Yettinahole project contractors' meeting postponed: DCM D.K.Shivakumar

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಕೇಂದ್ರ ಸಚಿವ ಸೋಮಣ್ಣ ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.Shivakumar) ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ

“ಇಂದು ತುಮಕೂರಿನಲ್ಲಿ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ” ಎಂದು ಹೇಳಿದರು.

“ಆದ್ಯತೆ ಮೇರೆಗೆ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ. ಈ ಯೋಜನೆಗೆ ಎಲ್ಲೆಲ್ಲಿ ಸಮಸ್ಯೆ ಇದೆ ಎಂದು ಪರಿಶೀಲನೆ ಮಾಡಲು ನಾನು ತುಮಕೂರಿಗೆ ಭೇಟಿ ನೀಡಿದ್ದೇನೆ” ಎಂದರು.

ನಾನು ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. ಈ ಭಾಗದಲ್ಲಿ ನೀರನ್ನು ಯಾವ ರೀತಿ ಸಂಗ್ರಹಿಸುವುದು ಎಂಬ ತಾಂತ್ರಿಕ ಸಾಧ್ಯತೆಗಳ ಪರಿಶೀಲನೆ ನಡೆಸುತ್ತಿದ್ದೇವೆ.

ಈಗಾಗಲೇ ಸ್ಥಳೀಯ ನಾಯಕರು, ಗ್ರಾಮಸ್ಥರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಸಾರ್ವಜನಿಕರು ತಮ್ಮ ನೋವು ಹೇಳಿಕೊಂಡಿದ್ದಾರೆ. ಒಂದು ಕಡೆ ಅಣೆಕಟ್ಟು ನಿರ್ಮಾಣ ಮಾಡಬೇಕೆ, ಎರಡು ಕಡೆ ಮಾಡಬೇಕೆ ಅಥವಾ ಜನರ ಸಲಹೆಯಂತೆ ಕೆರೆಗಳನ್ನು ಬಳಸಿಕೊಂಡು ನೀರು ಸಂಗ್ರಹಿಸಬಹುದೇ ಎಂಬ ಸಾಧ್ಯತೆಗಳನ್ನು ಅಧ್ಯಯನ ಮಾಡಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷನಾಗಿ ಶಾಸಕರಿಂದ ಮಾಹಿತಿ ಸಂಗ್ರಹ

ಶಾಸಕ ಬಿ.ಆರ್ ಪಾಟೀಲ್ ಅವರ ಭೇಟಿ ಬಗ್ಗೆ ಕೇಳಿದಾಗ, “ಪಕ್ಷದ ಅಧ್ಯಕ್ಷನಾಗಿ ನಾನು ವಾಸ್ತವಾಂಶ ತಿಳಿಯಬೇಕಾಗಿತ್ತು. ಹೀಗಾಗಿ ಅವರನ್ನು ಕರೆಸಿ ಮಾತನಾಡಿದೆ. ಅವರು ತಮ್ಮ ವಿಚಾರ ಹೇಳಿದ್ದಾರೆ. ನಾನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಸಚಿವ ಜಮೀರ್ ಅವರೊಂದಿಗೂ ಮಾತನಾಡುತ್ತೇವೆ. ಈ ಮಧ್ಯೆ ನಮ್ಮ ಪಕ್ಷದ ವರಿಷ್ಠರೂ ಕೂಡ ಆಗಮಿಸುತ್ತಿದ್ದು, ಎಲ್ಲರ ಜೊತೆ ಮಾತನಾಡಿ ಮಾಹಿತಿ ಪಡೆಯಲಿದ್ದಾರೆ” ಎಂದು ತಿಳಿಸಿದರು.

ಹಲವು ಶಾಸಕರು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದು, ಇದು ಮುಖ್ಯಮಂತ್ರಿಗಳು ಆಡಳಿತದಲ್ಲಿ ಹಿಡಿತ ಕಳೆದುಕೊಳ್ಳುತ್ತಿದ್ದಾರೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಏನಾದರೂ ಇದ್ದರೆ ನಮ್ಮ ಪಕ್ಷದ ವರಿಷ್ಠರ ಜೊತೆ ನಾನು ಹಾಗೂ ಮುಖ್ಯಮಂತ್ರಿಗಳು ಮಾತನಾಡುತ್ತೇವೆ. ಆಡಳಿತದಲ್ಲಿ ಯಾವುದೇ ಹಿಡಿತ ಕಳೆದುಕೊಂಡಿಲ್ಲ. ಇದು ಮಾಧ್ಯಮಗಳ ಸೃಷ್ಟಿ” ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಸುರೇಶ್ ಬಾಬು ಅವರು ಮೊದಲು ತಮ್ಮ ಪಕ್ಷ ಸರಿಪಡಿಸಿಕೊಳ್ಳಲಿ. ತಮ್ಮ ಕಾವಲಿಯಲ್ಲಿರುವ ತೂತು ಮುಚ್ಚಿಕೊಳ್ಳಲಿ. ಜಿ.ಟಿ ದೇವೇಗೌಡ ಸೇರಿದಂತೆ ಬೇರೆ ಶಾಸಕರ ವಿಚಾರ ಸರಿಪಡಿಸಲಿ” ಎಂದು ತಿರುಗೇಟು ನೀಡಿದರು.

ದೇಶಕ್ಕಾಗಿ ಪ್ರಾಣ ಕೊಟ್ಟಿರುವವರು ಇಂದಿರಾ ಗಾಂಧಿ

ಇಂದಿರಾ ಗಾಂಧಿ ಅವರನ್ನು ಬಿಜೆಪಿ ಹಿಟ್ಲರ್ ಗೆ ಹೋಲಿಕೆ ಮಾಡಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಕೇಳಿದಾಗ, “ಬಿಜೆಪಿಯಲ್ಲಿ ಸಮಸ್ಯೆ ಇದೆ. ತುರ್ತುಪರಿಸ್ಥಿತಿ ನಂತರ ದೇಶದ ಜನ ಇಂದಿರಾ ಗಾಂಧಿ ಅವರ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದೆ. 1980ರಲ್ಲೂ ಇಂದಿರಾ ಅವರು ದೇಶವನ್ನು ಮುನ್ನಡೆಸಿದ್ದಾರೆ. ಆ ಸಮಯದಲ್ಲಿ ಜನತಾ ಪರಿವಾರ ಅಥವಾ ಬೇರೆಯವರು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಇಂದಿರಾ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈಗ ಪ್ರಚಾರಕ್ಕಾಗಿ ಬಿಜೆಪಿ ಈ ವಿಚಾರವನ್ನು ಚರ್ಚೆಗೆ ತರುತ್ತಿದ್ದಾರೆ” ಎಂದು ಹೇಳಿದರು.

“ತುರ್ತುಪರಿಸ್ಥಿತಿ ಬಂದು 50 ವರ್ಷ ಆಗಿದೆ. ಈಗ ಅದು ಮುಗಿದ ಅಧ್ಯಾಯ. ಆಗಿನಿಂದ ಈಗಿನವರೆಗೂ ಕಾಂಗ್ರೆಸ್ ಆಡಳಿತದಲ್ಲಿ ದೇಶ ಬಲಿಷ್ಠವಾಗಿ ನಿಂತಿದೆ. ಬಿಜೆಪಿ ಆಡಳಿತದಲ್ಲಿ ಯಾವ ಪರಿಸ್ಥಿತಿ ಇದೆ ಎಂದು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನಮ್ಮ ಸಹಮತವಿದೆ. ದೇಶ ಯಾವ ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿಯ ಸಂಸದರನ್ನೇ ವೈಯಕ್ತಿಕವಾಗಿ ಕೇಳಿ. ಅವರೇ ಹೇಳುತ್ತಾರೆ” ಎಂದು ತಿಳಿಸಿದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!