Ekalavya

ಹರಿತಲೇಖನಿ ದಿನಕ್ಕೊಂದು ಕಥೆ: ದುರಂತ ನಾಯಕ ಏಕಲವ್ಯ

Harithalekhani: ಮಹಾಭಾರತ ಮಹಾಕಾವ್ಯದಲ್ಲಿ ಏಕಲವ್ಯ ನಿಷಾದ ಕುಲ ಅಂದರೆ ಈಗಿನ ವಾಲ್ಮೀಕಿ ಅಥವಾ ಬೇಡ ಪಂಗಡದ ರಾಜಕುಮಾರ. ಇವನು ದ್ರೋಣಾಚಾರ್ಯರ ನಿರಾಕರಣೆಯ ಹೊರತಾಗಿಯೂ ಶಸ್ತ್ರಭ್ಯಾಸದಲ್ಲಿ, ಅರ್ಜುನನಷ್ಟೇ ಕೌಶಲ್ಯ ಹೊಂದಿದ್ದನು.

ಏಕಲವ್ಯನು ಬಿಲ್ವಿದ್ಯೆಯನ್ನು ಸಾಧಿಸಿಕೊಳ್ಳುವ ಹಂಬಲದಿಂದ ದ್ರೋಣಾಚಾರ್ಯರ ಬಳಿಗೆ ಬರುತ್ತಾನೆ.
ರಾಜ ಮನೆತನದಲ್ಲಿ ಗುರುವಾಗಿರುವಂತಹವರು ರಾಜ ಮನೆತನದವರನ್ನು ಬಿಟ್ಟು ಹೊರಗಿನವರಿಗೆ ವಿದ್ಯೆ ಹೇಳಿಕೊಡುವುದು ನಿಯಮಗಳಿಗೆ ವಿರುದ್ಧವಾಗಿತ್ತು.

ಇದರ ಉದ್ದೇಶವೆಂದರೆ ಬೇರೆ ಯಾರು ಕೂಡ ರಾಜ ಅಥವಾ ರಾಜಕುಮಾರನಷ್ಟು ಬಿಲ್ವಿದ್ಯೆ ಅಥವಾ ಯುದ್ಧ ವಿಧಾನಗಳನ್ನು ಕಲಿಯಬಾರದು ಎನ್ನುವುದು.

ರಾಜನು ತನ್ನ ಪ್ರಜೆಗಳ ರಕ್ಷನಾಗಿರುವ ಕಾರಣದಿಂದಾಗಿ ಇದನ್ನು ಸುರಕ್ಷತೆ ದೃಷ್ಟಿಯಿಂದ ಮಾಡಲಾಗುತ್ತಿತ್ತು. ಆದರೆ ಏಕಲವ್ಯನು ಒಬ್ಬ ಬಡ ಬೇಡನ ಮಗನಾಗಿದ್ದ. ಇದರಿಂದಾಗಿ ಗುರು ದ್ರೋಣಾಚಾರ್ಯರು ಏಕಲವ್ಯನನ್ನು ತನ್ನ ಶಿಷ್ಯನಾಗಿ ಸ್ವೀಕರಿಸಲು ನಿರಾಕರಿಸಿದರು.

ತಮ್ಮ ಮೆಚ್ಚಿನ ಶಿಷ್ಯ ಅರ್ಜುನನನ್ನು ಜಗತ್ತಿನ ಶ್ರೇಷ್ಠ ಬಿಲ್ಲುಗಾರನನ್ನಾಗಿ ಮಾಡುವ ಪಣ ತೊಟ್ಟಿದ್ದ ದ್ರೋಣರು, ಕ್ಷತ್ರಿಯರಲ್ಲದವರಿಗೆ ಬಿಲ್ವಿದ್ಯೆ ಹೇಳಿಕೊಡಲು ಇಚ್ಛಿಸದೆ, ಏಕಲವ್ಯನನ್ನು ಶಿಷ್ಯನಾಗಿ ಸ್ವೀಕರಿಸಲು ನಿರಾಕರಿಸುತ್ತಾರೆ.

ನಿರಾಶನಾಗದ ಏಕಲವ್ಯನು, ದಿನವೂ ದೂರದಲ್ಲಿ ನಿಂತು ದ್ರೋಣಾಚಾರ್ಯರು ಕೌರವರಿಗೆ, ಪಾಂಡವರಿಗೆ ಹೇಳಿಕೊಡುತ್ತಿದ್ದ ವಿದ್ಯೆಯನ್ನು ಮನನ ಮಾಡಿಕೊಂಡು, ಕಾಡಿಗೆ ಮರಳಿ ದ್ರೋಣರ ಮಣ್ಣಿನ ಮೂರ್ತಿಯನ್ನು ಮಾಡಿ ಅವರನ್ನೇ ತನ್ನ ಮಾನಸ ಗುರುವೆಂದು ನಂಬಿ ಬಿಲ್ವಿದ್ಯೆಯನ್ನು ಸ್ವತಃ ಸಾಧಿಸಿಕೊಳ್ಳುತ್ತಾನೆ.

ನಂತರ ತನ್ನ ಇಚ್ಛಾಶಕ್ತಿಯ ಬಲದಿಂದಲೇ ಏಕಲವ್ಯನು ಅರ್ಜುನನ ಸಮಾನವಾಗಿ ಕೌಶಲ್ಯವನ್ನು ಹೊಂದುತ್ತಾನೆ. ಒಮ್ಮೆ ದ್ರೋಣಾಚಾರ್ಯರು ತಮ್ಮ ಪ್ರಿಯ ಶಿಷ್ಯ ಅರ್ಜುನ ನೊಂದಿಗೆ ಕಾಡಿನ ವೀಕ್ಷಣೆಗೆ ಬಂದಾಗ, ನಾಯಿಯೊಂದು ಬೊಗಳುತ್ತ ಬರುವುದರ ಅರಿವಾದಾಗ, ಶಬ್ದವೇದಿ ವಿದ್ಯೆಯಲ್ಲಿ ಪಾರಂಗತನಾಗಿದ್ದ ಅರ್ಜುನ ತನ್ನ ಬಾಣ ಪ್ರಯೋಗ ಮಾಡುವುದರೊಳಗೆ, ಆ ನಾಯಿ ಬೊಗಳುವುದು ನಿಂತು ಹೋಗುತ್ತದೆ.

ಮುಂದೆ ಸಾಗಿದಾಗ ಯಾರೋ ಶಬ್ದವೇದಿ ವಿದ್ಯೆಯಲ್ಲಿ ಪ್ರವೀಣರಾದವರು ಅದರ ಬಾಯಿಗೆ ಬಾಣಗಳನ್ನು ತುಂಬಿರುತ್ತಾರೆ. ಇದರಿಂದ ದ್ರೋಣಾಚಾರ್ಯರು ಮತ್ತು ಅರ್ಜುನ ಚಕಿತರಾಗಿ, ಬಾಣ ಹೂಡಿದ ವ್ಯಕ್ತಿಯನ್ನು ಹುಡುಕಿಕೊಂಡು ಸಾಗಿದಾಗ ಏಕಲವ್ಯನನ್ನು ಸಂಧಿಸುತ್ತಾರೆ.

ಏಕಲವ್ಯ ಅಭ್ಯಾಸದಲ್ಲಿ ನಿರತನಾದಾಗ ನಾಯಿಯೊಂದು ಬೊಗಳುತ್ತಿದ್ದು ತನ್ನ ಏಕಾಗ್ರತೆಗೆ ಭಂಗ ತಂದಾಗ ಅದರ ಕಡೆ ನೋಡದೆ ಬಾಣಗಳನ್ನು ಬಿಟ್ಟು ಅದನ್ನು ಸುಮ್ಮನಾಗಿಸುತ್ತಾನೆ. ಈ ನಾಯಿಯು ಓಡುವುದನ್ನು ನೋಡಿದ ಪಾಂಡವರು ಈ ಸಾಹಸ ವನ್ನು ಮಾಡಿದವರಾರೆಂದು ಆಶ್ಚರ್ಯ ಚಕಿತರಾಗುತ್ತಾರೆ. ಆಗ ಏಕಲವ್ಯನು ಆ ಸ್ಥಳಕ್ಕೆ ಹಾಜರಾಗಿ ತನ್ನನ್ನು ದ್ರೋಣಚಾರ್ಯರ ಶಿಷ್ಯ ಎಂದು ಪರಿಚಯಿಸಿಕೊಳ್ಳುತ್ತಾನೆ.

ಅರ್ಜುನನಿಗೆ ಶ್ರೇಷ್ಠ ಬಿಲ್ಲುಗಾರನಾಗಿ ತನ್ನ ಸ್ಥಾನ ಚ್ಯುತಿಯಾಗುವ ಚಿಂತೆಯಾಗುತ್ತದೆ. ಇದನ್ನು ಗಮಿನಿಸಿದ ದ್ರೋಣರು ರಾಜಕುಮಾರರ ಜೊತೆ ಕಾಡಿಗೆ ತೆರಳಿ ಏಕಲವ್ಯನನ್ನು ಸಂಧಿಸುತ್ತಾನೆ. ತನ್ನ ಗುರುವನ್ನು ಕಂಡ ಕೂಡಲೇ ಏಕಲವ್ಯನು ಆನಂದಿತನಾಗಿ ಗುರುಸೇವೆಗೆ ತೊಡಗುತ್ತಾನೆ. ತಮ್ಮ ನಿರಾಕರಣೆಯ ಹೊರತಾಗಿಯೂ ಶಿಷ್ಯತ್ವವನ್ನು ಹೇಳಿ ಕೊಂಡಿದ್ದರಿಂದ ಕುಪಿತರಾದ ದ್ರೋಣಾಚಾರ್ಯರು ಏಕಲವ್ಯನ ಧಾರ್ಷ್ಟ್ಯವನ್ನು ತೆಗಳುತ್ತಾರೆ.

ಆಗ ಏಕಲವ್ಯನಿಂದ ಒಂದು ಗುರು ದಕ್ಷಿಣೆಯನ್ನು ಕೇಳುತ್ತಾರೆ. ಇದಕ್ಕೆ ಒಪ್ಪಿದ ಏಕಲವ್ಯನ ಬಲಗೈ ಹೆಬ್ಬೆರಳನ್ನು ಕೇಳುತ್ತಾರೆ. ತನ್ನ ಬಿಲ್ವಿದ್ಯೆಯ ಕೌಶಲ್ಯಕ್ಕೆ ಇದರಿಂದ ಹಾನಿಯಾಗುವುದೆಂದು ತಿಳಿದ ಹೊರತಾಗಿಯೂ ಸ್ವಲ್ಪವೂ ಯೋಚಿಸದೆ ಏಕಲವ್ಯನು ಇದನ್ನು ಪೂರೈಸುತ್ತಾನೆ. ಇದು ಗುರು ಭಕ್ತಿಯ ಅತಿ ಶ್ರೇಷ್ಠ ನಿದರ್ಶನವಾಗಿದೆ. ದ್ರೋಣಾ ಚಾರ್ಯರು ಈ ಸಂದರ್ಭದಲ್ಲಿ ಕೆಟ್ಟ ಗುರುವಿನಂತೆ ವರ್ತಿಸುತ್ತಾರೆ. ಅವರ ಸ್ವಾರ್ಥ ಮತ್ತು ಅಹಂಕಾರಗಳೂ ಇದರಲ್ಲಿ ಕಾಣಸಿಗುತ್ತವೆ.

ನಂತರದ ದಿನಗಳಲ್ಲಿ ಏಕಲವ್ಯ ಮತ್ತೆ ಬಾಣ ಪ್ರಯೋಗಿಸುವುದನ್ನು ಕಲಿತು ಸವ್ಯಸಾಚಿ ಎನಿಸಿಕೊಂಡು, ದ್ರೋಣಾಚಾರ್ಯರ ಮುಖಭಂಗಕ್ಕೆ ಕಾರಣನಾಗಿ, ಕೌರವನ ಬಳಿ ಬಂದು ಪಾಂಡವರ ವಿರುದ್ದ ಯುದ್ದ ಮಾಡುತ್ತಾನೆ.

ಏಕಲವ್ಯ ಜರಾಸಂಧನ ಪರವಾಗಿ ಕೃಷ್ಣ ಮತ್ತು ಬಲರಾಮರ ವಿರುದ್ಧ ಹೋರಾಡಿ ಯಾದವ ಸೈನ್ಯದ ಮೂಲಕ ಹತನಾಗುತ್ತಾನೆ. ಒಟ್ಟಿನಲ್ಲಿ ಏಕಲವ್ಯನದು ದುರಂತ ನಾಯಕನ ಪಾತ್ರ.

ಏಕಲವ್ಯನ ಕಥೆಯನ್ನು ಆಧುನಿಕ ವಿಮರ್ಶಕರು ‘ಜಾತೀಯತೆ’ಯ ನಿದರ್ಶನವೆಂದು ಟೀಕಿಸುತ್ತಾರೆ. ಆದರೆ ಇದನ್ನು ದ್ರೋಣಾಚಾರ್ಯರ ಸ್ವಾರ್ಥವೆಂದು ಪರಿಗಣಿಸಬಹುದು. ಇಲ್ಲವೆ ಗುರುಭಕ್ತಿಯನ್ನು ಸೂಚಿಸುವ ನಿದರ್ಶನವೆಂದು ತಿಳಿಯಬಹುದಾಗಿದೆ.

ಈ ಬಗ್ಗೆ ಕುವೆಂಪುರವರು ಬರೆದಿರುವ ‘ಬೆರಳ್ ಗೆ ಕೊರಳ್’ ಮತ್ತು ಸಿದ್ದಲಿಂಗಯ್ಯನವರ ‘ಏಕಲವ್ಯ’ ನಾಟಕಗಳನ್ನು ಪರಿಶೀಲಿಸಬಹುದು.

ಕೃಪೆ: ಕನ್ನಡ ಸಂಪದ

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!