Chitrangada

ಹರಿತಲೇಖನಿ ದಿನಕ್ಕೊಂದು ಕಥೆ: ಚಿತ್ರಾಂಗದ

Harithalekhani: ಮಹಾಕಾವ್ಯ ಮಹಾಭಾರತದಲ್ಲಿ, ಚಿತ್ರಾಂಗದನು ಶಂತನು ಮತ್ತು ಸತ್ಯವತಿಯ ಹಿರಿಯ ಮಗ. ಅವನ ತಂದೆಯ ಮರಣದ ನಂತರ, ಆತನು ಹಸ್ತಿನಾಪುರದ ಸಿಂಹಾಸನವನ್ನು ಏರಿದನು. ಆದರೆ ಇದೇ ಹೆಸರಿನ ಗಂಧರ್ವನಿಂದ ಕೊಲ್ಲಲ್ಪಟ್ಟನು.

ವಿವಾಹ ಕಾರ್ಯಗಳು ಮುಗಿದ ನಂತರ ನೃಪ ಶಂತನು ರಾಜನು ಆ ರೂಪಸಂಪನ್ನ ಕನ್ಯೆಯೊಂದಿಗೆ ಕೂಡಿ ತನ್ನ ಮನೆಯಲ್ಲಿ ವಾಸಿಸತೊಡಗಿದನು. ಶಂತನುವಿಗೆ ಸತ್ಯವತಿಯು ವೀರತೆಯಲ್ಲಿ ಮನುಷ್ಯರೆಲ್ಲರನ್ನೂ ಮೀರಿದ ಚಿತ್ರಾಂಗದ ಎನ್ನುವ ಧೀಮಂತ ವೀರ ಪುತ್ರನಿಗೆ ಜನ್ಮವಿತ್ತಳು. ನಂತರ ಪುನಃ ಆ ಮಹೇಷ್ವಾಸ ಪ್ರಭುವು ಸತ್ಯವತಿಯಲ್ಲಿ ವಿಚಿತ್ರವೀರ್ಯನೆನ್ನುವ ವೀರ್ಯವಂತ ರಾಜಪುತ್ರನನ್ನು ಪಡೆದನು.

ಅವರು ಯೌವನವನ್ನು ಹೊಂದುವುದರೊಳಗೇ ಆ ಧೀಮಾನ್ ರಾಜ ಶಂತನುವು ಕಾಲಧರ್ಮಕ್ಕೊಳಗಾದನು. ಶಂತನುವು ಸ್ವರ್ಗವಾಸಿಯಾದ ನಂತರ ಭೀಷ್ಮನು, ಸತ್ಯವತಿಯ ಇಚ್ಛೆಯಂತೆ, ಅರಿಂದಮ ಚಿತ್ರಾಂಗದನನ್ನು ರಾಜಸಿಂಹಾಸನದಲ್ಲಿ ಕೂರಿಸಿದನು.

ಚಿತ್ರಾಂಗದನಾದರೂ ತನ್ನ ಶೌರ್ಯದಿಂದ ಪೃಥ್ವಿಯ ಸರ್ವ ಪಾರ್ಥಿವರನ್ನೂ ಮನುಷ್ಯರಲ್ಲಿ ತನ್ನ ಸದೃಶ ಯಾರೂ ಇಲ್ಲವೇನೋ ಎನ್ನುವಂತೆ ಗೆದ್ದನು. ಈ ರೀತಿ ಅವನು ಎಲ್ಲ ಸುರರು, ಮನುಷ್ಯರು, ಅಸುರರೆಲ್ಲರನ್ನೂ ಗೆದ್ದಾಗ, ಅದೇ ಹೆಸರನ್ನು ಪಡೆದಿದ್ದ, ಬಲವಂತ ಗಂಧರ್ವರಾಜನು ಅವನನ್ನು ಎದುರಿಸಿದನು.

ಅವರೀವರ್ವರ ಮಧ್ಯೆ ಕುರುಕ್ಷೇತ್ರದಲ್ಲಿ ಮಹಾ ಯುದ್ಧವೇ ನಡೆಯಿತು. ಆ ಬಲವಂತ ಗಂಧರ್ವ-ಕುರುಮುಖ್ಯರ ನಡುವೆ ಹಿರಣ್ವತೀ ನದೀತೀರದಲ್ಲಿ ಮೂರು ವರ್ಷಗಳ ಕಾಲ ಯುದ್ಧ ನಡೆಯಿತು. ಒಂದೇ ಸಮನೆ ಶಸ್ತ್ರವೃಷ್ಠಿಯಾಗುತ್ತಿದ್ದ ಆ ಘೋರ ಯುದ್ಧದಲ್ಲಿ ಅಧಿಕ ಮಾಯೆಯ ವೀರ ಗಂಧರ್ವನು ಕುರುಸತ್ತಮನನ್ನು ವಧಿಸಿದನು.

ವಿಚಿತ್ರ ಶರಕಾರ್ಮುಕ ಕುರುಶ್ರೇಷ್ಠ ಚಿತ್ರಾಂಗದನನ್ನು ಕೊನೆಗೊಳಿಸಿ ಗಂಧರ್ವನು ದೇವಲೋಕವನ್ನು ಸೇರಿದನು. ಆ ಭೂರಿವರ್ಚಸ ನೃಪತಿಶಾರ್ದೂಲನು ತೀರಿಕೊಂಡ ನಂತರ ಬೀಷ್ಮ ಶಾಂತನವನು ಅವನ ಪ್ರೇತಕಾರ್ಯಗಳನ್ನು ನೆರವೇರಿಸಿದನು.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!