The historical significance of Dasera should not be forgotten in the hustle and bustle of the grand opening: Cmsiddaramaiah

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.

ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ.

ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.

ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.

ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.

ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.

ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.

ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ.

ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.

ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.

ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.

ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.

ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.

ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.

ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.

ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.

ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.

ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.

ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.

ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು ಎಂದು ಡಾ. ಹೆಚ್.ಸಿ.ಮಹದೇವಪ್ಪ ಹೇಳಿದರು.

ಮೈಸೂರು ದಸರಾ ಪ್ರಾಧಿಕಾರ ಸ್ಥಾಪಿಸಿ ಅದರ ಮೂಲಕ ದಸರಾ ವ್ಯವಸ್ಥಿತವಾಗಿ ಆಚರಿಸಬೇಕು. ಕುಳಿತುಕೊಳ್ಳುವ ಸ್ಥಳಾವಕಾಶ ಹೆಚ್ಚಿಸಬೇಕು. ಪಾರ್ಕಿಂಗ್‌ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಬೇಕು ಎಂದು ತನ್ವೀರ್‌ ಸೇಠ್ ಹೇಳಿದರು.

ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ನದಿಗಳು ತುಂಬಿದ್ದು, ಕೆಆರ್‌ಎಸ್‌ ಈ ಬಾರಿ ಬೇಗನೇ ತುಂಬಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಕಲಾ ತಂಡಗಳನ್ನು ಹೊರತುಪಡಿಸಿ ಬೇರೆ ಯಾರೂ ಓಡಾಡಲು ಅವಕಾಶ ಮಾಡಬಾರದು. ಕಲಾ ತಂಡಗಳಲ್ಲಿ ವೈವಿಧ್ಯತೆ ಇರಬೇಕು ಎಂದು ಜಿ.ಟಿ.ದೇವೇಗೌಡ ಸಲಹೆ ನೀಡಿದರು.

ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಕೋ ಫ್ರೆಂಡ್ಲಿ ಹಸಿರು ದಸರಾ ಆಚರಿಸಲು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು- ಪುಷ್ಪಾ ಅಮರನಾಥ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್‌ ಭೈರತಿ, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್‌, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!