Ekalavya

ಹರಿತಲೇಖನಿ ದಿನಕ್ಕೊಂದು ಕಥೆ: ದುರಂತ ನಾಯಕ ಏಕಲವ್ಯ

Harithalekhani: ಮಹಾಭಾರತ ಮಹಾಕಾವ್ಯದಲ್ಲಿ ಏಕಲವ್ಯ ನಿಷಾದ ಕುಲ ಅಂದರೆ ಈಗಿನ ವಾಲ್ಮೀಕಿ ಅಥವಾ ಬೇಡ ಪಂಗಡದ ರಾಜಕುಮಾರ. ಇವನು ದ್ರೋಣಾಚಾರ್ಯರ ನಿರಾಕರಣೆಯ ಹೊರತಾಗಿಯೂ ಶಸ್ತ್ರಭ್ಯಾಸದಲ್ಲಿ, ಅರ್ಜುನನಷ್ಟೇ ಕೌಶಲ್ಯ ಹೊಂದಿದ್ದನು.

ಏಕಲವ್ಯನು ಬಿಲ್ವಿದ್ಯೆಯನ್ನು ಸಾಧಿಸಿಕೊಳ್ಳುವ ಹಂಬಲದಿಂದ ದ್ರೋಣಾಚಾರ್ಯರ ಬಳಿಗೆ ಬರುತ್ತಾನೆ.
ರಾಜ ಮನೆತನದಲ್ಲಿ ಗುರುವಾಗಿರುವಂತಹವರು ರಾಜ ಮನೆತನದವರನ್ನು ಬಿಟ್ಟು ಹೊರಗಿನವರಿಗೆ ವಿದ್ಯೆ ಹೇಳಿಕೊಡುವುದು ನಿಯಮಗಳಿಗೆ ವಿರುದ್ಧವಾಗಿತ್ತು.

ಇದರ ಉದ್ದೇಶವೆಂದರೆ ಬೇರೆ ಯಾರು ಕೂಡ ರಾಜ ಅಥವಾ ರಾಜಕುಮಾರನಷ್ಟು ಬಿಲ್ವಿದ್ಯೆ ಅಥವಾ ಯುದ್ಧ ವಿಧಾನಗಳನ್ನು ಕಲಿಯಬಾರದು ಎನ್ನುವುದು.

ರಾಜನು ತನ್ನ ಪ್ರಜೆಗಳ ರಕ್ಷನಾಗಿರುವ ಕಾರಣದಿಂದಾಗಿ ಇದನ್ನು ಸುರಕ್ಷತೆ ದೃಷ್ಟಿಯಿಂದ ಮಾಡಲಾಗುತ್ತಿತ್ತು. ಆದರೆ ಏಕಲವ್ಯನು ಒಬ್ಬ ಬಡ ಬೇಡನ ಮಗನಾಗಿದ್ದ. ಇದರಿಂದಾಗಿ ಗುರು ದ್ರೋಣಾಚಾರ್ಯರು ಏಕಲವ್ಯನನ್ನು ತನ್ನ ಶಿಷ್ಯನಾಗಿ ಸ್ವೀಕರಿಸಲು ನಿರಾಕರಿಸಿದರು.

ತಮ್ಮ ಮೆಚ್ಚಿನ ಶಿಷ್ಯ ಅರ್ಜುನನನ್ನು ಜಗತ್ತಿನ ಶ್ರೇಷ್ಠ ಬಿಲ್ಲುಗಾರನನ್ನಾಗಿ ಮಾಡುವ ಪಣ ತೊಟ್ಟಿದ್ದ ದ್ರೋಣರು, ಕ್ಷತ್ರಿಯರಲ್ಲದವರಿಗೆ ಬಿಲ್ವಿದ್ಯೆ ಹೇಳಿಕೊಡಲು ಇಚ್ಛಿಸದೆ, ಏಕಲವ್ಯನನ್ನು ಶಿಷ್ಯನಾಗಿ ಸ್ವೀಕರಿಸಲು ನಿರಾಕರಿಸುತ್ತಾರೆ.

ನಿರಾಶನಾಗದ ಏಕಲವ್ಯನು, ದಿನವೂ ದೂರದಲ್ಲಿ ನಿಂತು ದ್ರೋಣಾಚಾರ್ಯರು ಕೌರವರಿಗೆ, ಪಾಂಡವರಿಗೆ ಹೇಳಿಕೊಡುತ್ತಿದ್ದ ವಿದ್ಯೆಯನ್ನು ಮನನ ಮಾಡಿಕೊಂಡು, ಕಾಡಿಗೆ ಮರಳಿ ದ್ರೋಣರ ಮಣ್ಣಿನ ಮೂರ್ತಿಯನ್ನು ಮಾಡಿ ಅವರನ್ನೇ ತನ್ನ ಮಾನಸ ಗುರುವೆಂದು ನಂಬಿ ಬಿಲ್ವಿದ್ಯೆಯನ್ನು ಸ್ವತಃ ಸಾಧಿಸಿಕೊಳ್ಳುತ್ತಾನೆ.

ನಂತರ ತನ್ನ ಇಚ್ಛಾಶಕ್ತಿಯ ಬಲದಿಂದಲೇ ಏಕಲವ್ಯನು ಅರ್ಜುನನ ಸಮಾನವಾಗಿ ಕೌಶಲ್ಯವನ್ನು ಹೊಂದುತ್ತಾನೆ. ಒಮ್ಮೆ ದ್ರೋಣಾಚಾರ್ಯರು ತಮ್ಮ ಪ್ರಿಯ ಶಿಷ್ಯ ಅರ್ಜುನ ನೊಂದಿಗೆ ಕಾಡಿನ ವೀಕ್ಷಣೆಗೆ ಬಂದಾಗ, ನಾಯಿಯೊಂದು ಬೊಗಳುತ್ತ ಬರುವುದರ ಅರಿವಾದಾಗ, ಶಬ್ದವೇದಿ ವಿದ್ಯೆಯಲ್ಲಿ ಪಾರಂಗತನಾಗಿದ್ದ ಅರ್ಜುನ ತನ್ನ ಬಾಣ ಪ್ರಯೋಗ ಮಾಡುವುದರೊಳಗೆ, ಆ ನಾಯಿ ಬೊಗಳುವುದು ನಿಂತು ಹೋಗುತ್ತದೆ.

ಮುಂದೆ ಸಾಗಿದಾಗ ಯಾರೋ ಶಬ್ದವೇದಿ ವಿದ್ಯೆಯಲ್ಲಿ ಪ್ರವೀಣರಾದವರು ಅದರ ಬಾಯಿಗೆ ಬಾಣಗಳನ್ನು ತುಂಬಿರುತ್ತಾರೆ. ಇದರಿಂದ ದ್ರೋಣಾಚಾರ್ಯರು ಮತ್ತು ಅರ್ಜುನ ಚಕಿತರಾಗಿ, ಬಾಣ ಹೂಡಿದ ವ್ಯಕ್ತಿಯನ್ನು ಹುಡುಕಿಕೊಂಡು ಸಾಗಿದಾಗ ಏಕಲವ್ಯನನ್ನು ಸಂಧಿಸುತ್ತಾರೆ.

ಏಕಲವ್ಯ ಅಭ್ಯಾಸದಲ್ಲಿ ನಿರತನಾದಾಗ ನಾಯಿಯೊಂದು ಬೊಗಳುತ್ತಿದ್ದು ತನ್ನ ಏಕಾಗ್ರತೆಗೆ ಭಂಗ ತಂದಾಗ ಅದರ ಕಡೆ ನೋಡದೆ ಬಾಣಗಳನ್ನು ಬಿಟ್ಟು ಅದನ್ನು ಸುಮ್ಮನಾಗಿಸುತ್ತಾನೆ. ಈ ನಾಯಿಯು ಓಡುವುದನ್ನು ನೋಡಿದ ಪಾಂಡವರು ಈ ಸಾಹಸ ವನ್ನು ಮಾಡಿದವರಾರೆಂದು ಆಶ್ಚರ್ಯ ಚಕಿತರಾಗುತ್ತಾರೆ. ಆಗ ಏಕಲವ್ಯನು ಆ ಸ್ಥಳಕ್ಕೆ ಹಾಜರಾಗಿ ತನ್ನನ್ನು ದ್ರೋಣಚಾರ್ಯರ ಶಿಷ್ಯ ಎಂದು ಪರಿಚಯಿಸಿಕೊಳ್ಳುತ್ತಾನೆ.

ಅರ್ಜುನನಿಗೆ ಶ್ರೇಷ್ಠ ಬಿಲ್ಲುಗಾರನಾಗಿ ತನ್ನ ಸ್ಥಾನ ಚ್ಯುತಿಯಾಗುವ ಚಿಂತೆಯಾಗುತ್ತದೆ. ಇದನ್ನು ಗಮಿನಿಸಿದ ದ್ರೋಣರು ರಾಜಕುಮಾರರ ಜೊತೆ ಕಾಡಿಗೆ ತೆರಳಿ ಏಕಲವ್ಯನನ್ನು ಸಂಧಿಸುತ್ತಾನೆ. ತನ್ನ ಗುರುವನ್ನು ಕಂಡ ಕೂಡಲೇ ಏಕಲವ್ಯನು ಆನಂದಿತನಾಗಿ ಗುರುಸೇವೆಗೆ ತೊಡಗುತ್ತಾನೆ. ತಮ್ಮ ನಿರಾಕರಣೆಯ ಹೊರತಾಗಿಯೂ ಶಿಷ್ಯತ್ವವನ್ನು ಹೇಳಿ ಕೊಂಡಿದ್ದರಿಂದ ಕುಪಿತರಾದ ದ್ರೋಣಾಚಾರ್ಯರು ಏಕಲವ್ಯನ ಧಾರ್ಷ್ಟ್ಯವನ್ನು ತೆಗಳುತ್ತಾರೆ.

ಆಗ ಏಕಲವ್ಯನಿಂದ ಒಂದು ಗುರು ದಕ್ಷಿಣೆಯನ್ನು ಕೇಳುತ್ತಾರೆ. ಇದಕ್ಕೆ ಒಪ್ಪಿದ ಏಕಲವ್ಯನ ಬಲಗೈ ಹೆಬ್ಬೆರಳನ್ನು ಕೇಳುತ್ತಾರೆ. ತನ್ನ ಬಿಲ್ವಿದ್ಯೆಯ ಕೌಶಲ್ಯಕ್ಕೆ ಇದರಿಂದ ಹಾನಿಯಾಗುವುದೆಂದು ತಿಳಿದ ಹೊರತಾಗಿಯೂ ಸ್ವಲ್ಪವೂ ಯೋಚಿಸದೆ ಏಕಲವ್ಯನು ಇದನ್ನು ಪೂರೈಸುತ್ತಾನೆ. ಇದು ಗುರು ಭಕ್ತಿಯ ಅತಿ ಶ್ರೇಷ್ಠ ನಿದರ್ಶನವಾಗಿದೆ. ದ್ರೋಣಾ ಚಾರ್ಯರು ಈ ಸಂದರ್ಭದಲ್ಲಿ ಕೆಟ್ಟ ಗುರುವಿನಂತೆ ವರ್ತಿಸುತ್ತಾರೆ. ಅವರ ಸ್ವಾರ್ಥ ಮತ್ತು ಅಹಂಕಾರಗಳೂ ಇದರಲ್ಲಿ ಕಾಣಸಿಗುತ್ತವೆ.

ನಂತರದ ದಿನಗಳಲ್ಲಿ ಏಕಲವ್ಯ ಮತ್ತೆ ಬಾಣ ಪ್ರಯೋಗಿಸುವುದನ್ನು ಕಲಿತು ಸವ್ಯಸಾಚಿ ಎನಿಸಿಕೊಂಡು, ದ್ರೋಣಾಚಾರ್ಯರ ಮುಖಭಂಗಕ್ಕೆ ಕಾರಣನಾಗಿ, ಕೌರವನ ಬಳಿ ಬಂದು ಪಾಂಡವರ ವಿರುದ್ದ ಯುದ್ದ ಮಾಡುತ್ತಾನೆ.

ಏಕಲವ್ಯ ಜರಾಸಂಧನ ಪರವಾಗಿ ಕೃಷ್ಣ ಮತ್ತು ಬಲರಾಮರ ವಿರುದ್ಧ ಹೋರಾಡಿ ಯಾದವ ಸೈನ್ಯದ ಮೂಲಕ ಹತನಾಗುತ್ತಾನೆ. ಒಟ್ಟಿನಲ್ಲಿ ಏಕಲವ್ಯನದು ದುರಂತ ನಾಯಕನ ಪಾತ್ರ.

ಏಕಲವ್ಯನ ಕಥೆಯನ್ನು ಆಧುನಿಕ ವಿಮರ್ಶಕರು ‘ಜಾತೀಯತೆ’ಯ ನಿದರ್ಶನವೆಂದು ಟೀಕಿಸುತ್ತಾರೆ. ಆದರೆ ಇದನ್ನು ದ್ರೋಣಾಚಾರ್ಯರ ಸ್ವಾರ್ಥವೆಂದು ಪರಿಗಣಿಸಬಹುದು. ಇಲ್ಲವೆ ಗುರುಭಕ್ತಿಯನ್ನು ಸೂಚಿಸುವ ನಿದರ್ಶನವೆಂದು ತಿಳಿಯಬಹುದಾಗಿದೆ.

ಈ ಬಗ್ಗೆ ಕುವೆಂಪುರವರು ಬರೆದಿರುವ ‘ಬೆರಳ್ ಗೆ ಕೊರಳ್’ ಮತ್ತು ಸಿದ್ದಲಿಂಗಯ್ಯನವರ ‘ಏಕಲವ್ಯ’ ನಾಟಕಗಳನ್ನು ಪರಿಶೀಲಿಸಬಹುದು.

ಕೃಪೆ: ಕನ್ನಡ ಸಂಪದ

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!