Congress is a party of fools today; B.Y. Vijayendra

ರವಿಕುಮಾರ್ ಹೇಳಿಕೆ ವಿಚಾರ ಒಂದೆಡೆ ಇರಲಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳ ವಿರುದ್ಧ ಅವಮಾನ ಆಗುವಂತೆ ನಡೆದುಕೊಂಡಾಗ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಆಗ ಅವರು ಯಾಕೆ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರ ಹೇಳಿಕೆ ಕುರಿತು ಮಾಧ್ಯಮಗಳನ್ನು ಗಮನಿಸಿದ್ದೇನೆ. ರವಿಕುಮಾರ್ ಅವರು ಈ ಸಂಬಂಧ ಸ್ಪಷ್ಟನೆಯನ್ನೂ ನೀಡಿದ್ದಾರೆ. ತದನಂತರ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್‍ನವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾಗಿ ಮಾಹಿತಿ ಬಂದಿದೆ. ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಹೊರಟ್ಟಿಯವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ; ಎಫ್‍ಐಆರ್ ದಾಖಲಾಗಿದೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರಿಸಿದರು.

ರವಿಕುಮಾರ್ ಅವರ ವಿಚಾರ ಒಂದೆಡೆ ಇರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋದರಲ್ಲವೇ? ಆಗ ಈ ಅಸೋಸಿಯೇಷನ್ ಎಲ್ಲಿ ಹೋಗಿತ್ತು ಎಂದು ಪ್ರಶ್ನಿಸಿದರು.

ಇದೇ ಮುಖ್ಯಮಂತ್ರಿಗಳು ಇನ್ನೊಂದು ಕಡೆ ಸರಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳನ್ನು ‘ಏಯ್ ಎದ್ದೇಳು’ ಎಂದು ಅಪಮಾನ ಮಾಡಿದ್ದರು. ಆಗ ಐಎಎಸ್ ಅಸೋಸಿಯೇಷನ್ ಎಲ್ಲಿ ಹೋಗಿತ್ತು ಎಂದು ಕೇಳಿದರು. ಇದು ಕೂಡ ಚರ್ಚೆ ಆಗಲಿ. ಜನರು ಕೂಡ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.

ಎಲ್ಲ ಇಲಾಖೆಗಳಲ್ಲಿ ಸಂಬಳ ನೀಡಲಾಗದ ಪರಿಸ್ಥಿತಿ..

ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಹಳ ಜನ ಪ್ರಾರ್ಥನೆ ಮಾಡುತ್ತಿದ್ದಾರೆ; ಪ್ರಯತ್ನ ಮಾಡುತ್ತಿದ್ದಾರೆ. ಸುರ್ಜೇವಾಲಾರನ್ನು ಕರೆಸಿ ಭೂಮಿ ಪೂಜೆ, ಗುದ್ದಲಿ ಪೂಜೆ ಮಾಡಿಸಲಿದ್ದಾರೆ. ಬರುವ ದಿನಗಳಲ್ಲಿ ಏನೇನಾಗುತ್ತೋ ಕಾದು ನೋಡೋಣ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ಸಿದ್ದರಾಮಯ್ಯನವರು ರಾಜೀನಾಮೆ ನೀಡಿದರೆ ಯಾರು ಮುಖ್ಯಮಂತ್ರಿ ಎಂಬುದು ನಮಗೆ ಮುಖ್ಯವಲ್ಲ; ಕಾಂಗ್ರೆಸ್ ಸರಕಾರದ ಬಗ್ಗೆ ರಾಜ್ಯದ ಜನರು ಛೀಮಾರಿ ಹಾಕುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರ ಬಗ್ಗೆ ಈ ಸರಕಾರಕ್ಕೆ ಕಾಳಜಿ ಇಲ್ಲ ಎಂದು ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಬಡವರಿಗೆ ಮನೆ, ಗಂಗಾ ಕಲ್ಯಾಣ ಯೋಜನೆ ನೀಡಲು ಈ ಕಾಂಗ್ರೆಸ್ ಸರಕಾರಕ್ಕೆ ಸಾಧ್ಯ ಆಗುತ್ತಿಲ್ಲ. ಮುಖ್ಯಮಂತ್ರಿ ಯಾರು ಇದ್ದರೆಷ್ಟು? ಬಿಟ್ಟರೆಷ್ಟು. ಅಭಿವೃದ್ಧಿ ಆಗುತ್ತಿಲ್ಲ. ರಾಜ್ಯದ ಇತಿಹಾಸದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ಸರಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯ ಆಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಪೊಲೀಸ್ ಇಲಾಖೆಯಲ್ಲಿ ನಿಗದಿತ ದಿನದಂದು ವೇತನ ಕೊಡಲು ಸಾಧ್ಯ ಆಗುತ್ತಿಲ್ಲ ಎಂದು ವಿವರಿಸಿದರು. ನೀರಾವರಿ ಇಲಾಖೆಯಲ್ಲಿ 2-3 ತಿಂಗಳಿನಿಂದ ಸಂಬಳ ಸರಿಯಾಗಿ ಆಗುತ್ತಿಲ್ಲ. ಎಲ್ಲ ಇಲಾಖೆಗಳಲ್ಲೂ ಇದೇ ಪರಿಸ್ಥಿತಿ ಇದೆ ಎಂದು ತಿಳಿಸಿದರು. ಇಂಥ ದರಿದ್ರ ಸರಕಾರ ಬದುಕಿದೆಯೇ ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಯಾರೇ ಮುಖ್ಯಮಂತ್ರಿ ಇದ್ದರೂ ಪರಿಸ್ಥಿತಿ ಬದಲಾಗದು ಎಂದು ನುಡಿದರು.

ಪ್ರಿಯಾಂಕ್ ಖರ್ಗೆ ತಿರುಕನ ಕನಸು

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರೆಸ್ಸೆಸ್ ನಿಷೇಧಿಸುವುದಾಗಿ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರ ಕುರಿತು ಪತ್ರಕರ್ತರು ಪ್ರಶ್ನಿಸಿದರು. ಮೂರ್ಖತನದ ಹೇಳಿಕೆಗೆ ನಾವು ಪ್ರತಿಕ್ರಿಯೆ ಕೊಡಲಾಗುವುದಿಲ್ಲ; ಕೇಂದ್ರದಲ್ಲಿ ನರೇಂದ್ರ ಮೋದಿ ಜೀ ಅವರ ಸರಕಾರವು ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ನರೇಂದ್ರ ಮೋದಿ ಜೀ ಅವರ ಜನಪ್ರಿಯತೆಯೂ ಜಾಸ್ತಿ ಆಗುತ್ತಿದೆ.

ದೇಶವೂ ಅಭಿವೃದ್ಧಿ ಪಥದಲ್ಲಿ ಮುಂದೆ ಸಾಗುತ್ತಿದೆ. ಪುಕ್ಸಟ್ಟೆ ಭಾಷಣ ಮಾಡಿದರೆ ಭಾರತ 4ನೇ ದೊಡ್ಡ ಆರ್ಥಿಕ ಶಕ್ತಿ ಆಗಲು ಸಾಧ್ಯ ಇರಲಿಲ್ಲ; ಯಾವ ರೀತಿ ನರೇಂದ್ರ ಮೋದಿ ಜೀ ಅವರು ಕಳೆದ 11 ವರ್ಷಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ದೇಶವನ್ನು ಮುನ್ನಡೆಸಿದ್ದಾರೋ ಅದರಿಂದ ಈ ಸ್ಥಾನ ಲಭಿಸಿದೆ. ಪ್ರಿಯಾಂಕ್ ಖರ್ಗೆ ರಾತ್ರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದರೆ ಅದಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಸರಕಾರ ಬದಲಾಗುವ ಕುರಿತು ನಮ್ಮ ಪಕ್ಷದವರು ಮಾತ್ರವಲ್ಲ; ಜನಸಾಮಾನ್ಯರೂ ಮಾತನಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರೂ ಮಾತನಾಡುತ್ತಿದ್ದಾರೆ. ರಾಮನಗರದ ಶಾಸಕ ಇಕ್ಬಾಲ್ ಅವರ ಹೇಳಿಕೆಗೆ ಮುಖ್ಯಮಂತ್ರಿ ಪ್ರತಿಕ್ರಿಯೆ ಏನು ಎಂದು ಈ ಸಂಬಂಧ ಪ್ರಶ್ನೆಗೆ ಮರುಪ್ರಶ್ನೆ ಹಾಕಿದರು.

ಕೇಂದ್ರದ ಸಚಿವರು, ನಮ್ಮೆಲ್ಲರ ಹಿರಿಯರಾದ ಪ್ರಲ್ಹಾದ್ ಜೋಶಿ ಅವರು ನಮ್ಮ ಪಕ್ಷದೊಳಗೆ ಕೆಲವು ಜಿಲ್ಲೆಗಳಲ್ಲಿ ಇದ್ದ ಆಂತರಿಕ ಸಮಸ್ಯೆ ಪರಿಹರಿಸುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆ ಪರಿಹರಿಸುವಂತೆ ನಾನೇ ಮನವಿ ಮಾಡಿದ್ದೆ. ಅದರಂತೆ ಸಮಯ ಕೊಟ್ಟು ಸಮಸ್ಯೆ ತಿಳಿಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!