ರಾಜ್ಯ ಸರ್ಕಾರದ “ಘಾಟಿ ಇಶಾ” ಪ್ರವಾಸಕ್ಕೆ ಪ್ರಶಂಸೆ: ಪ್ರವಾಸಿ ತಾಣವಾದ ದೊಡ್ಡಬಳ್ಳಾಪುರದ ನೆಲದಾಂಜನೇಯ ಸ್ವಾಮಿ ದೇವಾಲಯ..!

Praise for the state government's "Ghati Isha" tour: Doddaballapura a tourist destination

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಇತ್ತೀಚೆಗೆ ಚಾಲನೆ ನೀಡಿದ ಘಾಟಿ ಇಶಾ ಫೌಂಡೇಶನ್ ಪ್ಯಾಕೇಜ್ (Ghati Isha Foundation Package) ಪ್ರವಾಸ-2ದಲ್ಲಿ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯಕ್ಕೆ ಯಾತ್ರಾತ್ರಿಗಳು ಭೇಟಿ ನೀಡಿ, ಸ್ವಾಮಿಯ ದರ್ಶನ ಪಡೆದು ಪ್ರವಾಸದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಘಾಟಿ ಇಶಾ ಫೌಂಡೇಶನ್ ಪ್ಯಾಕೇಜ್ ಪ್ರವಾಸ-2ದಲ್ಲಿ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯ, ಘಾಟಿ ಸುಬ್ರಹ್ಮಣ್ಯ ದೇವಾಲಯ, ಮುದ್ದೇನಹಳ್ಳಿಯ ಜ್ಞಾನ ತೀರ್ಥ, ಪಂಚನದಿ ಕ್ಷೇತ್ರ ಪಾಪಾಗ್ನಿ ಮಠ, ಕಲ್ಯಾಣಿ ಕಾರಂಜಿ ಮತ್ತು ಚಿಕ್ಕಬಳ್ಳಾಪುರ ಇಶಾ ಫೌಂಡೇಷನ್ ಕ್ಷೇತ್ರಗಳು ಸೇರಿದೆ.

ಬೆಳಿಗ್ಗೆ 9 ಗಂಟೆಯಿಂದ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಟು ಸಂಜೆ 7 ಗಂಟೆಗೆ ವಾಪಾಸಾಗಲಿದೆ. ಪ್ರಯಾಣದದ 600 ರೂಗಳಗಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಕ್ಷೇತ್ರವು ಪ್ರಖ್ಯಾತಿಯಾಗಿದ್ದು, ಹೆಚ್ಚಿನ ಯಾತ್ರಿಕರು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸುತ್ತಾರೆ. ಆದರೆ ದೊಡ್ಡಬಳ್ಳಾಪುರದ ಪುರಾತನ ದೇವಾಲಯವಾದ ನಗರದ ಬಸ್ ನಿಲ್ದಾಣದ ಸಮೀಪದ ಶ್ರೀ ನೆಲದಾಂಜನೇಯಸ್ವಾಮಿ ದೇವಾಲಯವು ಪ್ರವಾಸದ ಪಟ್ಟಿಯಲ್ಲಿ ಇದೇ ಮೊದಲ ಬಾರಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ಈ ದೇವಾಲಯಕ್ಕೆ 600 ವರ್ಷಗಳ ಇತಿಹಾಸವಿದ್ದು, ಇದನ್ನು ಕೃಷ್ಣದೇವರಾಯನ ಕಾಲದಲ್ಲಿ ಕಟ್ಟಿರುವ ಬಗ್ಗೆ ದೇವಾಲಯದಲ್ಲಿ ಕುರುಹುಗಳಿವೆ. ಮಣ್ಣಿನಲ್ಲಿ ಮುಚ್ಚಿ ಹೋಗಿದ್ದ ಈ ದೇವಾಲಯ ನೆಲದಡಿಯಲ್ಲಿ ಸಿಕ್ಕಿದ್ದರಿಂದ ಇದು ನೆಲದಾಂಜನೇಯಸ್ವಾಮಿ ಎಂದು ಹೆಸರಾಗಿದೆ. ದೇವಾಲಯದ ದ್ವಾರದಲ್ಲಿ ಆಲಿಂಗನ ರಾಮಾಂಜಿನೇಯ ವಿಗ್ರಹವಿದೆ.

ಆವರಣದಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ಪ್ರತಿಷ್ಟಾಪಿಸಿರುವ 15 ಅಡಿ ಎತ್ತರದ ಕಲ್ಲಿನ ಗದೆ, ಅಶ್ವತ್ಥ ಕಟ್ಟೆ ಹಾಗೂ ಅರಳಿ, ಅತ್ತಿ, ಬಿಲ್ವ,ಬನ್ನಿ ಹಾಗೂ ಬೇವು ಪಂಚ ವೃಕ್ಷಗಳಿವೆ.

ಆಂಜನೇಯಸ್ವಾಮಿಗೆ ನೇರವಾಗಿ ಭಕ್ತರೇ ಗರ್ಭಗುಡಿಗೆ ಹೋಗಿ ನಮಸ್ಕರಿಸಿ ಪೂಜಿಸುವ ಆಚರಣೆ ಹಿಂದಿನಿಂದಲೂ ಬಂದಿದ್ದು, ಭಕ್ತರ ಸಂಕಷ್ಟಗಳನ್ನು ಈಡೇರಿಸುವ ಶಕ್ತಿ ಆಂಜನೇಯಸ್ವಾಮಿಯದ್ದಾಗಿದೆ ಎಂದು ನೆಲದಾಂಜನೇಯಸ್ವಾಮಿ ಸೇವಾ ಟ್ರಸ್ಟ್‌ನ ಪ್ರಮುಖರು ಯಾತ್ರಾತ್ರಿಗಳಿಗೆ ದೇವಾಲಯದ ಪರಿಚಯ ಮಾಡಿಕೊಟ್ಟರು.

ಬೆಂಗಳೂರಿನ ಸಮೀಪದಲ್ಲಿಯೇ ಇಂತಹ ಪುರಾತನ ದೇವಾಲಯಗಳಿದ್ದು, ಇವುಗಳ ಬಗ್ಗೆ ನಮಗೆ ಹೆಚ್ಚಿನ ಅರಿವು ಮೂಡಬೇಕಿದೆ. ದೇವಾಲಯದ ಇತಿಹಾಸ ಹಾಗೂ ಮಹಿಮೆ ತಿಳಿದು ಸಂತಸವಾಗಿದ್ದು, ಘಾಟಿ ಇಶಾ ಫೌಂಡೇಶನ್ ಪ್ಯಾಕೇಜ್ ಪ್ರವಾಸ ಒಳ್ಳೆಯ ಅನುಭವ ನೀಡಿದೆ ಎಂದು ಯಾತ್ರಿಕರಾದ ಜಗದೀಶ್, ಸುಕನ್ಯ ರಾಜ್ಯ ಸರ್ಕಾರದ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]