We will take away Yettinahole water to protect the interests of farmers: DCM DK Shivakumar

ದೊಡ್ಡಬಳ್ಳಾಪುರ: ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ – ಡಿಸಿಎಂ ಡಿಕೆ ಶಿವಕುಮಾರ್

ದೊಡ್ಡಬಳ್ಳಾಪುರ: “ನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ನಿಮ್ಮ ಸಲಹೆಗಳನ್ನು ಸ್ವೀಕರಿಸಿ, ನಿಮಗೆ ಹೆಚ್ಚು ತೊಂದರೆಯಾಗದಂತೆ ಎತ್ತಿನಹೊಳೆ ಯೋಜನೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ರೈತರಿಗೆ ಭರವಸೆ ನೀಡಿದರು.

ಎತ್ತಿನಹೊಳೆ ಯೋಜನೆ ಸಂಬಂಧ 5 ಟಿಎಂಸಿ ನೀರನ್ನು ಸಂಗ್ರಹಿಸಲು ದೊಡ್ಡಬಳ್ಳಾಪುರಕ್ಕೆ ಹೊಂದಿಕೊಂಡಿರುವ ಕೊರಟಗೆರೆ ತಾಲೂಕು ಪೂಚನಹಳ್ಳಿಯಲ್ಲಿ ಬಳಿ ಬೈರಗೊಂಡಲು ಜಲಾಶಯ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾಮಗಾರಿಗಳ ಸ್ಥಳವನ್ನು ಶನಿವಾರ ಪರಿಶೀಲಿಸಿದರು.

ನಂತರ ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುವ ಸ್ಥಳೀಯ ಗ್ರಾಮಸ್ಥರ ಜೊತೆ ಮಾತನಾಡಿ, ಅವರ ಸಲಹೆ ಸ್ವೀಕರಿಸಿದರು. ಇದೇ ವೇಳೆ ಅವರಿಗೆ ಅನ್ಯಾಯ ಆಗದಂತೆ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿದರು.

ಈ ವೇಳೆ ಸ್ಥಳೀಯ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ. ಭೈರಗೊಂಡಲು ಜಲಾಶಯ ಮಾಡಿದರೆ 5 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಇದರಿಂದ 5 ಸಾವಿರ ಎಕರೆ ಪ್ರದೇಶ ಮುಳುಗಡೆಯಾಗಲಿದೆ” ಎಂದರು.

“ಹಾಸನ ಮಾರ್ಗವಾಗಿ ಪೈಪ್ ಲೈನ್ ಕೆಲಸ ಪೂರ್ಣಗೊಂಡು ಇಲ್ಲಿಯವರೆಗೂ ಬಂದಿದೆ. ಮುಂದೆ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲೂ ಪೈಪ್ ಲೈನ್ ಕೆಲಸ ಆರಂಭಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವನಾದ ಬಳಿಕ ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ದೊಡ್ಡಬಳ್ಳಾಪುರದಲ್ಲಿ (ಎಕರೆಗೆ 32 ಲಕ್ಷ) ಒಂದು ಬೆಲೆ, ಕೊರಟಗೆರೆ ಭಾಗದಲ್ಲಿ (20 ಲಕ್ಷ) ಒಂದು ಬೆಲೆ ನೀಡಲಾಗುತ್ತಿದೆ. ಪರಿಹಾರ ಸಮಾನವಾಗಿ ನೀಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಈ ವಿಚಾರ ಬಗೆಹರಿಸಲು ತೀರ್ಮಾನ ಕೈಗೊಳ್ಳುವ ಜವಾಬ್ದಾರಿಯನ್ನು ಪರಮೇಶ್ವರ್ ಅವರಿಗೆ ನೀಡಿದೆವು” ಎಂದು ಹೇಳಿದರು.

“ಕೋಲಾರ, ಚಿಕ್ಕಬಳ್ಳಾಪುರಕ್ಕೆ ನೀರು ತೆಗೆದುಕೊಂಡು ಹೋಗಲೇ ಬೇಕು. ನಿಮಗೆ ಭೂಮಿ ಬಿಟ್ಟುಕೊಡಲು ಇಚ್ಛೆ ಇಲ್ಲ. ಆದರೂ ಯೋಜನೆ ಮಾಡಲೇ ಬೇಕು. ಇದಕ್ಕೆ ಪರಿಹಾರ ಏನು? ನಿಮಗೆ ಯಾವ ರೀತಿ ಸಹಾಯ ಮಾಡಬಹುದು ಎಂದು ನಿಮ್ಮ ಜತೆ ಚರ್ಚಿಸಲು ಬಂದಿದ್ದೇನೆ. ನಿಮಗೆ ಸಹಾಯ ಮಾಡಲು ಬಂದಿದ್ದೇನೆ ಹೊರತು, ನಿಮಗೆ ತೊಂದರೆ ಮಾಡಲು ಬಂದಿಲ್ಲ. ಈ ಯೋಜನೆ ಜಾರಿಗೆ ನೀವೇ ಪರಿಹಾರ ಹೇಳಿ” ಎಂದರು.

“ಈ ಯೋಜನೆಗಾಗಿ 17 ಸಾವಿರ ಕೋಟಿ ಬಂಡವಾಳ ಹಾಕಿದ್ದೇವೆ. ಬಹುತೇಕ ಕಡೆಗಳಲ್ಲಿ ಕಾಮಗಾರಿ ಮುಗಿದಿವೆ. ಹೀಗಾಗಿ ಈ ಯೋಜನೆ ಜಾರಿ ಮಾಡಲೇಬೇಕು. ನೀವು ಬೈದರೂ ಸರಿ, ಸಲಹೆ ನೀಡಿದರೂ ಸರಿ. ನಿಮ್ಮ ಮಾತನ್ನು ಆಲಿಸಿ, ನಿಮ್ಮ ಸಲಹೆ ಸ್ವೀಕರಿಸಲು ಬಂದಿದ್ದೇನೆ. ನಾವು ಇಲ್ಲಿ ಯಾರಿಂದಲೂ ಜಮೀನನ್ನು ಪುಕ್ಕಟೆಯಾಗಿ ಕಿತ್ತುಕೊಳ್ಳಲು ಬಂದಿಲ್ಲ. ನಿಮ್ಮನ್ನು ಬಲವಂತವಾಗಿ ಒಕ್ಕಲು ಎಬ್ಬಿಸುವುದಿಲ್ಲ” ಎಂದು ಭರವಸೆ ನೀಡಿದರು.

“ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಸರ್ಕಾರ ಭೂಸ್ವಾಧೀನಪಡಿಸಿಕೊಳ್ಳುವ ರೈತರಿಗೆ ಮಾರುಕಟ್ಟೆ ಬೆಲೆಗಿಂತ 4 ಪಟ್ಟು, ಬೆಂಗಳೂರಿನಲ್ಲಿ 2 ಪಟ್ಟು ಪರಿಹಾರ ನೀಡಲು ಕಾನೂನು ತಂದಿದ್ದಾರೆ” ಎಂದರು.

“ಈ ಭಾಗದ ಜನ ಜಲಾಶಯವನ್ನು ಮುಂದೆ ಮಾಡಿ ಎಂದು ಪಟ್ಟು ಹಿಡಿದಿರುವುದಾಗಿ ನನಗೆ ಮಾಹಿತಿ ಬಂತು. ಹೀಗಾಗಿ ನಾನೇ ಬಂದು ಪರಿಸ್ಥಿತಿ ನೋಡಿ ಪರಿಶೀಲನೆ ಮಾಡಲು ಬಂದಿದ್ದೇನೆ. ನಿಮ್ಮ ಎಲ್ಲಾ ಅಭಿಪ್ರಾಯ, ಸಲಹೆ ಸ್ವೀಕರಿಸಿದ್ದೇನೆ” ಎಂದರು.

ಈ ವೇಳೆ ಮಾತನಾಡಿದ ಗ್ರಾಮಸ್ಥರು, “ಈ ಭಾಗದಲ್ಲಿರುವ ರೈತರು ಬಡವರು. ಎಲ್ಲರೂ 1 ಅಥವಾ 2 ಎಕರೆ ಭೂಮಿ ಹೊಂದಿರುವ ರೈತರು. ಹೀಗಾಗಿ ಇಲ್ಲಿ ಜಲಾಶಯ ನಿರ್ಮಾಣ ಮಾಡಬೇಡಿ. ಇನ್ನು ಮುಂದೆ ಕಣಿವೆ ಪ್ರದೇಶದಲ್ಲಿ ಎರಡು ಅಣೆಕಟ್ಟು ನಿರ್ಮಿಸಲು ಅವಕಾಶವಿದೆ. ಈ ಹಿಂದೆ ದೇವದುರ್ಗದಲ್ಲಿ ಅಣೆಕಟ್ಟು ನಿರ್ಮಿಸಲು ಉದ್ದೇಶಿಸಲಾಗಿತ್ತು. ಜಲಾಶಯವನ್ನು ಬೇರೆಡೆ ನಿರ್ಮಿಸಿ” ಎಂದು ಮನವಿ ಸಲ್ಲಿಸಿದರು.

“ನೀವು ಈ ಜಲಾಶಯಕ್ಕೆ ಸೂಚಿಸಿರುವ ಪರ್ಯಾಯ ಜಾಗವನ್ನು ಪರಿಶೀಲನೆ ಮಾಡುತ್ತೇನೆ. ನಿಮ್ಮ ಸಲಹೆಗಳನ್ನು ಪರಿಶೀಲನೆ ಮಾಡುತ್ತೇನೆ. ನಂತರ ಸಚಿವ ಸಂಪುಟ ಸಭೆಯಲ್ಲಿ ನಾನು ವರದಿ ಪ್ರಸ್ತಾಪಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ಆದಷ್ಟು ನಷ್ಟವನ್ನು ಕಡಿಮೆ ಮಾಡಿ ಈ ಯೋಜನೆ ಜಾರಿ ಮಾಡುತ್ತೇವೆ. ನಿಮ್ಮೆಲ್ಲರ ಹಿತವನ್ನು ಕಾಯುತ್ತೇವೆ” ಎಂದು ತಿಳಿಸಿದರು.

ಈ ವೇಳೆ ಸಚಿವ ಕೆಹೆಚ್ ಮುನಿಯಪ್ಪ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಸೇರಿದಂತೆ ಅನೇಕರು ಹಾಜರಿದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!