BJP's mass movement against the state government: Basavaraj Bommai

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ. ಜನರ ವಿಶ್ವಾಸದೊಂದಿಗೆ ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ವರಗೆ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಂದಿದೆ.

ಆಡಳಿತ ಪಕ್ಷದ ಶಾಸಕರು ಮಾತಾಡಿದರೂ ಸಿಎಂ ಹಾಗೂ ಡಿಸಿಎಂ ತುಟಿ ಪಿಟಕ್ ಅನ್ನುತ್ತಿಲ್ಲ. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ. ಸಚಿವ ಸಂಪುಟದಲ್ಲೂ ಸಾಮರಸ್ಯ ವಿಶ್ವಾಸ ಇಲ್ಲ. ಸಚಿವರು ಸಂಪುಟದಲ್ಲಿ ಎತ್ತುವ ಪ್ರಶ್ನೆಗಳಿಗೆ ಸ್ಪಂದನೆ ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಬಹಿರಂಗವಾಗಿ ಪತ್ರ ಬರೆಯುತ್ತಿದ್ದಾರೆ ಎಂದರು.

ಮಳೆ ಬಂದರೂ ಪರಿಹಾರ ಇಲ್ಲ. ಬೆಳೆ ಹಾನಿಗೆ ಪರಿಹಾರ ಇಲ್ಲ. ಮನೆ ಕುಸಿದರೂ ಪರಿಹಾರ ಇಲ್ಲ. ಯಾವುದೇ ರೀತಿ ಜನ ಸ್ಪಂದನೆ ಕೆಲಸ ಆಗ್ತಾ ಇಲ್ಲ. ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಪ್ರಾರಂಭ ಆಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ಯಾವ ವಿಷಯ ಇದೆ ಅದನ್ನು ತೆಗೆದುಕೊಂಡು ಜನರ ವಿಶ್ವಾಸದೊಂದಿಗೆ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ.

ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜೊತೆ ಚರ್ಚೆ, ಚಿಂತನ ಮಂಥನ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಎಲ್ಲರೂ ಸೇರಿ ಶೀಘ್ರದಲ್ಲೇ ಜನಾಂದೋಲನ ಪೂರ್ವಭಾವಿ ಸಭೆ ಮಾಡುತ್ತೇವೆ ಎಂದು ಹೇಳಿದರು.

ಎಲ್ಲರೂ ಪಾಲುದಾರರು

ಈಗಾಗಲೇ ಸರ್ಕಾರದ ವಿರುದ್ದ ಪಿ.ಡಬ್ಲು ಡಿ ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ಲಿಕ್ಕರ್ ಶಾಪ್ ಅಸೋಸಿಯೇಷನ್ ನವರು ಎಲ್ಲದಕ್ಕೂ ಹಣ ವಸೂಲಿ ಮಾಡುತ್ತಿದ್ದಾರೆ, ಅಧಿಕಾರಿಗಳ ವರ್ಗಾವಣೆಗೂ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಕಂಪ್ಲೇಂಟ್ ಮಾಡಿದ್ದಾರೆ.

ಕೆ.ಇ.ಬಿ ಕಾಂಟ್ರಾಕ್ಟರ್ಸ್ 500 ರೂ. ಬೆಲೆಯ ಸ್ಮಾರ್ಟ್ ಮೀಟರ್ ಗೆ 4 ರಿಂದ 5 ಸಾವಿರ ವಸೂಲಿ ಮಾಡುತ್ತಿದ್ದಾರೆ ಎಂದು ಕಂಪ್ಲೇಂಟ್ ಮಾಡಿದ್ದಾರೆ. ಎಲ್ಲಾ ಅಸೋಸಿಯೇಷನ್ ದವರು ಲಂಚಾವತಾರದ ಬಗ್ಗೆ ಬಹಿರಂಗಗೊಳಿಸಿದರೂ ಸರ್ಕಾರ ಇದಕ್ಕೆ ಯಾವುದೇ ರೀತಿಯ ಸ್ಪಂದನೆ ಮಾಡದಿರುವುದನ್ನು ನೋಡಿದರೆ ಎಲ್ಲರೂ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಜಿಲ್ಲಾಡಳಿತ ಹೊಣೆ

ರೈತರ ಆತ್ಮಹತ್ಯೆ ಪರಿಶೀಲನೆ ವ್ಯವಸ್ಥೆ ಮಾಡುವುದು ವ್ಯವಸ್ಥೆನೇ ಇದೆ. ಸಚಿವ ಶಿವಾನಂದ ಪಾಟೀಲ್ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಮಾತುಗಳನ್ನಾಡಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳ ಹೊಣೆ ಜಿಲ್ಲಾಡಳಿತ ಹೊರಬೇಕು, ಸರ್ಕಾರ ಪರಿಹಾರ ಕೊಡಬೇಕು. ರೈತ ಸಂಪರ್ಕ ಕೇಂದ್ರದಿಂದ ನಕಲಿ ಬೀಜ ಕೊಟ್ಟಿದಾರೆ. ಸರ್ಕಾರವೇ ಡುಬ್ಲಿಕೇಟ್ ಮಾಡಿದ ಹಾಗೆ ಆಯಿತು. ಪಕ್ಕದ ಧಾರವಾಡ ಜಿಲ್ಲೆಯಲ್ಲಿ ಚೆನ್ನಾಗಿ ಬೀಜಗಳು ಹುಟ್ಟಿದೆ. ಅಲ್ಲಿ ಮಧ್ಯ ಪ್ರದೇಶದಿಂದ ತರಿಸಿದ್ದಾರೆ.

ಮಹಾರಾಷ್ಟ್ರದಿಂದ ತರಿಸಿದ್ದು ಇಲ್ಲಿದೆ. ಕೃಷಿ ಸಚಿವರು ಈ ಬಗ್ಗೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!