Appointment of 20,000 teachers soon: Madhu Bangarappa

20 ಸಾವಿರ ಶಿಕ್ಷಕರ ನೇಮಕ ಶೀಘ್ರ; ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಸಚಿವ ಮಧು ಬಂಗಾರಪ್ಪ ಸೂಚನೆ

ಬೆಳಗಾವಿ; ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ (Madhu Bangarappa) ಅವರು ತಿಳಿಸಿದರು.

ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಮಂಗಳವಾರ (ಜು.08) ನಡೆದ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಒಳಮೀಸಲಾತಿ ಸಮೀಕ್ಷೆ ನಡೆಯುತ್ತಿದ್ದು ಈ ಸರ್ವೇ ಪೂರ್ಣಗೊಳ್ಳುತ್ತಿದ್ದಂತೆ, ರಾಜ್ಯದ ಸರ್ಕಾರಿ ಶಾಲೆಗಳು, ಅನುದಾನೂತ ಶಾಲೆಗಳು ಮತ್ತು ಕಾಲೇಜುಗಳಿಗೆ ಖಾಲಿಯಿರುವ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಕಳೆದ ಬಾರಿಗಿಂತ ಹಾಜರಾತಿ ಕಡಿಮೆ ಇದ್ದ ಶಾಲೆಗಳ ಬಗ್ಗೆ ಗಮನ ವಹಿಸಿ ಮಕ್ಕಳನ್ನು ಶಾಲೆಗೆ ಕರೆತಂದು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು.‌ಈ ಕಾರ್ಯಕ್ಕೆ ಇಲಾಖೆ ವತಿಯಿಂದ ಮನೆ ಮನೆಗೆ ಭೇಟಿ ನೀಡಿ “ಶಾಲೆಗೆ ಬಾ” ಎಂಬ ಅಭಿಯಾನ ಹಮ್ಮಿಕೊಳ್ಳಬೇಕು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ, ಊಟ, ಪುಸ್ತಕ ಸೇರಿದಂತೆ ಅಗತ್ಯ ಸೌಕರ್ಯ ನೀಡಲಾಗುತ್ತಿದೆ. ಇನ್ನು ಜುಲೈ 30 ರವರೆಗೆ ಶಾಲಾ ಪ್ರವೇಶಕ್ಕೆ ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸರ್ಕಾರಿ ಶಾಲೆಗೆ ಪ್ರವೇಶ ಪಡೆಯುವಂತೆ ಕ್ರಮ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಗೋಕಾಕ ಹಾಗೂ ರಾಯಬಾಗ ತಾಲೂಕಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ ಬಹಳ ಕಡಿಮೆಯಿದೆ. ಪ್ರತಿ ವರ್ಷ ಮಕ್ಕಳ ದಾಖಲಾತಿಯ ಅಂಕಿ ಅಂಶಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ನಿರಂತರ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಕಳೆದ ವರ್ಷಕ್ಕಿಂದ ಹೆಚ್ಚು ಮಕ್ಕಳು ಈ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಮಕ್ಕಳು ಉತ್ತೀರ್ಣರಾಗಿದ್ದಾರೆ. ಇದೇ ರೀತಿಯಲ್ಲಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕು ಎಂದರು.

ಜಿಲ್ಲೆಯಲ್ಲಿ ಕಲಿಕೆಯಿಂದ ಹಿಂದುಳಿದ ಮಕ್ಕಳನ್ನು ಗುರುತಿಸಿ, ಅಂತಹ ಮಕ್ಕಳನ್ನು ಕಲಿಕೆಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಉತ್ತಮ‌ ಶಿಕ್ಷಕರಿದ್ದು ಅಂತಹ ಶಿಕ್ಷಕರನ್ನು ಗುರುತಿಸಿ ಅವರಿಗೆ ಹೆಚ್ವಿನ‌ ಜವಾಬ್ದಾರಿ ನೀಡಬೇಕು. ಪ್ರತಿ ಜಿಲ್ಲೆಯಲ್ಲಿ “ಓದು ಕರ್ನಾಟಕ” ಎಂಬ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸರ್ಕಾರದಿಂದ ಈಗಾಗಲೇ ನಿರ್ದೇಶನ ನೀಡಲಾಗಿದೆ.

ಪ್ರತಿ ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಗತ್ಯ. ಅದೇ ರೀತಿಯಲ್ಲಿ ಶಾಲೆಗಳಲ್ಲಿ ಶಿಕ್ಷಕರ ಹಾಜರಾತಿ ಕೂಡ ಕಡ್ಡಾಯವಾಗಿದೆ ಎಂದು ಸೂಚಿಸಿದರು.

ಇಲಾಖೆಯಿಂದ ಬಿಡುಗಡೆ ಆಗುವಂತಹ ಅನುದಾನವನ್ನು ಸಮರ್ಪಕವಾಗಿ ಬಳಕೆ‌ ಆಗಬೇಕು. ಶಾಲೆಗಳಲ್ಲಿ ಮಕ್ಕಳಿಗೆ ವಿತರಿಸಲಾಗುವ ಶೂ ಹಾಗೂ ಸಾಕ್ಸ್ ಗುಣಮಟ್ಟದಿಂದ ಕೂಡಿರಬೇಕು. ಜುಲೈ ಅಂತ್ಯದೊಳಗಾಗಿ ಎಲ್ಲ‌ ಮಕ್ಕಳಿಗೆ ಶಾಲಾ‌ ಸಮವಸ್ತ್ರ ಹಾಗೂ ಪಠ್ಯಪುಸಕ್ತಗಳು ವಿತರಿಸಬೇಕು. ಶಿಕ್ಷಣ ಇಲಾಖೆಯಿಂದ ಜಾರಿಯಾಗುವಂತಹ ಯೋಜನೆಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.

ಮಳೆಗಾಲ ಇರುವುದರಿಂದ ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ಗುರುಸಿ ಇಲಾಖೆಯ ಗಮನಕ್ಕೆ ತರಬೇಕು. ಒಂದು ವೇಳೆ ಅಂತಹ ಶಾಲೆಗಳು ಕಂಡು ಬಂದಲ್ಲಿ ಅಂತಹ ಶಾಲೆಗಳಲ್ಲಿ, ಕೊಠಡಿಗಳಲ್ಲಿ ಕಲಿಕಾ ಪ್ರಕ್ರಿಯೆ ಮುಂದುವರೆಸಬಾರದು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ಅತಿಥಿ ಶಿಕ್ಷರನ್ನು ನಿಯಮಾನುಸಾರ ನೇಮಕ ಮಾಡಿಕೊಳ್ಳಲಾಗಿದೆ. ಸದ್ಯದಲ್ಲಿ ಬೋಧನಾ ಸಿಬ್ಬಂದಿಗಳ ಕೊರತೆ ಇಲ್ಲ ಎಂದು ಶಾಲಾ ಸಾಕ್ಷರತಾ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ ಅವರು ವಿವರಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಅವರ ನಿರ್ದೇಶನದಂತೆ
ಪ್ರತಿ ಶಾಲೆ ಭೇಟಿ ನೀಡಿ ಶಾಲಾ ಕಟ್ಟಡದ ಮಾಹಿತಿ ಪಡೆಯಲಾಗುತ್ತಿದೆ ಅಂತಹ ಕಟ್ಟಡಗಳು ಕಂಡು ಬಂದಲ್ಲಿ ಜಿಲ್ಲಾ ಪಂಚಾಯತ್ ಅನುದಾನದಡಿ ಕಟ್ಟಡ, ದುರಸ್ತಿಗೆ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಡಿಡಿಪಿಐ ಹೇಳಿದರು.

ಬೈಲಹೊಂಗಲ ವಿಧಾನಸಭಾ ಶಾಸಕರಾದ ಮಹಾಂತೇಶ ಕೌಜಲಗಿ, ರಾಯಬಾಗ ಶಾಸಕರಾದ ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಬೆಳಗಾವಿ ಶೈಕ್ಷಣಿಕ ವಿಭಾಗದ ಅಪರ ಆಯುಕ್ತರಾದ ಜಯಶ್ರೀ ಶಿಂತ್ರೆ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!