A boy who ran away from home is back in his parents' arms at the age of one and a half!

ಮನೆಬಿಟ್ಟು ಹೋಗಿದ್ದ ಬಾಲಕ ಒಂದೂವರೆ ವರ್ಷದ ಬಳಿಕ ಪೋಷಕರ ಮಡಿಲಿಗೆ..!

ಹೊಸಕೋಟೆ: ಮನೆಯಲ್ಲಿ ಜೀವನ ಮಾಡಲು ಕಷ್ಟ ಎಂದು ಮನೆ ಬಿಟ್ಟು ಹೋಗಿದ್ದ ಬಾಲಕನನ್ನು (Boy) ಹೊಸಕೋಟೆ ಪೊಲೀಸರು ಒಂದೂವರೆ ವರ್ಷದ ಬಳಿಕ ಪತ್ತೆ ಹಚ್ಚಿ ಪೋಷಕರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೊಸಕೋಟೆ ನಗರದ ಅಂಬೇಡ್ಕರ್ ಕಾಲೋನಿಯ ಸೋಮಶೇಖರ್ ಎಂಬುವವರ ಪುತ್ರ ಲೋಕಾಯುಕ್ತ(13 ವರ್ಷ) ಮನೆ ಬಿಟ್ಟು ಹೋಗಿದ್ದ ಬಾಲಕ.

ಬಾಲಕ ಲೋಕಾಯುಕ್ತನ ತಾಯಿ ಜ್ಯೋತಿ ಕಳೆದ 12 ವರ್ಷದ ಹಿಂದೆ ತೀರಿಕೊಂಡ ಪರಿಣಾಮವಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತಂದೆ ಸೋಮಶೇಖರ್ ಅವರನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದರು.

ಆತನನ್ನು ಅವರ ಚಿಕ್ಕಮ್ಮ ಹೊಸಕೋಟೆ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗೆ ದಾಖಲು ಮಾಡಿದ್ದರು.

2024ರಲ್ಲಿ ಬಾಲಕ ಲೋಕಾಯುಕ್ತ ತಂದೆ ಸೋಮಶೇಖರ್ ಬಂದು ಆತನನ್ನು ನಗರದ ಅಂಬೇಡ್ಕರ್ ಕಾಲೋನಿಯಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದರು. ಮನೆಗೆ ಹೋಗಿ 3 ದಿನಗಳ ಕಾಲ ಇದ್ದ ಬಾಲಕ ಲೋಕಾಯುಕ್ತ ಮನೆಯಿಂದ ಸೈಕಲ್ ತೆಗೆದುಕೊಂಡು ಹೋದವನು ಸಚಿಜೆಯಾದರೂ ವಾಪಸ್ ಬಂದಿರಲಿಲ್ಲ.

ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿದರೂ ಸಹ ಲೋಕಾಯುಕ್ತನ ಸುಳಿವು ಸಿಕ್ಕಿರಲಿಲ್ಲ. ಆಗ ಜನವರಿ 4 ರಂದು ಲೋಕಾಯುಕ್ತ ಣೆಯಾಗಿರುವ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿರುತ್ತೆ.

ರೈಲಿನಲ್ಲಿ ಚೆನ್ನೈಗೆ ತೆರಳಿದ್ದ ಬಾಲಕ

ಮನೆಯಿಂದ ಕಾಣೆಯಾಗಿದ್ದ ಬಾಲಕ ಲೋಕಾಯುಕ್ತ ಹೊಸಕೋಟೆಯಿಂದ ಬೆಂಗಳ್ರರಿಗೆ ತೆರಳಿ, ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೇ ನಿಲ್ದಾಣದಿಂದ ಚೆನ್ನೈ ಪ್ರಯಾಣ ಬೆಳೆಸಿದ್ದ. ಮೂರ್ನಾಲ್ಕು ದಿನಗಳ ಕಾಲ ಚೆನ್ನೈ ರೈಲು ನಿಲ್ದಾಣದಲ್ಲೆ ಓಡಾಡುತ್ತಿದ್ದ ಬಾಲಕ ಲೋಕಾಯುಕ್ತನನ್ನು ಚೆನ್ನೈ ರೈಲ್ವೇ ಪೊಲೀಸರು ಹಿಡಿದುಕೊಂಡು ವಿಚಾರಣೆ ಮಾಡಲಾಗಿ ಕರ್ನಾಕಟದವನು ಎಂದು ತಿಳಿದಾಕ್ಷಣ ಆತನನ್ನು ಕರ್ನಾಟಕ ರೈಲ್ವೇ ಪೊಲೀಸರ ಮೂಲಕ ಬೆಂಗಳೂರಿನ ಬಾಲಭವನಕ್ಕೆ ರವಾನೆ ಮಾಡಿದ್ದರು.

ಕಳೆದ ಒಂದೂವರೆ ವರ್ಷದಿಂದ ಲೋಕಾಯುಕ್ತ ಬಾಲಭವನದಲ್ಲೆ ಇದ್ದನು.

ತನ್ನ ಹೆಸರು ಭಾರ್ಗವ ಎಂದು ನಂಬಿಸಿದ್ದ ಲೋಕಾಯುಕ್ತ ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನ ಬಾಲಭವನದಲ್ಲಿದ್ದ ಬಾಲಕ ಲೋಕಾಯುಕ್ತ ಮನೆಗೆ ಬಾರಲೇ ಬಾರದೆಂದು ನಿರ್ಧರಿಸಿ ತನ್ನ ಹೆಸರನ್ನು ಭಾರ್ಗವ ಎಂದು ಹೇಳಿ ನಂಬಿಸಿದ್ದ.

ಚೆನ್ನೈ‌ ರೈಲ್ವೇ ಪೊಲೀಸರಿಗೂ ಭಾರ್ಗವ ಎಂದೇ ಹೇಳಿ ನಂಬಿಸಿದ್ದ. ಇತ್ತ ಪ್ರಕರಣ ದಾಖಲು ಮಾಡಿಕೊಂಡಿದ್ದ ಹೊಸಕೋಟೆ ಪೊಲೀಸರು ಸಾಕಷ್ಟು ಹುಡುಕಾಟ ಸಹ ನಡೆಸಿದ್ದರು.

ಬೆಂಗಳೂರಿನ ಬಾಲಭವನದಲ್ಲಿ ಮಕ್ಕಳನ್ನು ಪರಿಶೀಲನೆ ಮಾಡುವ ಸಂಧರ್ಭದಲ್ಲಿ ಭಾರ್ಗವ ಎಂದೇ ಪರಿಚಯ ಮಾಡಿಕೊಂಡಿದ್ದು ಅನುಮಾನ ಬಂದು ಲೋಕಾಯುಕ್ತನ ಫೋಟೋ ಚಹರೆಯನ್ನು ನೋಡಿ ಪ್ರಶ್ನೆ ಮಾಡಿದಾಗ ಮನೆಗೆ ಹೋಗಲೇಬಾರದೆಂದು ತನ್ನ ಹೆಸರನ್ನು ಭಾರ್ಗವ ಎಂದು ಸುಳ್ಳು ಹೇಳಿರುವುದಾಗಿ ಸತ್ಯ ಬಾಯ್ಬಿಟ್ಟಿದ್ದಾನೆ.

ಅಂತಿಮವಾಗಿ ಒಂದೂವರೆ ವರ್ಷದ ಬಳಿಕ ಕಾಣೆಯಾಗಿದ್ದ ಬಾಲಕ ಲೋಕಾಯುಕ್ತನನ್ನು ಅವರ ಕುಟುಂಬಸ್ಥರಿಗೆ ಒಪ್ಪಿಸುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣವನ್ನು ಪತ್ತೆಹಚ್ಚಿದ ಹೊಸಕೋಟೆ ಡಿವೈಎಸ್ಪಿ ಮಲ್ಲೆಶಯ್ಯ, ಇನ್ಸ್ಪೆಕ್ಟರ್ ಗೋವಿಂದ್, ಪೇದೆ ಮಹಾಂತೇಶ್ ಹಾಗೂ ಸಿಬ್ಬಂದಿ ವರ್ಗದವರನ್ನು ಎಸ್ಪಿ ಸಿಕೆ.ಬಾಬಾ ಅಭಿನಂದಿಸಿದ್ದಾರೆ.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!