Planning for further development of Bamul: D.K.Suresh

ಬಮುಲ್ ಅಮುಲಾಘ್ರ ಬದಲಾವಣೆಗೆ ಚಿಂತನೆ: ಡಿ.ಕೆ.ಸುರೇಶ್

ಹೊಸಕೋಟೆ; ಹಾಲಿನ ಗುಣಮಟ್ಟ ಕಾಪಾಡಿಕೊಳ್ಳುವ ಮೂಲಕ ಹಾಲು ಉತ್ಪಾದಕರು, ಮಾರಾಟಗಾರರು, ಹಾಗೂ ಸಿಬ್ಬಂದಿ ವರ್ಗ, ನಿರ್ದೇಶಕರು ಬೆಂಗಳೂರು ಹಾಲು ಒಕ್ಕೂಟದ ಅಮುಲಾಗ್ರ ಬದಲಾವಣೆಗೆ ಸಹಕಾರ ನೀಡಬೇಕು ಎಂದು ಬೆಂಗಳೂರು ಹಾಲು ಒಕ್ಕೂಟದ (Bamul) ಅಧ್ಯಕ್ಷ ಡಿ.ಕೆ.ಸುರೇಶ್ (D.K.Suresh) ಮನವಿ ಮಾಡಿದರು.

ನಗರದ ಹೊರವಲಯದ ಬಮುಲ್ ಹೊಸಕೋಟೆ ಶಿಥಿಲ ಕೇಂದ್ರದಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘಗಳ ಅಧ್ಯಕ್ಷರ ಸಮಾಲೋಚನಾ ಸಭೆಯಲ್ಲಿ ಮಾತಾನಾಡಿದರು.

ಹೊಸಕೋಟೆ ಚಿಲ್ಲಿಂಗ್ ಸೆಂಟರ್ 2 ಲಕ್ಷ ಲೀಟರ್ ಹಾಲು ಸಂಗ್ರಹಣ ಸಾಮರ್ಥ್ಯ ಹೊಂದಿದ್ದು, ಪ್ರಸ್ತುತ 1.5 ಲಕ್ಷ ಉತ್ಪಾದನೆ ಆಗುತ್ತಿದೆ. ಪ್ರತಿದಿನ ರಾಜ್ಯದಲ್ಲಿ 1.5ಕೋಟಿ ಲೀಟರ್ ಹಾಗೂ ಬಮುಲ್ ನಲ್ಲಿ 18 ಲಕ್ಷ ಲೀ ಹಾಲು ಉತ್ಪಾದನೆ ಆಗುತ್ತಿದೆ. ನಿರೀಕ್ಷೆಗಿಂತ ಉತ್ಪಾದನೆ ಕಡಿಮೆ ಆಗುತ್ತಿರುವ ಪರಿಣಾಮ ಕಳೆದ ಸಾಲಿನಲ್ಲಿ ಬಮುಲ್ ನಲ್ಲಿ ನಷ್ಠ ಆಗಿದೆ.

ಪ್ರಮುಖವಾಗಿ ಕೆಎಂಎಫ್ ಮಾರುಕಟ್ಟೆ ವ್ಯವಸ್ಥೆಯಲ್ಲಿ ಹಿಂದೆ ಉಳಿದಿರುವುದು ನಿಚ್ಚಳವಾಗಿದ್ದು ಮುಂದಿನ ದಿನಗಳಲ್ಲಿ ಮಾರುಕಟ್ಟೆ ವಿಸ್ತರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಈಗಾಗಲೇ ಬಮೂಲ್ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ಆಡಳಿತ ಮಂಡಳಿಯ ಸದಸ್ಯರ ಜೊತೆ ಸಭೆ ನಡೆಸಿ ಚರ್ಚಿಸಲಾಗಿದ್ದು, ಹಂತ ಹಂತವಾಗಿ ಸಮಸ್ಯೆಗಳನ್ನ ಬಗೆಹರಿಸುತ್ತೇವೆ ಎಂದರು.

ಶಾಸಕ ಶರತ್ ಬಚ್ಚೇಗೌಡ (Sharath Bachegowda) ಮಾತನಾಡಿ, ಹೊಸಕೋಟೆ ಹಾಲು ಶಿತಲೀಕರಣ 23 ಎಕರೆ ಪ್ರದೇಶವನ್ನು ಹೊಂದಿದ್ದು, ಮಾಜಿ ಸಂಸದರಾದ ಬಿ.ಎನ್.ಬಚ್ಚೇಗೌಡರ ದುರದೃಷ್ಟಿಯ ಫಲವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುಣಮಟ್ಟದ ಹಾಲು ಉತ್ಪದನೆಯಲ್ಲೂ ಹೊಸಕೋಟೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ನಿರಂತರವಾಗಿ ಕಾಯ್ದುಕೊಂಡಿದೆ.

ಮುಂದಿನ ದಿನಗಳಲ್ಲಿ ಹೊಸಕೋಟೆ ತಾಲೂಕಿನಲ್ಲಿ ಫೀಡ್ ಉತ್ಪಾದನಾ ಘಟಕವನ್ನ ಪ್ರಾರಂಭಿಸಲು ನೂತನ ಅಧ್ಯಕ್ಷರು ಮುಂದಾಗಬೇಕು. ತಾಲೂಕಿನಲ್ಲಿ 200 ಕ್ಕೂ ಹೆಚ್ಚಿನ ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಎಲ್ಲಾ ಸಂಘಗಳ ಅಭಿವೃದ್ಧಿಗೆ ರಾಜಕೀಯ ಬದಿಗೊತ್ತಿ ಪಕ್ಷತೀತವಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಈ ವೇಳೆ ಬಮುಲ್ ಉಪಾಧ್ಯಕ್ಷ ರಾಜಣ್ಣ, ನಿರ್ದೇಶಕರುಗಳಾದ ಬಿ.ವಿ.ಸತೀಶ್ ಗೌಡ, ಕೆಎಂಎಂ ಮಂಜುನಾಥ್, ಬೈರೇಗೌಡ, ಸತೀಶ್ ಕಡತನಮನೆ, ಚನ್ನಪಟ್ಟಣ ಲಿಂಗೇಶ್, ಆನೇಕಲ್ ರಮೇಶ್, ಎಲ್ ಎನ್ ಟಿ ಮಂಜುನಾಥ, ಎಂಎಲ್ಸಿ ರವಿ, ವವಸ್ಥಾಪಕ ನಿರ್ದೇಶಕ ಡಾ ಸುರೇಶ್, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೃಷ್ಣಮೂರ್ತಿ, ಬಿಎಂಆರ್ ಡಿಎ ಅಧ್ಯಕ್ಷ ಕೇಶವಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಚಿಕ್ಕಹುಲ್ಲೂರು ಬಚ್ಚೇಗೌಡ ಹಾಜರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!