Yettinahole Project: CM Siddaramaiah makes important statement in Gauribidanur

ಎತ್ತಿನಹೊಳೆ ಯೋಜನೆ: ಗೌರಿಬಿದನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಗೌರಿಬಿದನೂರು: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.

ಇಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ: ಮರು ಗಣತಿ

ಜಾತಿ ಗಣತಿ ಬಗ್ಗೆ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ. ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದರು.

ಗ್ರೇಟರ್ ಬೆಂಗಳೂರಿಗೆ ತುಮಕೂರು: ಸಚಿವ ಸಂಪುಟದಲ್ಲಿ ಚರ್ಚೆ

ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು.

30 ದಿನಗಳಲ್ಲಿ ವರದಿ

ಕಾಲ್ತುಳಿತ ಪ್ರಕರಣದಲ್ಲಿ ಅನೇಕ ಆಯೋಗ ರಚನೆಯಾಗಿದ್ದು ಇವು ತಾರ್ಕಿಕ ಅಂತ್ಯ ಕಾಣುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ ಎಂದರು.

ಪಕ್ಷದ ವರಿಷ್ಠರ ತೀರ್ಮಾನ

ಕಾಂತರಾಜ ಆಯೋಗ ವರದಿ ಬಗ್ಗೆ ಪಕ್ಷದ ವರಿಷ್ಠರ ನಿರ್ಧಾರ ಮುಖ್ಯಮಂತ್ರಿಗಳಿಗೆ ನಿರಾಸೆ ತಂದಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಪಕ್ಷದ ವರಿಷ್ಠರು ನಿರ್ಧಾರ ಮಾಡಿದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ತೀರ್ಮಾನವಲ್ಲ ಎಂದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ

ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿ ಖಾಲಿ ಇರುವಡೆಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇನ್ನು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು, ಅವರ ವೇತನವನ್ನು ಹೆಚ್ಚಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ನಮ್ಮ ಸರ್ಕಾರ ಒತ್ತುನೀಡಿದೆ ಎಂದರು.

ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ

ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿ ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ

ಜಲ ಜೀವನ್ ಯೋಜನೆಯಡಿ ರಾಜ್ಯ ಸರ್ಕಾರ 50% ಅನುದಾನ ನೀಡಿದ್ದಾರೆ 30% ಮಾತ್ರ ಕೇಂದ್ರ ಸರ್ಕಾರ ನೀಡುತ್ತದೆ. 20% ಫಲಾನುಭವಿಗಳು ನೀಡುತ್ತಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ರಾಜ್ಯ ಸರ್ಕಾರದ ಪಾಲು ಹೆಚ್ಚಿದ್ದರೂ ಆಯುಷ್ಮಾನ್ ಭಾರತ್ ಯೋಜನೆ ಎನ್ನುತ್ತಾರೆ. ಅನೇಕ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಧಾನ ಮಂತ್ರಿಗಳ ಹೆಸರಿರುತ್ತದೆ. ಕುಸುಮ್ ಬಿ ಯೋಜನೆಯಡಿ 30% ಕೇಂದ್ರದಿಂದ ಬರುತ್ತದೆ. ಒಪ್ಪದೇ ಹೋದರೆ ಅದೂ ಬರುವುದಿಲ್ಲ. ರೈತರಿಗೆ ಒಳ್ಳೆಯದಾಗಬೇಕು, ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಇದನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.

ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣವಾಗಲಿದೆ

ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಮುಕ್ತಾಯವಾಗಬಹುದು ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಭಾಗದ ಸಚಿವರು, ಶಾಸಕರು, ಹಾಗೂ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲಾಗಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಳೆದ ವರ್ಷ 52000 ಕೋಟಿ ರೂ.ಗಳ ಬಂಡವಾಳ ವೆಚ್ಚ ಇತ್ತು. ಈ ವರ್ಷ 83 ಸಾವಿರ ಕೋಟಿಯಾಗಿದೆ ಎಂದರು. 31000 ಕೋಟಿ ಬಂಡವಾಳ ವೆಚ್ಚ ಒಂದು ವರ್ಷದಲ್ಲಿ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರ ದಿವಾಳಿ ಹೇಗೆ ಆಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಐವತ್ತು ಸಾವಿರಕ್ಕೂ ಹೆಚ್ಚು ಅನುದಾನ ಒದಗಿಸಲಾಗಿದೆ ಎಂದರು.

ಎರಡು ವರ್ಷಗಳಲ್ಲಿ 242 ಭರವಸೆಗಳನ್ನು ಈಡೇರಿಸಿದೆ

ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿದ್ದು, ಕೇಂದ್ರ ಸರ್ಕಾರ 600 ಭರವಸೆಗಳನ್ನು ನೀಡಿ ಶೇ.10ರಷ್ಟನ್ನೂ ಅನುಷ್ಠಾನ ಮಾಡಿಲ್ಲ ಎಂದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!