ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ: ಆರ್ ಅಶೋಕ

Winning the cup is not a new thing: R Ashoka

ಬೆಂಗಳೂರು; ಕಾಲ್ತುಳಿತದ ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಶಕ್ತಿಗಳ ತಿಕ್ಕಾಟ ‌ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ. ಅವರ ಕುಟುಂಬದವರಿಗೆ ಸಾಂತ್ವನ ಹೇಳಬೇಕಿದ್ದವರು ಕಪ್ ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಆ ನಂತರವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಟುಕ, ಕಲ್ಲಿನ ಹೃದಯದವರು ಎಂದು ದೂರಿದರು.

ಕಾನೂನನ್ನು ಪೊಲೀಸ್ ಅಧಿಕಾರಿಗಳು ಜಾರಿ ಮಾಡುತ್ತಾರೆ. 4-6-2025 ರಂದು ವಿಧಾನಸೌಧದ ಪೊಲೀಸರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಹಾಗೂ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗಲಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದನ್ನು ನಿಷೇಧಿಸಬೇಕು ಎಂದೂ ಹೇಳಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರ್ಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಆಕ್ರೋಶ ಹೊರಹಾಕಿದರು.

ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ. ಡ್ರೋನ್ ಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರ್ಕಾರ ಹರಿದು ಬಿಸಾಡಿದೆ.

ವೇದಿಕೆಯಲ್ಲಿ 20-30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನು ಸಂಪೂರ್ಣ ಉಲ್ಲಂಘಿಸಿದ್ದು, 11 ಆಟಗಾರರು ಸೇರಿದಂತೆ ಒಟ್ಟು 200 ಜನರು ವೇದಿಕೆಯಲ್ಲಿದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ ಎಂದು ದೂರಿದರು.

ಇಷ್ಟೆಲ್ಲ ಕಾನೂನು ಉಲ್ಲಂಘನೆ ಮಾಡಿದ್ದರೂ, ಕೊನೆಗೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಸ್ತೆಯಲ್ಲಿ ನಿಂತು ಟ್ರಾಫಿಕ್‌ ನಿಯಂತ್ರಿಸುತ್ತಿದ್ದ ಪೊಲೀಸರ ವಿರುದ್ಧ ಕ್ರಮ ವಹಿಸಲಾಗಿದೆ. ಠಾಣೆ ಪೊಲೀಸರನ್ನು ಕೂಡ ಅಮಾನತು ಮಾಡಿದ್ದಾರೆ ಎಂದರು.

ವಿಶೇಷ ಅಧಿವೇಶನ ಕರೆಯಿರಿ

ಸರ್ಕಾರ ಮಾಡಿದ ತಪ್ಪುಗಳ ಬಗ್ಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಮೂರು ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಯಾವ ತನಿಖೆ ನಿಜ ಎಂದು ಗೊತ್ತಾಗಿಲ್ಲ. ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕಿದೆ. ಈ ಕುರಿತು ನಾವೆಲ್ಲರೂ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.

ಸರ್ಕಾರ ಪಾಪರ್ ಆಗಿಲ್ಲ ಎಂದಾದರೆ 1 ಕೋಟಿ ರೂ. ಪರಿಹಾರ ನೀಡಲಿ. ನಾವೆಲ್ಲರೂ ಒಂದು ತಿಂಗಳ ಸಂಬಳವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಿದ್ದೇವೆ ಎಂದು ತಿಳಿಸಿದರು.

ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ

ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ. ಪ್ರತಿ ರಾಜ್ಯಗಳ ತಂಡ ಕಪ್ ಗೆದ್ದಾಗಲೂ ಈ ರೀತಿಯ ಘಟನೆ ನಡೆದಿಲ್ಲ‌. ಯಾವುದೇ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಹೋಗಿ ಪ್ರಚಾರ ಪಡೆದಿಲ್ಲ ಎಂದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]