ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

I cannot be silenced by threats, personal insults: Priyank Kharge

ಬೆಂಗಳೂರು: ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ ‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ಪ್ರವಾಸಕ್ಕೆ ಕೇಂದ್ರದ ಮೋದಿ (Modi) ಸರ್ಕಾರ ಕಾರಣವಿಲ್ಲದೆ ಅನುಮತಿ ನಿರಾಕರಿಸಿ, ಕನ್ನಡಿಗರ ಆಕ್ರೋಶಕ್ಕೆ ತುತ್ತಾದ ಬೆನ್ನಲ್ಲೇ ಯೂಟರ್ನ್ ಹೊಡೆದಿದೆ.

ಹೌದು ರಾಜಕೀಯ ದ್ವೇಷದ ಕಾರಣ ಬಯೋ-2025 ಸಮಾವೇಶದಲ್ಲಿ ತೆರಳುತ್ತಿದ್ದ ಕರ್ನಾಟಕದ ಸಚಿವರಿಗೆ ಅನುಮತಿ ನೀಡಿಲ್ಲ ಎಂಬ ವಿಚಾರ ಮೋದಿ ಸರ್ಕಾರದಿಂದ ಕರ್ನಾಟಕ ಹಾಗೂ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನಲ್ಲೆ, ಪ್ರಿಯಾಂಕ್ ಖರ್ಗೆ ಅವರ ಅಮೇರಿಕಾ ಪ್ರವಾಸಕ್ಕೆ ಅನುಮತಿ ನೀಡಿದೆ.

ಈ ಕುರಿತಂತೆ ಸಚಿವ ಪ್ರಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು. ಹಿಂದಿನ ಅನುಮತಿ ನಿರಾಕರಣೆ ಪ್ರಶ್ನಿಸಿ ಎಂಇಎಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಪ್ರಶ್ನೆಗಳು: ಜೂನ್ 14 ರಿಂದ 27 ರವರೆಗೆ ಕರ್ನಾಟಕ ಸರ್ಕಾರವನ್ನು ಎರಡು ಪ್ರಮುಖ ಜಾಗತಿಕ ವೇದಿಕೆಗಳಲ್ಲಿ ಪ್ರತಿನಿಧಿಸಲು ಮತ್ತು ಸಹಯೋಗಗಳು ಮತ್ತು ಹೂಡಿಕೆಗಳಿಗಾಗಿ ಉನ್ನತ ಕಂಪನಿಗಳು, ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳೊಂದಿಗೆ 25 ಕ್ಕೂ ಹೆಚ್ಚು ಅಧಿಕೃತ ಸಭೆಗಳಲ್ಲಿ ಭಾಗವಹಿಸಲು ನಾನು ಮೇ 15 ರಂದು ಅನುಮತಿ ಕೋರಿದ್ದೆ. ಆದರೆ ಯಾವುದೇ ಅಧಿಕೃತ ವಿವರಣೆಯಿಲ್ಲದೆ ನನ್ನ ಅರ್ಜಿಯನ್ನು ನಿರಾಕರಿಸಲಾಯಿತು.

ವಿದೇಶಾಂಗ ಸಚಿವಾಲಯವು ಈಗ ತನ್ನ ಹಿಂದಿನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಅಮೆರಿಕಕ್ಕೆ ಅಧಿಕೃತ ಭೇಟಿಗೆ ನನಗೆ ಅನುಮತಿ ನೀಡಲು ನಿರ್ಧರಿಸಿದೆ.

ಜೂನ್ 19 ರಂದು ನಾನು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿದೆ. ಈ ವಿಷಯ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಕಟವಾಯಿತು. ಅದೇ ದಿನದ ಸಂಜೆ ವಿದೇಶಾಂಗ ಸಚಿವಾಲಯ ತನ್ನ ಹಿಂದಿನ ನಿರಾಕರಣೆಯನ್ನು ರದ್ದುಗೊಳಿಸಿ ಜೂನ್ 19 ರಂದು ನಿರಾಕ್ಷೇಪಣಾ ಅನುಮತಿಯನ್ನು ನೀಡಿದೆ. ಈ ನಿರ್ಧಾರ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

ಮೊದಲನೆಯದಾಗಿ ಅನುಮತಿಯನ್ನು ನಿರಾಕರಿಸಿದ್ದು ಯಾಕೆ? ವಿಷಯವು ಸಾರ್ವಜನಿಕವಾಗಿ ಬಹಿರಂಗವಾದ ನಂತರ ಹೊಣೆಗಾರಿಕೆಯನ್ನು ತಪ್ಪಿಸಲು ಹಿಂದಿನ ಆದೇಶವನ್ನು ಈಗ ರದ್ದುಗೊಳಿಸಲಾಗಿದೆಯೇ?

ಮುಖ್ಯ ಕಾರ್ಯಕ್ರಮಗಳು ಮುಗಿದ ನಂತರ ಅಥವಾ ಪೂರ್ಣಗೊಳ್ಳುವ ಹಂತದಲ್ಲಿದ್ದ ನಂತರ ಅನುಮತಿ ನೀಡುವುದರ ಅರ್ಥವೇನು? ತಡವಾಗಿ ಅನುಮೋದನೆಯನ್ನು ತೋರಿಸುವ ಮೂಲಕ ವಿದೇಶಾಂಗ ಸಚಿವಾಲಯವು ಈಗ ಮೂಲ ನಿರ್ಧಾರವನ್ನು ವಿವರಿಸುವುದನ್ನು ತಪ್ಪಿಸುತ್ತದೆಯೇ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಎತ್ತಿನ ಹೊಳೆ ನೀರು ಬಂದಿಲ್ಲ: ಹೋರಾಟ ರೂಪಿಸಿಲು ಬಸವರಾಜ ಬೊಮ್ಮಾಯಿ ಕರೆ

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಎತ್ತಿನ ಹೊಳೆ ನೀರು ಬಂದಿಲ್ಲ: ಹೋರಾಟ ರೂಪಿಸಿಲು ಬಸವರಾಜ

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಎತ್ತಿನ ಹೊಳೆ ನೀರು ಬಂದಿಲ್ಲ, ಕೊರಟಗೆರೆಯಲ್ಲಿ ಕಾಂಗ್ರೆಸ್ ನವರು ವಿರೋಧ ಮಾಡಿದ್ದರಿಂದ ನೀರಿನ ಸಂಗ್ರಹಕ್ಕೆ ಅವಕಾಶ ಇಲ್ಲ: ಬಸವರಾಜ ಬೊಮ್ಮಾಯಿ (Basavaraja Bommai)

[ccc_my_favorite_select_button post_id="121723"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]