ರಾಜ್ಯ ಸರ್ಕಾರ ಕೂಡಲೇ ಬಾಂಗ್ಲಾ ಹಾಗೂ ಪಾಕ್‌ ಪ್ರಜೆಗಳನ್ನು ಹೊರಕ್ಕೆ ಕಳಿಸಬೇಕು: ಆರ್.ಅಶೋಕ

If the sanctity of Chamundeshwari temple is violated, 'Chamundeshwari Chalo'; R. Ashoka

ಬೆಂಗಳೂರು: ಜನೌಷಧಿ ಕೇಂದ್ರಗಳ ಸ್ಥಗಿತ ಕುರಿತು ಹೈಕೋರ್ಟ್‌ ನೀಡಿದ ಮಧ್ಯಂತರ ತಡೆ ಆದೇಶವನ್ನು ಸ್ವಾಗತಿಸುತ್ತೇನೆ. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳ ಸ್ಥಗಿತದ ಬಗ್ಗೆ ಹೈಕೋರ್ಟ್‌ ಮಧ್ಯಂತರ ತಡೆ ಆದೇಶ ನೀಡಿದೆ. ಈ ಕುರಿತು ಬಿಜೆಪಿಯಿಂದ ಹೋರಾಟ ಮಾಡಲಾಗಿತ್ತು. ಖಾಸಗಿ ಮೆಡಿಕಲ್‌ ಫಾರ್ಮಾಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಿತ್ತು. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ. ಇನ್ನಾದರೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಜನರಿಗೆ ಏನು ಬೇಕೆಂದು ಅರಿತು ಕೆಲಸ ಮಾಡಬೇಕಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ 260-270 ಔಷಧಿಗಳನ್ನು ನೀಡಬೇಕಾಗುತ್ತದೆ. ಆದರೆ ಅಷ್ಟೊಂದು ಔಷಧಿ ಇಲ್ಲ. ಔಷಧಿಗಳು ಜನೌಷಧಿ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಇತ್ತೀಚೆಗೆ ಹಾಸನ ಆಸ್ಪತ್ರೆಗೆ ಹೋದಾಗ ಒಬ್ಬರೇ ಹೃದ್ರೋಗ ತಜ್ಞ ವೈದ್ಯರು ಇರುವುದು ಕಂಡುಬಂತು. ಹೃದಯ ಸಂಬಂಧಿ ರೋಗದ ತುರ್ತು ಪರಿಸ್ಥಿತಿಯಲ್ಲಿ ಅವರು ಇಂಜೆಕ್ಷನ್‌ ಕೊಟ್ಟು ಬೆಂಗಳೂರಿಗೆ ಕಳಿಸುತ್ತಾರೆ. ಇಂತಹ ಸ್ಥಿತಿಯಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿದರೆ ಬಹಳ ಸಮಸ್ಯೆಯಾಗುತ್ತದೆ ಎಂದರು.

ಜೈಲಿನಲ್ಲೇ ಭಯೋತ್ಪಾದಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಗೃಹ ಇಲಾಖೆ ಸತ್ತೇಹೋಗಿದೆ. ರಾಜ್ಯ ಸರ್ಕಾರ ಕೂಡಲೇ ಬಾಂಗ್ಲಾ ಹಾಗೂ ಪಾಕ್‌ ಪ್ರಜೆಗಳನ್ನು ಹೊರಕ್ಕೆ ಕಳಿಸಬೇಕು. ಇದಕ್ಕಾಗಿ ವಿಶೇಷ ಪಡೆ ರಚಿಸಬೇಕು. ಇಲ್ಲೂ ವೋಟ್‌‌ ಬ್ಯಾಂಕ್‌ ರಾಜಕೀಯ ಮಾಡಬಾರದು. ಕೈದಿಗಳ ಚಲನವಲನಗಳ ಬಗ್ಗೆ ನಿಗಾ ಇರಿಸಲು ಕ್ರಮ ವಹಿಸಬೇಕು. ಜೈಲಿನಲ್ಲಿ ಮೊಬೈಲ್‌ ಬಳಕೆ ತಡೆಗಟ್ಟಬೇಕು ಎಂದು ಆಗ್ರಹಿಸಿದರು.

ರಂಭಾಪುರಿ ಜಗದ್ಗುರುಗಳು ಅವರ ಅಭಿಪ್ರಾಯವನ್ನು ಹೇಳಿದ್ದಾರೆ. ಲಕ್ಷಾಂತರ ಭಕ್ತರು ಬರುವಾಗ ಅವರ ಅಭಿಪ್ರಾಯವನ್ನು ಹೇಳಿರುತ್ತಾರೆ. ಅದನ್ನೇ ಸ್ವಾಮೀಜಿ ಹೇಳಿರುತ್ತಾರೆ. ಸರ್ಕಾರ ಗ್ಯಾರಂಟಿಗಳನ್ನು ಪ್ರತಿ ದಿನ ಕೊಡುತ್ತಿದೆ. ಆದರೆ ಅಕ್ಕಿ ಸಾಗಣೆಗೆ ಹಣವಿಲ್ಲದೆ, ಲಾರಿ ಮುಷ್ಕರ ನಡೆದಿದೆ. ಎಲ್ಲ ಬಾಕಿ ಬಿಲ್‌ ಇಟ್ಟುಕೊಂಡು ಗ್ಯಾರಂಟಿ ಕೊಟ್ಟರೆ ಪ್ರಯೋಜನವಿಲ್ಲ. ಉಚಿತ ಬಸ್‌ ನೀಡಿದ್ದರೂ, ಶಾಲಾ ಮಕ್ಕಳು ನಡೆದುಕೊಂಡು ಹೋಗಬೇಕಾಗಿದೆ. ಜನರಿಗೆ ಸ್ವಾವಲಂಬಿ ಜೀವನ ನೀಡಿ ಎಂದು ಸ್ವಾಮೀಜಿ ಹೇಳಿದ್ದಾರೆ ಎಂದರು.

ಬಿಕೆ.ಹರಿಪ್ರಸಾದ್‌ ತುಳಿತಕ್ಕೊಳಗಾದ ಜನಾಂಗಕ್ಕೆ ಅಪಮಾನ ಮಾಡಿದ್ದಾರೆ. ಬಿಜೆಪಿಯಲ್ಲಿ ವಂಶಪಾರಂಪರ್ಯವಾಗಿ ಅಧ್ಯಕ್ಷರನ್ನು ಘೋಷಣೆ ಮಾಡುವ ಕ್ರಮವಿಲ್ಲ. ಕಾಂಗ್ರೆಸ್‌ನಲ್ಲಿ ಚುನಾವಣೆ ನಡೆಯುವುದಿಲ್ಲ. ಆದರೆ ಬಿಜೆಪಿಯಲ್ಲಿ ಪ್ರಜಾಪ್ರಭುತ್ವವಿದೆ ಎಂದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]