AI-171 plane crash: Watch AI viral video

AI-171 ವಿಮಾನ ಅವಘಡ: AI ವೈರಲ್ ವಿಡಿಯೋ ನೋಡಿ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ಬಳಿ ಸಂಭವಿಸಿದ ಏರ್ ಇಂಡಿಯಾ (AI-171) ವಿಮಾನ ಅಪಘಾತ AI ವಿಡಿಯೋ ವೈರಲ್ ಆಗುತ್ತಿದೆ.

ಈ ಅಪಘಾತದಲ್ಲಿ 270 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಪ್ರಸ್ತುತ ಈ ಘಟನೆಗೆ ಸಂಬಂಧಿಸಿದಂತೆ AI ಕಿರುಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Video COURTESY: @prawasitv

ಉಳಿದಂತೆ ವಿಮಾನ ದುರಂತದಲ್ಲಿ ಮೃತಪಟ್ಟ 275 ಮಂದಿಯಲ್ಲಿ 190 ಮಂದಿಯ ಗುರುತು ಪತ್ತೆಯಾಗಿದ್ದು, 32 ಮಂದಿ ವಿದೇಶಿಗರೂ ಸೇರಿದಂತೆ 159 ಜನರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಭವಿಸಿದ ಭೀಕರ ವಿಮಾನ ಅವಘಡದಲ್ಲಿ ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ. ಉಳಿದವರ ಗುರುತು ಪತ್ತೆಗೆ ಡಿಎನ್‌ಎ ತಾಳೆ ನೋಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಅಹಮದಾಬಾದ್ ಸಿವಿಲ್‌ ಆಸ್ಪತ್ರೆಯ ವೈದ್ಯಕೀಯ ಸೂಪರಿಂಟೆಂಡೆಂಟ್ ರಾಕೇಶ್ ಜೋಶಿ ತಿಳಿಸಿದರು.

ಕುಟುಂಬಸ್ಥರಿಗೆ ಹಸ್ತಾಂತರಿಸಲಾದ 127 ಭಾರತೀಯರ ಮೃತದೇಹಗಳ ಪೈಕಿ, 123 ಮಂದಿ ವಿಮಾನದ ಪ್ರಯಾಣಿಕರಾಗಿದ್ದರೆ, ನಾಲ್ವರು ಘಟನಾ ಸ್ಥಳದಲ್ಲಿದ್ದ ದುರ್ದೈವಿಗಳು ಎಂದು ಅವರು ತಿಳಿಸಿದ್ದಾರೆ.

ವಿಮಾನ ಪತನದ ಸಂದರ್ಭದಲ್ಲಿ ಗಾಯಗೊಂಡು 71 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಏಳು ಮಂದಿ ಮಾತ್ರ ಅಹಮದಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಸಂದರ್ಭದಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಅವರು ಗುಣಮುಖರಾಗಿದ್ದು ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಯಿಂದ ಬುಧವಾರ ನಿರ್ಗಮಿಸಿದರು ಎಂದು ಅಧಿಕಾರಿಗಳು ತಿಳಿಸಿದರು.

ಬಳಿಕ ಅವರು ಅವಘಡದಲ್ಲಿ ಮೃತಪಟ್ಟ ಸಹೋದರ ಅಜಯ್ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿದರು.

ವಿಶ್ವಾಸ್ ಮತ್ತು ಅಜಯ್‌ ಅವರು ಮೂಲತಃ ಕೇಂದ್ರಾಡಳಿತ ಪ್ರದೇಶವಾದ ದಿಯುನವರು. ಕುಟುಂಬಸ್ಥರೊಂದಿಗೆ ಕೆಲ ದಿನ ಕಾಲಕಳೆದ ನಂತರ ಜೂನ್ 12ರಂದು ಏರ್ ಇಂಡಿಯಾ ವಿಮಾನದ ಮೂಲಕ ಲಂಡನ್‌ಗೆ ಮರಳುತ್ತಿದ್ದರು. ವಿಶ್ವಾಸ್ ಅವರು ಅಜಯ್ ಅವರ ಪಾರ್ಥಿವ ಶರೀರವನ್ನು ಹೆಗಲ ಮೇಲೆ ಹೊತ್ತು ಚಿತಾಗಾರಕ್ಕೆ ಒಯ್ಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!