್ಯಾಸಕ್ಕೆ ಸರ್ಕಾರ ಜವಾಬ್ದಾರಿ ತಗೋಬೇಕು. ಅವರಿಗೆ ಮುಂದೆ ಉದ್ಯೋಗವಕಾಶ ಮಾಡಿಕೊಡಬೇಕು ಎಂದು ಅವರು ಅಗ್ರಹಿಸಿದರು.

ವಿಜಯೋತ್ಸವವನ್ನ ಎರಡು ಕಡೆ ಯಾಕೆ ಆಯೋಜನೆ ಮಾಡಬೇಕಿತ್ತು. ಚಿನ್ನಸ್ವಾಮಿ ಸ್ಟೇಡಿಯಂಗಿಂತ ಜಾಗ ಬೇಕಾ. ಜನಕ್ಕೆ ಫ್ರಿ ಟಿಕೆಟ್ ಅಂತ ಹೇಳಿದ್ರು, ಫ್ರಿ ಅನ್ನೋದು ಇವರಿಗೆ ರೂಡಿಯಾಗಿದೆ ಅದಕ್ಕೆ ಫ್ರಿ ಸಾವು ಕೊಟ್ಟಿದ್ದಿರಾ.? ಎಂದು ಅವರು ಪ್ರಶ್ನಿಸಿದರು.

ದುರಂತವನ್ನ ಕ್ರೀಡಾ ಮನೋಭಾವದಿಂದ ನೋಡಿ

ಅಭಿನಂದನಾ ಸಮಾವೇಶದಲ್ಲಿ ಅಂತರಾಷ್ಟ್ರೀಯ ಆಟಗಾರರಿಗೆ ಯಾವ ರೀತಿ ಗೌರವ ಕೊಟ್ಟಿದ್ದಿರಾ.?ನಾವೆಲ್ಲಾ ಬೌರಿಂಗ್ ಆಸ್ಪತ್ರೆಗೆ ತೆರಳಿದ್ದಾಗ ಆಗ ಸಿಎಂ ಅವರು ಬೇಟಿ ಮಾಡ್ತಾರೆ. ಅಲ್ಲಿಯವರೆಗೂ ಸಿಎಂ ಜನಾರ್ಧನ ಹೋಟೆಲ್ ನಲ್ಲಿ ಟೀ ಕುಡಿತ್ತಿದ್ರಾ..? ಆಗಿರುವ ಘಟನೆಯನ್ನ ಕ್ರೀಡಾ ಮನೋಭಾವದಿಂದ ನೋಡಿ ರಾಜಕೀಯ ಮಾಡ್ಬೇಡಿ ಎಂದು ಕಿಡಿಕಾರಿದರು.

ತೆಲಾಂಗಣದಲ್ಲಿ ಚಲನಚಿತ್ರ ಬಿಡುಗಡೆಯಾಗಿ ದುರ್ಘಟನೆ ನಡೆದಾಗ ಯಾವ ರೀತಿ ಕ್ರಮ ತೆಗೆದುಕೊಂಡರಿ, ಎಲ್ಲಾ ಪ್ರೊಸೆಸ್ ಮಾಡುದ್ರಿ ಅವತ್ತು ನೀವು ಆ ನಟ ಮೇಲೆ ಎಫ್ ಐ ಆರ್ ಹಾಕಿದ್ರಿ, ಕಾಂಗ್ರೆಸ್ ಸರ್ಕಾರ ಆ ನಟನನ್ನ ಅರೆಸ್ಟ್ ಮಾಡಿದ್ದೀರಾ.ಈಗ ನಿಮ್ಮ‌ ಸರ್ಕಾರ ಇದೆ ಯಾರ ಮೇಲೆ ಎಫ್ ಐ ಆರ್ ಹಾಕ್ತಿರಾ..? ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

ನ್ಯಾಯಾಧೀಶರ ಮೂಲಕ ತನಿಖೆಗೆ ಒತ್ತಾಯ

ಈಗ ಮ್ಯಾಜಿಸ್ಟ್ರೇಟ್ ಮೂಲಕ ತನಿಖೆ ಮುಂದುವರೆಸಿ ಪಾರದರ್ಶಕವಾಗಿ ಮಾಡ್ತಿವಿ ಎಂದು ಬಿಂಬಿಸಲು ಹೊರಟಿದ್ದಿರಾ.? ಅವರು ಯಾರ ಅಂಗಳದಲ್ಲಿ ಕೆಲಸ ಮಾಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಪಾರದರ್ಶಕವಾಗಿ ತನಿಖೆ ಮಾಡುವುದಾದರೆ ನ್ಯಾಯಾಧೀಶರ ಮೂಲಕ ತನಿಖೆಯಾಗಲಿ ಎಂದು ಅವರು ಆಗ್ರಹಿಸಿದರು.

ರಾಜ್ಯದ ಇತಿಹಾಸದ ಎರಡನೇ ಅತೀ ದೊಡ್ಡ ಕಾಲ್ತುಳಿತ ದುರಂತ

ನಿನ್ನೆಯ ಕಾಲ್ತುಳಿತ ದುರಂತ ರಾಜ್ಯದ ಇತಿಹಾಸದ ಎರಡನೇ ಅತೀ ದೊಡ್ಡ ಪ್ರಕರಣವಾಗಿದೆ. ಭಾರತ ವರ್ಲ್ಡ್ ಕಪ್ ಗೆದ್ದಾಗ ಮುಂಬೈನಲ್ಲಿ ಪೆರೆಡ್ ನಲ್ಲಿ ಸುಮಾರು 3ಲಕ್ಷ ಕ್ಕೂ ಹೆಚ್ಚು ಜನ ಭಾಗಿಯಾಗಿದ್ರು. ಯಾವುದಾದರೂ ಒಂದು ದುರ್ಘಟನೆ ನಡೆಯಿತಾ.? ಪ್ರಧಾನಿಯವರು ರಾಜ್ಯಕ್ಕೆ ಭೇಟಿ ಕೊಟ್ಟಾಗ ಪೊಲೀಸ್ ಭದ್ರತೆ ಆಯ್ತಾ.? ಎಂದು ವಾಗ್ದಾಳಿ ನಡೆಸಿದರು.

ಸಿಎಂ ಅವರು ಮೂರರಿಂದ‌ ನಾಲ್ಕು ಲಕ್ಷ‌ ಜನ ನಿರೀಕ್ಷೆಗೂ ಮೀರಿದ ಜನ ಸೇರಿದ್ರು ಎಂದಿದ್ದಾರೆ. ಪಹಲ್ಗಾಮ್ ಘಟನೆಯ ಬಳಿಕ ಇಂಟೆಲಿಜೆನ್ಸ್‌ ಸತ್ತು ಹೋಗಿತ್ತಾ ಎಂದು ಸಿಎಂ ಅವರು ಹೇಳಿದ್ರು. ಇವತ್ತು ಟಿ ಕುಡಿಯೋಕೆ ಟಿಫನ್ ತಿನ್ನೋಕೆ ಹೋಗಿತ್ತಾ.? ಘಟನೆ ಬಗ್ಗೆ ಗೃಹ ಸಚಿವರಿಂದ ಒಂದು ಹೇಳಿಕೆ ಕೊಟ್ಟಿಲ್ಲ ಎಂದು ಕಿಡಿಕಾರಿದರು.

ಗೃಹ ಸಚಿವರ ಅಧಿಕಾರ ಮೇಲೆ ಸವಾರಿ ಮಾಡಿ ಜಿಪಿಎ ತಗೊಂಡಿದ್ದಾರೆ ಕೆಲವರು.ಇದರ ಬಗ್ಗೆ ಗೃಹ ಸಚಿವರಿಗೆ ಯಾವುದೆ ಮಾಹಿತಿ ಇದ್ದಂಗಿಲ್ಲಾ.! ಸಿಎಂ‌ ಅವರನ್ನ ಓವರ್ ಟೇಕ್ ಮಾಡಿದ ಮಹಾನುಭಾವ ಒಬ್ಬರು ಇದ್ದಾರೆ. ಡಿಸಿಎಂ ಏನಾದ್ರು RCB ನಾಯಕ ರಜತ್ ಪಾಟಿದಾರ್ ಬದಲು ಕಫ್ ಗೆಲ್ಲೋದಕ್ಕೆ ಕಾರಣ ಆಗಿದ್ರಾ..? ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿನ್ನೆ ಅಭಿನಂದನಾ ಸಮಾರಂಭದ ವೇಳೆ
ನಾಲ್ಕೈದು ಸಾವಿನ ಪ್ರಕರಣ ಆಗಿದೆ ಅಂತ ಗೊತ್ತಾದಮೇಲೂ, ಡಿಸಿಎಂ ಅವರು ಕಫ್ ಗೆ ಮುತ್ತು ಕೊಟ್ಟಿದ್ದು, ರೀಲ್ಸ್ ಮಾಡಿದ್ರು ನಿನ್ನೆಯ ಘಟನೆಗೆ ಮುಖದಲ್ಲಿ ವಿಷಾದ ವ್ಯಕ್ತಪಡಿಸಿದ ಭಾವನೆ ಕಾಣ್ತಾ ಇರಲಿಲ್ಲ ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!