Donation done with Arrogance

ಹರಿತಲೇಖನಿ ದಿನಕ್ಕೊಂದು ಕಥೆ: ಅಹಂಕಾರದಿಂದ ಮಾಡುವ ದಾನ

Harithalekhani; ದಾನವನ್ನು ಅಹಂಕಾರ ಅರ್ಥಾತ್ ‘ನನ್ನ’ ತನದಿಂದ ನೀಡಬಾರದು. ಅಹಂಕಾರದಿಂದ ಮಾಡಿರುವ ದಾನಕ್ಕೆ ಯಾವುದೇ ಲಾಭವಿರುವುದಿಲ್ಲ. ಇದರ ಮಹತ್ವವನ್ನು ಒಂದು ಕಥೆಯಿಂದ ತಿಳಿದುಕೊಳ್ಳೋಣ.

ಮಹಾಭಾರತ ಕಾಲದ ಕಥೆಯಾಗಿದೆ. ಒಬ್ಬ ಬ್ರಾಹ್ಮಣನು ಭಿಕ್ಷೆಯನ್ನು ಬೇಡಿ ತನ್ನ ಕುಟುಂಬದವರ ಹೊಟ್ಟೆಯನ್ನು ತುಂಬಿಸುತ್ತಿದ್ದನು. ಒಮ್ಮೆ ಆ ಬ್ರಾಹ್ಮಣ ಹಾಗೂ ಅವನ ಕುಟುಂಬದವರು ಊಟವನ್ನು ತಯಾರಿಸುತ್ತಿದ್ದರು.

ಅದೇ ಸಮಯದಲ್ಲಿ ಒಬ್ಬ ವೃದ್ಧ ವ್ಯಕ್ತಿ ಅವರ ಮನೆಯ ಬಾಗಿಲಿಗೆ ಬಂದನು. ಅವನು ಹಸಿದಿದ್ದನು ಮತ್ತು ಅವನು ಭಿಕ್ಷೆಯಲ್ಲಿ ಏನಾದರೂ ತಿನ್ನಲು ಕೊಡುವಂತೆ ಕೇಳಿದನು. ಬ್ರಾಹ್ಮಣ ಕುಟುಂಬದವರು ತಮ್ಮ ಸಂಪೂರ್ಣ ಊಟವನ್ನು ಆ ವೃದ್ಧ ಅತಿಥಿಗೆ ಅರ್ಪಿಸಿದರು. ಆ ವೃದ್ಧ ಅತಿಥಿ ಅನ್ನವನ್ನು ಗ್ರಹಣ ಮಾಡಿ ತೃಪ್ತನಾದನು. ತದನಂತರ ಅತಿಥಿಯು ತನ್ನ ಕೈಗಳನ್ನು ತೊಳೆದನು.

ಅದೇ ಸಮಯದಲ್ಲಿ ಅಲ್ಲಿಗೆ ಒಂದು ಮುಂಗುಸಿ ಬಂದಿತು ಮತ್ತು ಎಲ್ಲಿ ಆ ಅತಿಥಿಯು ಕೈತೊಳೆದಿದ್ದನೋ, ಆ ಸ್ಥಾನದಲ್ಲಿ ಬಿದ್ದ ನೀರಿನಲ್ಲಿ ಆ ಮುಂಗುಸಿ ಹೊರಳಾಡತೊಡಗಿತು. ಮುಂಗುಸಿಯ ಅರ್ಧಶರೀರ ಬಂಗಾರದ ಬಣ್ಣದ್ದಾಯಿತು. ಈ ವಿಷಯವು ಅರಣ್ಯದಲ್ಲಿ ಹರಡುವ ಬೆಂಕಿಯಂತೆ ಎಲ್ಲೆಡೆಯೂ ಹಬ್ಬಿತು.

ಧರ್ಮರಾಜ ಯುಧಿಷ್ಠಿರನಿಗೂ ಈ ವಿಷಯ ತಲುಪಿತು. ಆಗ ಅವನ ಮನಸ್ಸಿನಲ್ಲಿ ‘ನಾನಂತೂ ಲಕ್ಷಾಂತರ ಜನರಿಗೆ ಪ್ರತಿದಿನ ಊಟವನ್ನು ಹಾಕುತ್ತೇನೆ. ಒಂದು ವೇಳೆ ಇಲ್ಲಿಗೆ ಬಂದು ಆ ಮುಂಗುಸಿ ಹೊರಳಾಡಿದರೆ ಅದರ ಉಳಿದರ್ಧ ಭಾಗವೂ ಬಂಗಾರದ ಬಣ್ಣವಾಗುವುದು’ ಎಂದು ವಿಚಾರ ಮಾಡಿದರು.

ಯುಧಿಷ್ಠಿರನು ಒಂದು ಅನ್ನ ಛತ್ರವನ್ನು ಆಯೋಜಿಸಿದನು. ಅಲ್ಲಿಯೂ ಅದೇ ಮುಂಗುಸಿ ಬಂದಿತು ಮತ್ತು ಅದು ಅದೇ ರೀತಿ ಮಾಡಿತು; ಆದರೆ ಅದರ ಉಳಿದರ್ಧ ಶರೀರ ಮೂಲ ಬಣ್ಣದ್ದಾಗಿಯೇ ಉಳಿಯಿತು. ಧರ್ಮರಾಜನು ಇದರ ಕಾರಣವನ್ನು ಕೇಳಿದಾಗ, ಭಗವಾನ ಶ್ರೀಕೃಷ್ಣನು ‘ಹೇ ರಾಜಾ! ನೀನು ಎಷ್ಟು ಜನರಿಗೆ ಭೋಜನವನ್ನು ಬಡಿಸಬಲ್ಲೆ, ಅನ್ನದಾನ ಮಾಡಬಲ್ಲೆ ಎನ್ನುವ ಅಹಂಕಾರ ನಿನಗೆ ಇದೆ.

ಈ ಅಹಂಕಾರದ ಕಾರಣವೇ ಈ ಮುಂಗುಸಿಯ ಶರೀರ ಬಂಗಾರದ ಬಣ್ಣಕ್ಕೆ ತಿರುಗಲಿಲ್ಲ. ಆ ಬಡ ಬ್ರಾಹ್ಮಣನ ಕುಟುಂಬದವರು ಮಾತ್ರ ಮನೆಗೆ ಬಂದ ಅತಿಥಿ ಬರಿಹೊಟ್ಟೆಯಲ್ಲಿ ಹಿಂದಿರುಗಿ ಹೋಗಬಾರದು ಎಂದು ತಾವು ಬರಿಹೊಟ್ಟೆಯಲ್ಲಿದ್ದರೂ ಅತಿಥಿಗೆ ಊಟವನ್ನು ಬಡಿಸಿದರು. ಅದರ ಹಿಂದೆ ಯಾವುದೇ ಸ್ವಾರ್ಥ ಅಥವಾ ಅಹಂಕಾರವಿರಲಿಲ್ಲ’ ಎಂದು ಹೇಳಿದನು.

ಕೃಪೆ: ಸಾಮಾಜಿಕ ಜಾಲತಾಣ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!