H.D.Kumaraswamy practices yoga at Salem Steel Plant

ಸೇಲಂ ಉಕ್ಕು ಸ್ಥಾವರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಯೋಗಾಭ್ಯಾಸ

ಸೇಲಂ (ತಮಿಳುನಾಡು): ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು, ಭಾರತೀಯ ಉಕ್ಕು ಪ್ರಾಧಿಕಾರ ಹಾಗೂ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜೊತೆಯಲ್ಲಿ ಸಚಿವರು ಯೋಗಾಭ್ಯಾಸ ನಡೆಸಿದರು.

ಸೇಲಂ ಟೌನ್‌ಶಿಪ್‌ನಲ್ಲಿರುವ ಹಿಲ್ ವ್ಯೂ ಕ್ರೀಡಾಂಗಣದಲ್ಲಿ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಸಚಿವರು ಕೆಲ ಪ್ರಮುಖ, ಸರಳ ಆಸನಗಳನ್ನು ಹಾಗೂ ಪ್ರಾಣಾಯಾಮವನ್ನು ಹಾಗೂ ಪ್ರಾಣಾಯಾಮವನ್ನೂಅಭ್ಯಾಸ ಮಾಡಿದರು.

ಮೋದಿ ಅವರನ್ನು ಅಭಿನಂಧಿಸಿದ ಸಚಿವರು

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು, ಯೋಗ ಎನ್ನುವುದು ನಮ್ಮ ಭಾರತದಲ್ಲಿ ಪ್ರಾಚೀನ ಕಾಲದಿಂದ ಬೆಳೆದುಬಂದ ಜೀವನಶೈಲಿಯಾಗಿದೆ. ಭಾರತಕ್ಕಷ್ಟೇ ಸೀಮಿತವಾಗಿದ್ದ ಯೋಗವನ್ನು ಹನ್ನೊಂದು ವರ್ಷಗಳ ಹಿಂದೆ ಪ್ರಧಾನಿಗಳಾಗಿ ಅಧಿಕಾರ ವಹಸಿಕೊಂಡ ನರೇಂದ್ರ ಮೋದಿ ಅವರು ಇಡೀ ಜಗತ್ತಿನ ವೇದಿಕೆಗೆ ತೆಗೆದುಕೊಂಡು ಹೋದರು. ಅದರ ಪರಿಣಾಮವಾಗಿ ಜಗತ್ತಿನ ಎಲ್ಲೆಡೆ ಜೂನ್‌ 21ನೇ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಆಚರಿಸಲಾಗುತ್ತಿದೆ. ಇದರ ಸಂಪೂರ್ಣ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದರು.

ಸೇಲಂ ಉಕ್ಕು ಸ್ಥಾವರದ ಸಿಬ್ಬಂದಿ, ಅಧಿಕಾರಿಗಳು, ಅವರ ಕುಟುಂಬ ಸದಸ್ಯರ ಜತೆ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ಸಿಕ್ಕಿದೆ. ಇದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ರಾಷ್ಟ್ರದ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರದ ಕುಟುಂಬದೊಂದಿಗೆ ಯೋಗದ ಅನನ್ಯತೆ, ಅವಿಸ್ಮರಣೆಯ ಕ್ಷಣಗಳನ್ನು ಅನುಭವಿಸುವ ಭಾಗ್ಯ ನನ್ನದಾಯಿತು ಎಂದು ಸಚಿವರು ಹೇಳಿದರು.

ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮಾನಸಿಕ ಶಾಂತಿ, ಮಾನಸಿಕ ಸ್ಪಷ್ಟತೆ, ದೈಹಿಕ ಸ್ವಾಸ್ತ್ಯತೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ಪರಿಣಾಮಕಾರಿ ಮಾರ್ಗವಾಗಿದೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಯೋಗವು ಜಗತ್ತನ್ನೇ ಒಗ್ಗೂಡಿಸಿದೆ.

ಜಗತ್ತಿನ ಯೋಗಕ್ಷೇಮಕ್ಕೆ ನಮ್ಮ ಪಾರಂಪರಿಕ ಯೋಗವು ಮಹೋನ್ನತ ಕೊಡುಗೆ ನೀಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಭಾರತೀಯ ಉಕ್ಕು ಪ್ರಾಧಿಕಾರದ (ಸೈಲ್‌) ಅಧ್ಯಕ್ಷ ಅಮರೇಂದು ಪ್ರಕಾಶ್‌, ಉಕ್ಕು ಸಚಿವ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಭಿಜಿತ್‌ ನರೇಂದ್ರ ಸೇರಿದಂತೆ ಸೇಲಂ ಉಕ್ಕು ಸ್ಥಾವರದ ಹಿರಿಯ ಅಧಿಕಾರಗಳು ಕೂಡ ಯೋಗಾಭ್ಯಾಸದಲ್ಲಿ ಭಾಗಿ ಆಗಿದ್ದರು.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!