ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

BJP is talking about changing the Prime Minister; Santosh Lad explodes bomb

ಹುಬ್ಬಳ್ಳಿ: ಮೋದಿ (Modi) ನೇತೃತ್ವದ ಕೇಂದ್ರ ಸರ್ಕಾರದ ಫಾರಿನ್ ಪಾಲಿಸಿ ಫೇಲ್ ಆಗಿರುವ ಕಾರಣ ಬಿಜೆಪಿಗರು ಒಳಗೊಳಗೆ ಪ್ರಧಾನಮಂತ್ರಿ ಬದಲಾಗಬೇಕೆಂದು ಮಾತಾಡುತ್ತಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ (Santhosh Lad)ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುವ ಬಗ್ಗೆ ಕಾಂಗ್ರೆಸ್ ಶಾಸಕರು ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳುವ ಬಿಜೆಪಿಯವರು, ಪ್ರಧಾನಿ ಮೋದಿ ಅವರನ್ನ ಬದಲಾಯಿಸುವ ಬಗ್ಗೆ ಬಿಜೆಪಿ ಸಂಸದರು ಆಗ್ರಹಿಸುತ್ತಿರುವ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಖರ್ಗೆ ಅವರು ಹೇಳಿರುವುದನ್ನ ಬಿಜೆಪಿ ಟೀಕೆ ಮಾಡುತ್ತಿದೆ, ಅವರು ಸೋನಿಯಾ ಗಾಂಧಿ ಅವರ ಮೇಲಿನ ಗೌರವಕ್ಕೆ ಹಾಗೆ ಹೇಳಿದ್ದಾರೆ. ಆದರೆ ಬಿಜೆಪಿ ಅವರು ದೇಶದಲ್ಲಿ ಸಂಭವಿಸಿದ ಉಗ್ರರ ದಾಳಿ ಬಗ್ಗೆ ಬಿಜೆಪಿ ಅವರನ್ನ ಕೇಳಿ, ಅದರ ಬಗ್ಗೆ ಚರ್ಚೆ ಮಾಡುವ ಬದಲು ಸಣ್ಣ ವಿಚಾರದ ಬಗ್ಗೆ ಟೀಕೆ ಮಾಡುತ್ತಾ, ಅಜೆಂಡಾ ಸೃಷ್ಟಿಸಿ ಜನರನ್ನು ದಿಕ್ಕು ತಪ್ಪಿಸುತ್ತಾ ಸಮಯ ಕಳೆಯುತ್ತಾರೆ‌.

ದೇಶದಲ್ಲಿ ಅನೇಕ ಸಮಸ್ಯೆಗಳು ಇದೆ ರೈತರಿಗೆ ಡಿಎಪಿ ಸಿಗುತ್ತಿಲ್ಲ, ಕಾಂಪ್ಲಿಕ್ಟ್ ಸಿಗುತ್ತಿಲ್ಲ… ಇದರ ಬಗ್ಗೆ ಚರ್ಚೆ ಆಗಬೇಕಲ್ವಾ.. ಆದರೆ ಅದರೆ ಬಿಜೆಪಿಯವರು ಇದರ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ.

ಚೈನಾ ವಸ್ತುಗಳನ್ನು ಬಹುಷ್ಕರಿಸಲು ಪ್ರಧಾನಿಗಳು ಕರೆ ನೀಡುತ್ತಾರೆ. ಮತ್ತೆ ಇಂಪೋರ್ಟ್ ಮಾಡ್ತಾ ಇರೋದ್ ಯಾರು..? ಇದರ ಬಗ್ಗೆ ಕೇಳಬೇಕಲ್ವಾ..? ಇಂಪೋರ್ಟ್ ಮಾಡೋರ್ ಇವರೇ, ಮತ್ ಇವರೇ ಬಂದು ಚೈನಾ ಪ್ರಾಡಕ್ಟ್ ಬಳಸಬೇಡಿ ಅಂತ ಹೇಳ್ತಾರೆ. ಈಗ ಯಾಕ್ ಹೇಳ್ತೀರಿ..? 11 ವರ್ಷ ಏನ್ ಮಾಡ್ತಾ ಇದ್ರೀ..? ಚೈನಾ ಅಧ್ಯಕ್ಷರ ಕರೆತಂದು ತೊಟ್ಟಲಲ್ಲಿ ತೂಗಿದ್ ಯಾರು‌‌..? ಇವತ್ ಹೇಳ್ತಾರೆ ಚೈನಾ ವಸ್ತು ತಗೋಬೇಡಿ ಅಂತ ಹೇಳ್ತಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 2g ಹಗರಣ ಕಲ್ಲಿದ್ದಲು ಹಗರಣದ ಬಗ್ಗೆ ಕಳೆದ 11 ವರ್ಷದ ಅವರೇ (ಬಿಜೆಪಿ) ಅಧಿಕಾರದಲ್ಲಿ ಇದ್ದರು. ಈಗ ಅವರೇ ವರದಿ ಕೊಟ್ಟಿದ್ದಾರೆ, ಏನ್ ವರದಿ ಕೊಟ್ಟಿದ್ದಾರೆ..? ಯಾವ ರೀತಿಯ ಹಗರಣ ನಡೆದಿಲ್ಲ ಎಂದು ವರದಿ ಕೊಟ್ಟಿದ್ದಾರೆ.

ಮತ್ತೆ ದೇಶಕಂಡ ಮಹಾನ್ ಆರ್ಥಿಕ ತಜ್ಞರನ್ನ ಭಯೋತ್ಪಾದಕ ಎಂದು ಬಿಜೆಪಿ ಅವರು ಅವಹೇಳನ ಮಾಡಿದ್ದರು, ಅದರ ಬಗ್ಗೆ ಕ್ಷಮೆನೂ ಕೇಳಿಲ್ಲ. ಹಾಲಿ ಪ್ರಧಾನ ಮಂತ್ರಿ ಸಾಹೇಬರು ಕೂಡ ಮನಮೋಹನ್ ಸಿಂಗ್ ಅವರನ್ನ ಟೆರರಿಸ್ಟ್ ಎಂದಿದ್ದರು. ದಾಖಲೆ ತೆಗೆಸು ನೋಡಲಿ.

ಈಗ 11 ವರ್ಷದ ಅವಧಿಯಲ್ಲಿ ಯಾರ್ ಯಾರಿಗೆ ಎಷ್ಟು ಎಷ್ಟು ಮೈನಿಂಗ್ ಕೊಟ್ಟಿದ್ದಾರೆ, ಯಾವುದು ಎಷ್ಟು ಇಂಪೋರ್ಟ್ ಆಗಿದೆ, ಕಲ್ಲಿದ್ದಲು ಎಷ್ಟು ಇಂಪೋರ್ಟ್ ಆಗಿದೆ ಇದರ ಬಗ್ಗೆ ವರದಿ ಕೊಡ್ತಾರಾ ಕೇಳಿ ಎಂದು ಬಿಜೆಪಿ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]