ಅಹಮದಾಬಾದ್; ಗುಜರಾತ್ನ ಅಹಮದಾಬಾದ್ ನಲ್ಲಿ ನಿನ್ನೆ ಸಂಭವಿಸಿದ ಏರ್ ಇಂಡಿಯಾ (AI171) ವಿಮಾನ ದುರಂತದಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೆರಳಿ ಪರಿಶೀಲನೆ ನಡೆಸಿದರು.
ಬಳಿಕ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿಯಾಗಿ ಬೇಗ ಗುಣ ಮುಖರಾಗುವಂತೆ ಹಾರೈಸಿದರು.
ಈ ವೇಳೆ ದುರ್ಘಟನೆಯಲ್ಲಿ ಪಾರಾದ ಪ್ರಯಾಣಿಕನನ್ನು ಮಾತನಾಡಿಸಿದ ಮೋದಿ, ಘಟನೆಯ ವಿಷಯ ಪಡೆದುಕೊಂಡರು.
ಬಳಿಕ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ ಅವರು, ಇಂದು ಅಹಮದಾಬಾದ್ನಲ್ಲಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ವಿನಾಶದ ದೃಶ್ಯವು ದುಃಖಕರವಾಗಿದೆ. ನಂತರ ದಣಿವರಿಯಿಲ್ಲದೆ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ತಂಡಗಳನ್ನು ಭೇಟಿ ಮಾಡಿದೆ.
Visited the crash site in Ahmedabad today. The scene of devastation is saddening. Met officials and teams working tirelessly in the aftermath. Our thoughts remain with those who lost their loved ones in this unimaginable tragedy. pic.twitter.com/R7PPGGo6Lj
— Narendra Modi (@narendramodi) June 13, 2025
ಈ ಊಹಿಸಲಾಗದ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನಮ್ಮ ಸಹಾನುಭೂತಿ ಉಳಿದಿವೆ ಎಂದಿದ್ದಾರೆ