ಹರಿತಲೇಖನಿ ದಿನಕ್ಕೊಂದು ಕಥೆ: ದುರಂತ ನಾಯಕ ಏಕಲವ್ಯ

Ekalavya

Harithalekhani: ಮಹಾಭಾರತ ಮಹಾಕಾವ್ಯದಲ್ಲಿ ಏಕಲವ್ಯ ನಿಷಾದ ಕುಲ ಅಂದರೆ ಈಗಿನ ವಾಲ್ಮೀಕಿ ಅಥವಾ ಬೇಡ ಪಂಗಡದ ರಾಜಕುಮಾರ. ಇವನು ದ್ರೋಣಾಚಾರ್ಯರ ನಿರಾಕರಣೆಯ ಹೊರತಾಗಿಯೂ ಶಸ್ತ್ರಭ್ಯಾಸದಲ್ಲಿ, ಅರ್ಜುನನಷ್ಟೇ ಕೌಶಲ್ಯ ಹೊಂದಿದ್ದನು.

ಏಕಲವ್ಯನು ಬಿಲ್ವಿದ್ಯೆಯನ್ನು ಸಾಧಿಸಿಕೊಳ್ಳುವ ಹಂಬಲದಿಂದ ದ್ರೋಣಾಚಾರ್ಯರ ಬಳಿಗೆ ಬರುತ್ತಾನೆ.
ರಾಜ ಮನೆತನದಲ್ಲಿ ಗುರುವಾಗಿರುವಂತಹವರು ರಾಜ ಮನೆತನದವರನ್ನು ಬಿಟ್ಟು ಹೊರಗಿನವರಿಗೆ ವಿದ್ಯೆ ಹೇಳಿಕೊಡುವುದು ನಿಯಮಗಳಿಗೆ ವಿರುದ್ಧವಾಗಿತ್ತು.

ಇದರ ಉದ್ದೇಶವೆಂದರೆ ಬೇರೆ ಯಾರು ಕೂಡ ರಾಜ ಅಥವಾ ರಾಜಕುಮಾರನಷ್ಟು ಬಿಲ್ವಿದ್ಯೆ ಅಥವಾ ಯುದ್ಧ ವಿಧಾನಗಳನ್ನು ಕಲಿಯಬಾರದು ಎನ್ನುವುದು.

ರಾಜನು ತನ್ನ ಪ್ರಜೆಗಳ ರಕ್ಷನಾಗಿರುವ ಕಾರಣದಿಂದಾಗಿ ಇದನ್ನು ಸುರಕ್ಷತೆ ದೃಷ್ಟಿಯಿಂದ ಮಾಡಲಾಗುತ್ತಿತ್ತು. ಆದರೆ ಏಕಲವ್ಯನು ಒಬ್ಬ ಬಡ ಬೇಡನ ಮಗನಾಗಿದ್ದ. ಇದರಿಂದಾಗಿ ಗುರು ದ್ರೋಣಾಚಾರ್ಯರು ಏಕಲವ್ಯನನ್ನು ತನ್ನ ಶಿಷ್ಯನಾಗಿ ಸ್ವೀಕರಿಸಲು ನಿರಾಕರಿಸಿದರು.

ತಮ್ಮ ಮೆಚ್ಚಿನ ಶಿಷ್ಯ ಅರ್ಜುನನನ್ನು ಜಗತ್ತಿನ ಶ್ರೇಷ್ಠ ಬಿಲ್ಲುಗಾರನನ್ನಾಗಿ ಮಾಡುವ ಪಣ ತೊಟ್ಟಿದ್ದ ದ್ರೋಣರು, ಕ್ಷತ್ರಿಯರಲ್ಲದವರಿಗೆ ಬಿಲ್ವಿದ್ಯೆ ಹೇಳಿಕೊಡಲು ಇಚ್ಛಿಸದೆ, ಏಕಲವ್ಯನನ್ನು ಶಿಷ್ಯನಾಗಿ ಸ್ವೀಕರಿಸಲು ನಿರಾಕರಿಸುತ್ತಾರೆ.

ನಿರಾಶನಾಗದ ಏಕಲವ್ಯನು, ದಿನವೂ ದೂರದಲ್ಲಿ ನಿಂತು ದ್ರೋಣಾಚಾರ್ಯರು ಕೌರವರಿಗೆ, ಪಾಂಡವರಿಗೆ ಹೇಳಿಕೊಡುತ್ತಿದ್ದ ವಿದ್ಯೆಯನ್ನು ಮನನ ಮಾಡಿಕೊಂಡು, ಕಾಡಿಗೆ ಮರಳಿ ದ್ರೋಣರ ಮಣ್ಣಿನ ಮೂರ್ತಿಯನ್ನು ಮಾಡಿ ಅವರನ್ನೇ ತನ್ನ ಮಾನಸ ಗುರುವೆಂದು ನಂಬಿ ಬಿಲ್ವಿದ್ಯೆಯನ್ನು ಸ್ವತಃ ಸಾಧಿಸಿಕೊಳ್ಳುತ್ತಾನೆ.

ನಂತರ ತನ್ನ ಇಚ್ಛಾಶಕ್ತಿಯ ಬಲದಿಂದಲೇ ಏಕಲವ್ಯನು ಅರ್ಜುನನ ಸಮಾನವಾಗಿ ಕೌಶಲ್ಯವನ್ನು ಹೊಂದುತ್ತಾನೆ. ಒಮ್ಮೆ ದ್ರೋಣಾಚಾರ್ಯರು ತಮ್ಮ ಪ್ರಿಯ ಶಿಷ್ಯ ಅರ್ಜುನ ನೊಂದಿಗೆ ಕಾಡಿನ ವೀಕ್ಷಣೆಗೆ ಬಂದಾಗ, ನಾಯಿಯೊಂದು ಬೊಗಳುತ್ತ ಬರುವುದರ ಅರಿವಾದಾಗ, ಶಬ್ದವೇದಿ ವಿದ್ಯೆಯಲ್ಲಿ ಪಾರಂಗತನಾಗಿದ್ದ ಅರ್ಜುನ ತನ್ನ ಬಾಣ ಪ್ರಯೋಗ ಮಾಡುವುದರೊಳಗೆ, ಆ ನಾಯಿ ಬೊಗಳುವುದು ನಿಂತು ಹೋಗುತ್ತದೆ.

ಮುಂದೆ ಸಾಗಿದಾಗ ಯಾರೋ ಶಬ್ದವೇದಿ ವಿದ್ಯೆಯಲ್ಲಿ ಪ್ರವೀಣರಾದವರು ಅದರ ಬಾಯಿಗೆ ಬಾಣಗಳನ್ನು ತುಂಬಿರುತ್ತಾರೆ. ಇದರಿಂದ ದ್ರೋಣಾಚಾರ್ಯರು ಮತ್ತು ಅರ್ಜುನ ಚಕಿತರಾಗಿ, ಬಾಣ ಹೂಡಿದ ವ್ಯಕ್ತಿಯನ್ನು ಹುಡುಕಿಕೊಂಡು ಸಾಗಿದಾಗ ಏಕಲವ್ಯನನ್ನು ಸಂಧಿಸುತ್ತಾರೆ.

ಏಕಲವ್ಯ ಅಭ್ಯಾಸದಲ್ಲಿ ನಿರತನಾದಾಗ ನಾಯಿಯೊಂದು ಬೊಗಳುತ್ತಿದ್ದು ತನ್ನ ಏಕಾಗ್ರತೆಗೆ ಭಂಗ ತಂದಾಗ ಅದರ ಕಡೆ ನೋಡದೆ ಬಾಣಗಳನ್ನು ಬಿಟ್ಟು ಅದನ್ನು ಸುಮ್ಮನಾಗಿಸುತ್ತಾನೆ. ಈ ನಾಯಿಯು ಓಡುವುದನ್ನು ನೋಡಿದ ಪಾಂಡವರು ಈ ಸಾಹಸ ವನ್ನು ಮಾಡಿದವರಾರೆಂದು ಆಶ್ಚರ್ಯ ಚಕಿತರಾಗುತ್ತಾರೆ. ಆಗ ಏಕಲವ್ಯನು ಆ ಸ್ಥಳಕ್ಕೆ ಹಾಜರಾಗಿ ತನ್ನನ್ನು ದ್ರೋಣಚಾರ್ಯರ ಶಿಷ್ಯ ಎಂದು ಪರಿಚಯಿಸಿಕೊಳ್ಳುತ್ತಾನೆ.

ಅರ್ಜುನನಿಗೆ ಶ್ರೇಷ್ಠ ಬಿಲ್ಲುಗಾರನಾಗಿ ತನ್ನ ಸ್ಥಾನ ಚ್ಯುತಿಯಾಗುವ ಚಿಂತೆಯಾಗುತ್ತದೆ. ಇದನ್ನು ಗಮಿನಿಸಿದ ದ್ರೋಣರು ರಾಜಕುಮಾರರ ಜೊತೆ ಕಾಡಿಗೆ ತೆರಳಿ ಏಕಲವ್ಯನನ್ನು ಸಂಧಿಸುತ್ತಾನೆ. ತನ್ನ ಗುರುವನ್ನು ಕಂಡ ಕೂಡಲೇ ಏಕಲವ್ಯನು ಆನಂದಿತನಾಗಿ ಗುರುಸೇವೆಗೆ ತೊಡಗುತ್ತಾನೆ. ತಮ್ಮ ನಿರಾಕರಣೆಯ ಹೊರತಾಗಿಯೂ ಶಿಷ್ಯತ್ವವನ್ನು ಹೇಳಿ ಕೊಂಡಿದ್ದರಿಂದ ಕುಪಿತರಾದ ದ್ರೋಣಾಚಾರ್ಯರು ಏಕಲವ್ಯನ ಧಾರ್ಷ್ಟ್ಯವನ್ನು ತೆಗಳುತ್ತಾರೆ.

ಆಗ ಏಕಲವ್ಯನಿಂದ ಒಂದು ಗುರು ದಕ್ಷಿಣೆಯನ್ನು ಕೇಳುತ್ತಾರೆ. ಇದಕ್ಕೆ ಒಪ್ಪಿದ ಏಕಲವ್ಯನ ಬಲಗೈ ಹೆಬ್ಬೆರಳನ್ನು ಕೇಳುತ್ತಾರೆ. ತನ್ನ ಬಿಲ್ವಿದ್ಯೆಯ ಕೌಶಲ್ಯಕ್ಕೆ ಇದರಿಂದ ಹಾನಿಯಾಗುವುದೆಂದು ತಿಳಿದ ಹೊರತಾಗಿಯೂ ಸ್ವಲ್ಪವೂ ಯೋಚಿಸದೆ ಏಕಲವ್ಯನು ಇದನ್ನು ಪೂರೈಸುತ್ತಾನೆ. ಇದು ಗುರು ಭಕ್ತಿಯ ಅತಿ ಶ್ರೇಷ್ಠ ನಿದರ್ಶನವಾಗಿದೆ. ದ್ರೋಣಾ ಚಾರ್ಯರು ಈ ಸಂದರ್ಭದಲ್ಲಿ ಕೆಟ್ಟ ಗುರುವಿನಂತೆ ವರ್ತಿಸುತ್ತಾರೆ. ಅವರ ಸ್ವಾರ್ಥ ಮತ್ತು ಅಹಂಕಾರಗಳೂ ಇದರಲ್ಲಿ ಕಾಣಸಿಗುತ್ತವೆ.

ನಂತರದ ದಿನಗಳಲ್ಲಿ ಏಕಲವ್ಯ ಮತ್ತೆ ಬಾಣ ಪ್ರಯೋಗಿಸುವುದನ್ನು ಕಲಿತು ಸವ್ಯಸಾಚಿ ಎನಿಸಿಕೊಂಡು, ದ್ರೋಣಾಚಾರ್ಯರ ಮುಖಭಂಗಕ್ಕೆ ಕಾರಣನಾಗಿ, ಕೌರವನ ಬಳಿ ಬಂದು ಪಾಂಡವರ ವಿರುದ್ದ ಯುದ್ದ ಮಾಡುತ್ತಾನೆ.

ಏಕಲವ್ಯ ಜರಾಸಂಧನ ಪರವಾಗಿ ಕೃಷ್ಣ ಮತ್ತು ಬಲರಾಮರ ವಿರುದ್ಧ ಹೋರಾಡಿ ಯಾದವ ಸೈನ್ಯದ ಮೂಲಕ ಹತನಾಗುತ್ತಾನೆ. ಒಟ್ಟಿನಲ್ಲಿ ಏಕಲವ್ಯನದು ದುರಂತ ನಾಯಕನ ಪಾತ್ರ.

ಏಕಲವ್ಯನ ಕಥೆಯನ್ನು ಆಧುನಿಕ ವಿಮರ್ಶಕರು ‘ಜಾತೀಯತೆ’ಯ ನಿದರ್ಶನವೆಂದು ಟೀಕಿಸುತ್ತಾರೆ. ಆದರೆ ಇದನ್ನು ದ್ರೋಣಾಚಾರ್ಯರ ಸ್ವಾರ್ಥವೆಂದು ಪರಿಗಣಿಸಬಹುದು. ಇಲ್ಲವೆ ಗುರುಭಕ್ತಿಯನ್ನು ಸೂಚಿಸುವ ನಿದರ್ಶನವೆಂದು ತಿಳಿಯಬಹುದಾಗಿದೆ.

ಈ ಬಗ್ಗೆ ಕುವೆಂಪುರವರು ಬರೆದಿರುವ ‘ಬೆರಳ್ ಗೆ ಕೊರಳ್’ ಮತ್ತು ಸಿದ್ದಲಿಂಗಯ್ಯನವರ ‘ಏಕಲವ್ಯ’ ನಾಟಕಗಳನ್ನು ಪರಿಶೀಲಿಸಬಹುದು.

ಕೃಪೆ: ಕನ್ನಡ ಸಂಪದ

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]