Astrology: The work is likely to be interesting.

ದಿನ ಭವಿಷ್ಯ: ಈ ರಾಶಿಯವರಿಗೆ ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ

Astrology: ಭಾನುವಾರ, ಜೂನ್ 22, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇತರರ ಹಿತಾಸಕ್ತಿಗಳಂತೆ ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿಯಲ್ಲಿ ಕೆಲಸ ಬೇಸರಗಳು ಎದುರಾಗಬಹುದು. ಕುಗ್ಗದಿರಿ ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾ ವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ತಪ್ಪುಗಳನ್ನು ಒಪ್ಪಿ ಕೊಂಡುಬಿಡಿ ಶಾಂತಿಯುತ ಜೀವನ ನಿಮ್ಮದಾಗಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ.(ಭಕ್ತಿ ಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರಗಳ ಕೈಗೊಳ್ಳಿ. ದೀರ್ಘಾವಧಿಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳು ವುದು ಅಗತ್ಯ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವೃತ್ತಿಪರ ವ್ಯವಹಾರ ಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಜವಾಬ್ದಾರಿಗಳ ಉತ್ತಮ ನಿರ್ವಹಣೆಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ.(ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಸಿಂಹ ರಾಶಿ: ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ.ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿ ರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ.ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾ ಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯ ನಿರತರಾಗಿರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಹೊಸ ವ್ಯಾಪಾರ- ವಹಿವಾಟುಗಳ ಕುರಿತು ಭಯ ಬೇಡ.ಮುಂದೆ ಹೆಜ್ಜೆ ಇಡಿ,ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯಮಾಡಿ.(ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಶ್ಚಿಕ ರಾಶಿ: ಸ್ಥಾನಮಾನದ ಬಯಕೆ ಈಡೇರಲಿದೆ.ಆದರೆ,ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ.ನಿಮ್ಮ ಪರಿ ಶ್ರಮ ಕೂಡ ಮುಖ್ಯವಾಗುತ್ತದೆ.
(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಆತ್ಮವಿಶ್ವಾಸ ವಿರಲಿ.ನೀವು ಕೈಹಾಕುವ ಕೆಲಸ ಗಳು ಕಾರ್ಯ ಸಾಧ್ಯವಾಗಲಿದೆ. ಆದರೆ, ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರುವ ವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು.
(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ.(ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದುಕೊಳ್ಳುತ್ತವೆ ಮತ್ತು ನಿಮ್ಮ ಕೆಲಸ ಪೂರ್ಣಗೊಳ್ಳು ತ್ತದೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದ್ವಾದಶಿ
ನಕ್ಷತ್ರ: ಭರಣಿ ನಕ್ಷತ್ರ.

ರಾಹುಕಾಲ: 04:30PM ರಿಂದ 6:00PM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 12:00PM ರಿಂದ 01:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A s/o ಡಾ.ಜಿ ಶ್ರೀನಿವಾಸ ರಾಘವನ್. ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!