Sleeping position

ಹರಿತಲೇಖನಿ ದಿನಕ್ಕೊಂದು ಕಥೆ: ಮಲಗುವ ವಿಧಾನ

Harithalekhani: ದಿನವಿಡೀ ಕಾರ್ಯನಿರತವಾಗಿರುವ ಶರೀರಕ್ಕೆ ವಿಶ್ರಾಂತಿ ಸಿಗಲೆಂದು ನಾವು ಮಲಗುತ್ತೇವೆ. ಆದುದರಿಂದ ‘ಯಾವ ರೀತಿಯಲ್ಲಿ ಅಥವಾ ಭಂಗಿಯಲ್ಲಿ ಮಲಗುವುದರಿಂದ ಶರೀರಕ್ಕೆ ಹೆಚ್ಚಿನ ವಿಶ್ರಾಂತಿ ಸಿಗುತ್ತದೆಯೋ, ಆ ಭಂಗಿಯು ಒಳ್ಳೆಯದು’ ಎಂಬುವುದು ಒಂದು ಸಾಮಾನ್ಯ ನಿಯಮ.

ಪ್ರತಿಯೊಬ್ಬರ ಪ್ರಕೃತಿ ಮತ್ತು ಆ ಸಮಯದ ಸ್ಥಿತಿಗನುಗುಣವಾಗಿ ವಿಶ್ರಾಂತಿ ಸಿಗುವ ಭಂಗಿಯು ಬೇರೆ ಬೇರೆ ಆಗಿರಬಹುದು. ನಾವು ಯಾವ ಭಂಗಿಯಲ್ಲಿ ಮಲಗಬೇಕು ಎಂಬುವುದು ನಮಗೆ ನಿದ್ದೆ ಬರುವ ತನಕ ಮಾತ್ರ ನಾವು ನಿರ್ಧರಿಸಬಹುದು, ಏಕೆಂದರೆ ನಿದ್ದೆ ಬಂದ ನಂತರ ನಮ್ಮ ಶರೀರದ ಸ್ಥಿತಿಯು ನಮ್ಮ ನಿಯಂತ್ರಣದಲ್ಲಿರುವುದಿಲ್ಲ.

ಅ. ಮಗುಚಿ (ಕೆಳಮುಖವಾಗಿ) ಮಲಗುವುದು

ನವಜಾತ ಶಿಶುಗಳನ್ನು ಮತ್ತು ಚಿಕ್ಕ ಮಕ್ಕಳನ್ನು ಈ ರೀತಿ ಮಲಗಿಸಿದರೆ ಅವರಿಗೆ ಶ್ವಾಸ ತೆಗೆದುಕೊಳ್ಳಲು ಅಡಚಣೆಯಾಗಬಹುದು. ಆದುದರಿಂದ ಮಕ್ಕಳನ್ನು ಈ ರೀತಿ ಮಲಗಿಸಬಾರದು. ಹಾಗೆಯೇ ಮಗುಚಿ ಮಲಗುವುದರಿಂದ ಇತರ ವಿಧಾನಗಳ ತುಲನೆಯಲ್ಲಿ ಬೆನ್ನೆಲುಬಿನ ಮೇಲೆ ಹೆಚ್ಚಿನ ಒತ್ತಡ ಬರುತ್ತದೆ.

ಆ. ಅಂಗಾತ (ಬೆನ್ನಿನ ಮೇಲೆ) ಮಲಗುವುದು

ನಾವು ನಿಂತುಕೊಂಡಾಗ ನಮ್ಮ ಬೆನ್ನೆಲುಬಿನ ಮೇಲೆ ಶೇ.100 ರಷ್ಟು ಒತ್ತಡವಿರುತ್ತದೆ ಎಂದುಕೊಳ್ಳೋಣ, ನಾವು ಅಂಗಾತ ಮಲಗಿದಾಗ ಈ ಒತ್ತಡವು ಶೇ. 75 ರಷ್ಟು ಕಡಿಮೆಯಾಗಿ ಕೇವಲ ಶೇ.35 ರಷ್ಟೇ ಉಳಿಯುತ್ತದೆ.

ಈ ರೀತಿ ಮಲಗಿದಾಗ ಬೆನ್ನಿನ ಎಲುಬುಗಳ ಮೇಲಿನ ಒತ್ತಡವು ಇತರ ಭಂಗಿಗಳ ತುಲನೆಯಲ್ಲಿ ಅತ್ಯಂತ ಕಡಿಮೆಯಾಗಿರುತ್ತದೆ. ಆದುದರಿಂದ ಬೆನ್ನೆಲುಬಿನ ತೊಂದರೆಗಳಿರುವವರು ಈ ರೀತಿ ಮಲಗಿದರೆ ಅವರಿಗೆ ಸುಖಕರ ನಿದ್ದೆ ಸಿಗುತ್ತದೆ. ಅಂಗಾತ ಮಲಗುವಾಗ ಮಂಡಿಗಳ ಕೆಳಗೆ ಒಂದು ಚಿಕ್ಕ ದಿಂಬನ್ನು ಇಟ್ಟುಕೊಂಡರೆ ಬೆನ್ನೆಲುಬಿನ ಒತ್ತಡ ಇನ್ನಷ್ಟು ಕಡಿಮೆಯಾಗುತ್ತದೆ.

ಅಂಗಾತ (ಬೆನ್ನಿನ ಮೇಲೆ) ಮಲಗುವುದು ಮತ್ತು ಗೊರಕೆ ಹೊಡೆಯುವುದರ ಸಂಬಂಧವೇನು?

ಯಾರಿಗಾದರೂ ಗೊರಕೆ ಹೊಡೆಯುವ ಅಭ್ಯಾಸವಿದ್ದರೆ, ಅವರು ಅಂಗಾತ ಮಲಗಿದರೆ ಅದು ಹೆಚ್ಚಾಗುತ್ತದೆ. ನಿದ್ದೆಯಲ್ಲಿದ್ದಾಗ ಅನೇಕ ಕಾರಣಗಳಿಂದ ಉಸಿರಾಟಕ್ಕೆ ತೊಂದರೆಯಾದಾಗ ಜನರು ಗೊರಕೆ ಹೊಡೆಯುತ್ತಾರೆ.

ಅಂಗಾತ ಮಲಗಿದಾಗ ಶ್ವಾಸನಳಿಕೆಯಲ್ಲಿ ಅಡಚಣೆಗಳು ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಯಾವುದಾದರೊಂದು ಮಗ್ಗುಲಿನಲ್ಲಿ ಮಲಗುವುದರಿಂದ ಶ್ವಾಸನಳಿಕೆಯಲ್ಲಿ ಅಡಚಣೆಯು (ಉದಾಹರಣೆಗೆ ಶಿಥಿಲವಾದ ಸ್ನಾಯುಗಳಿಂದಾಗಿ ಶ್ವಾಸ ನಳಿಕೆಯಲ್ಲಿ ಅಡ್ಡಿ ಬಂದು ಶ್ವಾಸೋಚ್ಛ್ವಾಸಕ್ಕೆ ಆಗುವ ತೊಂದರೆ) ದೂರವಾಗಿ ಗೊರಕೆ ಹೊಡೆಯುವುದನ್ನು ತಡೆಯಬಹುದು. ಈ ರೀತಿ ಮಗ್ಗುಲಿನಲ್ಲಿ ಮಲಗುವ ಅನೇಕರಿಗೆ ಶಾಂತ ನಿದ್ರೆಯ ಅನುಭವವು ಸಿಕ್ಕಿದೆ.

ಇ. ಒಂದು ಮಗ್ಗುಲಿನಲ್ಲಿ ಮಲಗುವುದು

ಮಗ್ಗುಲಿನಲ್ಲಿ ಮಲಗುವುದರಿಂದ ಬೆನ್ನೆಲುಬಿನ ಮೇಲೆ ನಿಂತಿಕೊಂಡಿರುವ ಸ್ಥಿತಿಯ ಶೇ.75 ರಷ್ಟು ಒತ್ತಡವಿರುತ್ತದೆ. ಬಲ ಮಗ್ಗುಲಿನಲ್ಲಿ ಮಲಗುವುದರಿಂದ ಚಂದ್ರನಾಡಿಯು, ಎಡ ಮಗ್ಗುಲಿನಲ್ಲಿ ಮಲಗುವುದರಿಂದ ಸೂರ್ಯನಾಡಿಯು ಸಕ್ರಿಯವಾಗಲು ಸಹಾಯವಾಗುತ್ತದೆ.

ಮಲಗುವಾಗ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಮಾಡಿ, ಒಂದು ಮಗ್ಗುಲಿನಲ್ಲಿ ಮಲಗಬೇಕು.

ಧರ್ಮಶಾಸ್ತ್ರಗಳಲ್ಲಿ ‘ಮಗ್ಗುಲಿನಲ್ಲಿ ಮಲಗಬೇಕು’ ಎಂದು ಹೇಳಿರುವುದರಿಂದ, ಬೇರೆ ಭಂಗಿಯಲ್ಲಿ ಮಲಗಲು ಯಾವುದೇ ವೈದ್ಯಕೀಯ ಕಾರಣವಿಲ್ಲದಿದ್ದರೆ, ಅಂತಹವರು ಮಗ್ಗುಲಿನಲ್ಲೇ ಮಲಗಲು ಪ್ರಯತ್ನಿಸಬೇಕು.

ನಾವು ಯಾವುದಾದರೊಂದು ಮಗ್ಗುಲಿನಲ್ಲಿ ಮಲಗುವುದರಿಂದ ಕೆಳಗಿನ ದಿಕ್ಕಿನಲ್ಲಿ ಇರುವ ಮೂಗಿನ ಹೊಳ್ಳೆಯು ನಿಧಾನವಾಗಿ ಮುಚ್ಚಿಕೊಳ್ಳುತ್ತದೆ. ಅದು ಸಾಧ್ಯವಾದಷ್ಟು ಮುಚ್ಚಿಕೊಂಡ ಮೇಲೆ ನಾವು ನಿದ್ದೆಯಲ್ಲಿಯೇ ಮಗ್ಗುಲನ್ನು ಬದಲಿಸುತ್ತೇವೆ. ಆಗ ಮೂಗಿನ ಆ ಹೊಳ್ಳೆಯು ನಿಧಾನವಾಗಿ ತೆರೆದು ಇನ್ನೊಂದು ಹೊಳ್ಳೆಯು ಮುಚ್ಚಿಕೊಳ್ಳುತ್ತದೆ.

ಈ ರೀತಿ ಅದಲು-ಬದಲಾಗಿ ಮೂಗಿನ ಹೊಳ್ಳೆಗಳು ಮುಚ್ಚಿಕೊಳ್ಳುವುದರಿಂದ ನಾವು ನಿದ್ದೆಯಲ್ಲಿಯೇ ಸ್ವಲ್ಪ-ಸ್ವಲ್ಪ ಸಮಯದ ನಂತರ ಮಗ್ಗುಲು ಬದಲಿಸುತ್ತೇವೆ.

ನಾವು ದಿನದ ಕಾಲು ಭಾಗದಷ್ಟು ಸಮಯ ನಿದ್ದೆಗೆಂದು ನೀಡುತ್ತೇವೆ. ಪ್ರತಿ ದಿವಸ ಇಷ್ಟು ಕಾಲಾವಧಿಯನ್ನು ಒಂದೇ ಸ್ಥಿತಿಯಲ್ಲಿ ಕಳೆದರೆ ಚರ್ಮದ ಮೇಲೆ ಸತತವಾಗಿ ಒತ್ತಡ ಬೀಳುವುದರಿಂದ ಹಾಸಿಗೆ ಹುಣ್ಣುಗಳು (ಬೆಡ್-ಸೋರ್) ಆಗುವ ಸಾಧ್ಯತೆ ಇದೆ. ನಿದ್ದೆಯಲ್ಲಿ ನಮ್ಮ ಸ್ಥಿತಿಯನ್ನು ಮಧ್ಯ-ಮಧ್ಯದಲ್ಲಿ ಬಸಲಾಯಿಸಿದರೆ ಯಾವುದೇ ಒಂದು ಅವಯವದ ಮೇಲೆ ಹೆಚ್ಚಿನ ಒತ್ತಡ ಬರುವುದಿಲ್ಲ.

ಕೃಪೆ: ವೈದ್ಯ ಮೇಘರಾಜ್ ಪರಾಡ್ಕರ್, ಸನಾತನ ಆಶ್ರಮ.

AI ಚಿತ್ರ ಬಳಸಲಾಗಿದೆ.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!