BY Vijayendra demands Rs 50 lakh compensation

ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಜಡ್ಜ್ ತನಿಖೆ, ರೂ.50 ಲಕ್ಷ ಪರಿಹಾರಕೊಡಲು ವಿಜಯೇಂದ್ರ ಆಗ್ರಹ

ಬೆಂಗಳೂರು: ಆರ್‍‌ಸಿಬಿ (RCB) ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಕುರಿತು ಕಾರ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು, ಮೃತರಿಗೆ ಕನಿಷ್ಠ 50 ಲಕ್ಷ ಪರಿಹಾರ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿ ಸಂಖ್ಯೆ 101ರಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದರು.

ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು.

ತೆಲಂಗಾಣದಲ್ಲಿ ಈಚೆಗೆ ಅಲ್ಲು ಅರ್ಜುನ್ ಅವರ ಸಿನಿಮಾ ಬಿಡುಗಡೆ ವೇಳೆ ತುಳಿತಕ್ಕೆ ಒಳಗಾಗಿ ಸಾವು ನೋವಾಗಿತ್ತು. ಅಲ್ಲಿ ಕೂಡ ಕಾಂಗ್ರೆಸ್ ಸರಕಾರ ಇತ್ತು. ಅಲ್ಲು ಅರ್ಜುನ್ ಅವರನ್ನು ಬಂಧಿಸಲಿಲ್ಲವೇ ಎಂದು ಕೇಳಿದರು.

ನಿನ್ನೆಯ ದುರ್ಘಟನೆಗೆ ರಾಜ್ಯ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. ಲಂಡನ್‍ನಲ್ಲೋ, ದುಬೈನಲ್ಲೋ ಇರುವ ಆರ್‍ಸಿಬಿ ಮಾಲೀಕರು ಕೂಡ ಇದಕ್ಕೆ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.

ಕೇರಳದಲ್ಲಿ ಆನೆ ತುಳಿತದಿಂದ ಸಾವಾದರೆ ಆನೆ ಕರ್ನಾಟಕದ್ದು ಎಂದು 25 ಲಕ್ಷ ಪರಿಹಾರ ಘೋಷಿಸಿದ್ದರು ಎಂದು ಗಮನ ಸೆಳೆದರು.

ಒಬ್ಬ ಮ್ಯಾಜಿಸ್ಟ್ರೇಟ್ ರಿಂದ ತನಿಖೆ ನಡೆದರೆ ಅಪರಾಧಿ ಸ್ಥಾನದಲ್ಲಿ ಇರುವ ಮುಖ್ಯಮಂತ್ರಿಗಳು, ಮಂತ್ರಿಮಂಡಲದ ಸದಸ್ಯರನ್ನು ತನಿಖೆ ಮಾಡಲಾಗದು ಎಂದು ನುಡಿದರು. ಮುಖ್ಯಮಂತ್ರಿಗಳು ಒಬ್ಬ ಮ್ಯಾಜಿಸ್ಟ್ರೇಟ್ ರಿಂದ ತನಿಖೆಗೆ ಆದೇಶಿಸಿದ್ದಾರೆ. ಅದರ ಅರ್ಥ ಏನು ಎಂದು ಕೇಳಿದರು. ವೈಫಲ್ಯಕ್ಕೆ ಹೊಣೆ ಹೊರಲು ಸರಕಾರ ಸಿದ್ಧವಿಲ್ಲ. ಇವರಿಗೆ ಜನಪರ ಕಾಳಜಿ ಬದಲು ಪ್ರಚಾರದ ಹುಚ್ಚೇ ಪ್ರಮುಖವೆನಿಸಿದೆ ಎಂದು ಟೀಕಿಸಿದರು.

ಆರ್‍ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 13 ವರ್ಷದ ಬಾಲಕನೂ ಸೇರಿ 11 ಜನರು ಮೃತಪಟ್ಟಿದ್ದಾರೆ. ರಾಜ್ಯ ಸರಕಾರವು ಇಷ್ಟೊಂದು ಆತುರಾತುರವಾಗಿ ಈ ಸಂಭ್ರಮಾಚರಣೆಯನ್ನು ಯಾಕೆ ಆಯೋಜಿಸಿತ್ತು? ಬೇರೆ ಯಾರಾದರೂ ಆಯೋಜಿಸಿದ್ದರೆ ಸರಕಾರ ಅನುಮತಿ ಕೊಟ್ಟದ್ದೇಕೆ? ಪೂರ್ವತಯಾರಿ ಇಲ್ಲದೇ ನಿನ್ನೆಯೇ ಸಂಭ್ರಮಾಚರಣೆಗೆ ಅವಕಾಶ ಮಾಡಿಕೊಟ್ಟಿದ್ದೇಕೆ ಎಂದು ಕೇಳಿದರು.

ಅಮಾನವೀಯ ನಡೆ ಖಂಡನಾರ್ಹ

ಸಾವಿನ ಸಂಖ್ಯೆ ಐದಾರರ ಕುರಿತ ಮಾಹಿತಿ ಟಿ.ವಿಗಳಲ್ಲಿ ಬರುತ್ತಿದ್ದರೂ ಉಪ ಮುಖ್ಯಮಂತ್ರಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಪ್ ಮುತ್ತಿಕ್ಕಿದ್ದರು. ವಿಧಾನಸೌಧದಲ್ಲಿ ಆಡಳಿತ ಪಕ್ಷದವರ ಸೆಲ್ಫಿಗಳ ಭರಾಟೆ ಮುಂದುವರೆದಿತ್ತು. ರಾಜ್ಯ ಸರಕಾರದ ಇಷ್ಟೊಂದು ಅಮಾನವೀಯ ನಡವಳಿಕೆ ಖಂಡನಾರ್ಹ ಎಂದು ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ವಿಧಾನಸೌಧದ ಮುಂದೆ ಸಂಭ್ರಮಾಚರಣೆ ಮಾಡುವ ಅಗತ್ಯ ಏನಿತ್ತು? ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಇರುವಾಗ ವಿಧಾನಸೌಧದ ಮುಂದೆ ಕಾರ್ಯಕ್ರಮ ಆಯೋಜಿಸಲು ಡಿಸಿಎಂ ತೀರ್ಮಾನಿಸಿದರೇ? ಮುಖ್ಯಮಂತ್ರಿ ತಿಳಿಸಿದರೇ? ಯಾವಾಗ ಇದು ತೀರ್ಮಾನ ಆಗಿದೆ? ಎಂದು ಸ್ಪಷ್ಟಪಡಿಸಲು ಆಗ್ರಹಿಸಿದರು.

ದುರ್ಘಟನೆಯ ಬಳಿಕ ಆರ್‍ಸಿಬಿ ಟೀಂ ವಿಧಾನಸೌಧಕ್ಕೆ ಹೊರಡುವ ಮುಂಚಿತವಾಗಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಆರಂಭವಾಗಿತ್ತು. ಒಬ್ಬಿಬ್ಬರು ಸತ್ತ ಮಾಹಿತಿ ಇದ್ದರೂ ವಿಧಾನಸೌಧದ ಮುಂದೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರು ಸಂಭ್ರಮಾಚರಣೆ ಮಾಡುವ ಅವಶ್ಯಕತೆ ಏನಿತ್ತು? ಯಾಕೆ ಅದನ್ನು ಬದಲಿಸಲಿಲ್ಲ? ಸಾವಿನ ಮಾಹಿತಿ ಇದ್ದರೂ ವಿಧಾನಸೌಧದ ಮುಂದೆ ಸಂಭ್ರಮಾಚರಣೆ ಮುಂದುವರೆಸಿದ್ದೇಕೆ ಎಂದು ಕೇಳಿದರು.

30-40 ಸಾವಿರ ಜನರನ್ನು ನಿರೀಕ್ಷಿಸಿದ್ದೆವು. ಒಂದೂವರೆಯಿಂದ 2 ಲಕ್ಷ ಜನ ಬಂದರು ಎಂದು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಹೇಳಿದ್ದು, ಇದು ವೈಫಲ್ಯದ ಸ್ಪಷ್ಟ ಉದಾಹರಣೆ ಎಂದು ವಿಶ್ಲೇಷಿಸಿದರು.

ಸಂಖ್ಯೆಯ ಕುರಿತು ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇರಲಿಲ್ಲ. ಆಂಬುಲೆನ್ಸ್, ಮಹಿಳಾ ಪೊಲೀಸರು, ಸ್ಟ್ರೆಚರ್‍ಗಳು, ಸಮರ್ಪಕ ಪೊಲೀಸ್ ವ್ಯವಸ್ಥೆ ಇರಲಿಲ್ಲ ಎಂದ ಅವರು, ವಿಧಾನಸೌಧದ ಬಳಿ ದುರ್ಘಟನೆ ಆಗಿಲ್ಲ; ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮಾತ್ರ ದುರ್ಘಟನೆ ಆಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದು ನುಣುಚಿಕೊಳ್ಳುವ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಟೀಕಿಸಿದರು.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಸರಕಾರದ ಬೇಜವಾಬ್ದಾರಿಯಿಂದ 11 ಅಮಾಯಕರು ಪ್ರಾಣ ಕಳಕೊಂಡಿದ್ದಾರೆ. ಇದರ ಸಮರ್ಪಕ ತನಿಖೆ ಆಗಲೇಬೇಕಿದೆ.

ರಾಜ್ಯ ಸರಕಾರ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಸಿಟ್ಟಿಂಗ್ ಹೈಕೋರ್ಟ್ ಜಡ್ಜ್‍ರಿಂದ ತನಿಖೆ ಮಾಡಿಸಿ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ರಾಜ್ಯ ಸರಕಾರ ಸಮರ್ಪಕ ನಿರ್ಧಾರ ಮಾಡಲಿ ಎಂದು ಒತ್ತಾಯವನ್ನು ಮುಂದಿಟ್ಟರು.

ರಾಜಕೀಯ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆರ್. ಅಶೋಕ (R. Ashoka)

[ccc_my_favorite_select_button post_id="112891"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!