PM E-DRIVE: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

PM E-DRIVE: Union Minister H.D. Kumaraswamy announces stimulus scheme

ನವದೆಹಲಿ (PM E-DRIVE): ಸರಕು ಸಾಗಾಣೆ ವಲಯದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿರುವ ನರೇಂದ್ರ ಮೋದಿ ಅವರ ಸರ್ಕಾರ, ಇದೇ ಮೊದಲ ಬಾರಿಗೆ ವಿದ್ಯುತ್ ಚಾಲಿತ ಟ್ರಕ್ ಗಳಿಗೆ (ಇ-ಟ್ರಕ್‌ಗಳು) ಆರ್ಥಿಕ ಉತ್ತೇಜನ ನೀಡುವ ಯೋಜನೆಯನ್ನು ಆರಂಭಿಸಿದೆ.

ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ದೆಹಲಿಯ ತಮ್ಮ ಸಚಿವಾಲಯದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಈ ಯೋಜನೆಯನ್ನು ಪ್ರಕಟಿಸಿದ್ದು, ಪಿಎಂ ಇ ಡ್ರೈವ್ (PM E-DRIVE) ಯೋಜನೆಯ ಅಡಿಯಲ್ಲಿ ಟ್ರಕ್ ಗಳಿಗೆ ಪ್ರೋತ್ಸಾಹ ಧನ ಕೊಡಲಾಗುವುದು ಎಂದರು.

ದೇಶದಲ್ಲಿ ಸಾಮೂಹಿಕ ಸಾರಿಗೆ ಹಾಗೂ ಸರಕು ಸಾಗಣೆ ವ್ಯವಸ್ಥೆಯಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಪರಿಪೂರ್ಣವಾಗಿ ತಗ್ಗಿಸುವ ನಿಟ್ಟಿನಲ್ಲಿ ಪ್ರಧಾನಿ ಅವರ ಮಹತ್ವಾಕಾಂಕ್ಷೀಯ ಪಿಎಂ ಇ ಡ್ರೈವ್ ಯೋಜನೆಯನ್ನು ಈಗಾಗಲೇ ಅನುಷ್ಠಾನಕ್ಕೆ ತರಲಾಗಿದೆ. ಈ ಮೂಲಕ ಆರ್ಥಿಕ ಪ್ರೋತ್ಸಾಹ ನೀಡುವ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸ್ವಚ್ಛ, ದಕ್ಷ ಮತ್ತು ಸುಸ್ಥಿರ ಸರಕು ಸಾಗಣೆಗೆ ಪೂರಕವಾಗಿ ಪರಿವರ್ತನಾತ್ಮಕ ಹೆಜ್ಜೆಗಳನ್ನು ಇಡಲಾಗಿದೆ. ಕೇಂದ್ರ ಸರ್ಕಾರವು ವಿದ್ಯುತ್ ಟ್ರಕ್‌ಗಳಿಗೆ ನೇರ ಆರ್ಥಿಕ ಪ್ರೋತ್ಸಾಹ ನೀಡುತ್ತಿರುವುದು ಇದೇ ಮೊದಲು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಯೋಜನೆಯ ಮಹತ್ವವನ್ನು ವಿವರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; “ಡೀಸೆಲ್ ಟ್ರಕ್‌ಗಳು ಒಟ್ಟು ವಾಹನ ಜನಸಂಖ್ಯೆಯಲ್ಲಿ ಕೇವಲ 3% ರಷ್ಟಿದ್ದರೂ, ಸಾರಿಗೆ ಸಂಬಂಧಿತ ಹಸಿರುಮನೆ ಅನಿಲ ಹೊರಸೂಸುವಿಕೆಯಲ್ಲಿ 42% ರಷ್ಟು ಕೊಡುಗೆ ನೀಡುತ್ತವೆ ಮತ್ತು ವಾಯುಮಾಲಿನ್ಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಿಂದ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ವಿದ್ಯುತ್ ಟ್ರಕ್‌ಗಳಿಗೆ ಮೀಸಲಾದ ಮೊತ್ತ ಮೊದಲ ಆರ್ಥಿಕ ಉತ್ತೇಜನ ಕಾರ್ಯಕ್ರಮ ಇದಾಗಿದೆ.

ಈ ಮೂಲಕ ರಾಷ್ಟ್ರವನ್ನು ಸುಸ್ಥಿರ ಸರಕು ಸಾಗಣೆ, ಸ್ವಚ್ಛ ಭವಿಷ್ಯ ಮತ್ತು 2047ರ ವೇಳೆಗೆ ವಿಕಸಿತ ಭಾರತ ಸಾಕಾರದತ್ತ ಕೊಂಡೊಯ್ಯುತ್ತದೆ, 2070ರ ವೇಳೆಗೆ ಇಂಗಾಲದ ನಿವ್ವಳ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸುವ ಗುರಿಯನ್ನು ಮುಟ್ಟಲಿದ್ದೇವೆ. ಇದು ಪ್ರಧಾನಿಗಳ ಸಂಕಲ್ಪವಾಗಿದೆ ಎಂದು ಕೇಂದ್ರ ಸಚಿವರು ನುಡಿದರು.

ಈ ಯೋಜನೆಯಡಿಯಲ್ಲಿ ಕೇಂದ್ರ ಮೋಟಾರು ವಾಹನ ನಿಯಮಗಳ (CMVR) ಅಡಿಯಲ್ಲಿ ಪ್ರಸ್ತಾಪಿಸಲಾಗಿದೆ.

•N2 ಮತ್ತು N3 ವರ್ಗದ ಎಲೆಕ್ಟ್ರಿಕ್ ಟ್ರಕ್‌ಗಳಿಗೆ ಬೇಡಿಕೆ ಪ್ರೋತ್ಸಾಹವನ್ನು ವಿಸ್ತರಿಸಲಾಗುತ್ತದೆ. N2 ವರ್ಗವು 3.5 ಟನ್‌ಗಳಿಗಿಂತ ಹೆಚ್ಚು ಮತ್ತು 12 ಟನ್‌ಗಳವರೆಗೆ ಒಟ್ಟು ವಾಹನ ತೂಕ (GVW) ಹೊಂದಿರುವ ಟ್ರಕ್‌ಗಳನ್ನು ಒಳಗೊಂಡಿದೆ.

  • N3 ವರ್ಗವು 12 ಟನ್‌ಗಳಿಗಿಂತ ಹೆಚ್ಚು ಮತ್ತು 55 ಟನ್‌ಗಳವರೆಗೆ GVW ಹೊಂದಿರುವ ಟ್ರಕ್‌ಗಳನ್ನು ಒಳಗೊಂಡಿದೆ. ಆರ್ಟಿಕ್ಯುಲೇಟೆಡ್ ವಾಹನಗಳ ಸಂದರ್ಭದಲ್ಲಿ ಆರ್ಥಿಕ ಉತ್ತೇಜನ ಯೋಜನೆ N3 ವರ್ಗದ ಪುಲ್ಲರ್ ಟ್ರಾಕ್ಟರ್‌ಗೆ ಮಾತ್ರ ಅನ್ವಯಿಸುತ್ತವೆ. ವಿಶ್ವಾಸಾರ್ಹತೆ ಮತ್ತು ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ಯೋಜನೆಯು ಸಮಗ್ರ ತಯಾರಿಕಾ ಬೆಂಬಲಿತ ವಾರಂಟಿಗಳನ್ನು ಕಡ್ಡಾಯಗೊಳಿಸುತ್ತದೆ.
  • ಬ್ಯಾಟರಿಯನ್ನು ಐದು ವರ್ಷಗಳು ಅಥವಾ 5 ಲಕ್ಷ ಕಿಲೋಮೀಟರ್‌ಗಳವರೆಗೆ, ಇದರಲ್ಲಿ ಯಾವುದು ಮೊದಲೋ ಅದು ಖಾತರಿಯಡಿಯಲ್ಲಿ ಒಳಗೊಳ್ಳಬೇಕು.
  • ವಾಹನ ಮತ್ತು ಮೋಟಾರ್ ಐದು ವರ್ಷಗಳು ಅಥವಾ 2.5 ಲಕ್ಷ ಕಿಲೋಮೀಟರ್‌ಗಳ ಖಾತರಿಯನ್ನು ಹೊಂದಿರಬೇಕು, ಇದರಲ್ಲಿ ಕೂಡ ಯಾವುದು ಮೊದಲೋ ಅದನ್ನು ಪರಿಗಣಿಸಲಾಗುತ್ತದೆ.

ಎಲೆಕ್ಟ್ರಿಕ್ ಟ್ರಕ್ ದರವು ಕೈಗೆಟುಕುವ ಹಾಗೆ ಇರಬೇಕು ಎನ್ನುವ ಉದ್ದೇಶದಿಂದ ಈ ಉತ್ತೇಜನ ಯೋಜನೆಯ ಪ್ರೋತ್ಸಾಹಕ ಮೊತ್ತವು ಎಲೆಕ್ಟ್ರಿಕ್ ಟ್ರಕ್‌ನ GVW ಅನ್ನು ಅವಲಂಬಿಸಿರುತ್ತದೆ. ಗರಿಷ್ಠ ಪ್ರೋತ್ಸಾಹಕ ಮೊತ್ತವನ್ನು ಪ್ರತಿ ವಾಹನಕ್ಕೆ ₹9.6 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಈ ಪ್ರೋತ್ಸಾಹಕಗಳನ್ನು ಖರೀದಿ ಬೆಲೆಯಲ್ಲಿ ಮುಂಗಡ ಕಡಿತವಾಗಿ ನೀಡಲಾಗುತ್ತದೆ ಮತ್ತು ಮೊದಲು ಬಂದವರಿಗೆ ಆದ್ಯತೆ ಆಧಾರದ ಮೇಲೆ PM E-DRIVE ಪೋರ್ಟಲ್ ಮೂಲಕ OEM ಗಳಿಗೆ ಮರುಪಾವತಿ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ದೇಶಾದ್ಯಂತ ಸುಮಾರು 5,600 ಇ-ಟ್ರಕ್‌ಗಳ ನಿಯೋಜನೆಯನ್ನು ಈ ಯೋಜನೆ ಬೆಂಬಲಿಸುವ ನಿರೀಕ್ಷೆಯಿದೆ. ದೆಹಲಿಯಲ್ಲಿ ನೋಂದಾಯಿಸಲಾದ 1,100 ಇ-ಟ್ರಕ್‌ಗಳಿಗೆ ಮೀಸಲಾದ ನಿಬಂಧನೆಯನ್ನು ರೂಪಿಸಲಾಗಿದೆ. ಇದರ ಅಂದಾಜು ವೆಚ್ಚ ₹100 ಕೋಟಿ. ರಾಜಧಾನಿಯ ಗಂಭೀರ ವಾಯು ಗುಣಮಟ್ಟದ ಸವಾಲುಗಳನ್ನು ಪರಿಹರಿಸುವ ಗುರಿಯನ್ನು ಇದು ಹೊಂದಿದೆ ಎಂದರು ಕುಮಾರಸ್ವಾಮಿ ಅವರು.

ಸಿಮೆಂಟ್ ಉದ್ಯಮ, ಬಂದರುಗಳು, ಉಕ್ಕು ಮತ್ತು ಇತರ ಸಾಗಾಣಿಕೆ ವಲಯವು ಈ ಯೋಜನೆಯ ಪ್ರಯೋಜನ ಪಡೆಯಲಿರುವ ಪ್ರಮುಖ ಕ್ಷೇತ್ರಗಳಾಗಿವೆ. ವೋಲ್ವೋ, ಐಷರ್, ಟಾಟಾ ಮೋಟಾರ್ಸ್ ಮತ್ತು ಅಶೋಕ್ ಲೇಲ್ಯಾಂಡ್‌ನಂತಹ ಹಲವಾರು ಪ್ರಮುಖ ಕಂಪನಿಗಳು ಈಗಾಗಲೇ ಭಾರತದಲ್ಲಿ ಎಲೆಕ್ಟ್ರಿಕ್ ಟ್ರಕ್‌ಗಳನ್ನು ತಯಾರಿಸುವಲ್ಲಿ ತೊಡಗಿಸಿಕೊಂಡಿವೆ. ಆತ್ಮನಿರ್ಭರ ಭಾರತ್ ದೃಷ್ಟಿಕೋನದ ಅಡಿಯಲ್ಲಿ ಸ್ಥಳೀಯ ಸಾಮರ್ಥ್ಯಗಳನ್ನು ಹೆಚ್ಚಿಸುತ್ತವೆ ಎಂದು ಸಚಿವರು ಹೇಳಿದರು.

150 ಇ-ಟ್ರಕ್ ಗಳನ್ನು ನಿಯೋಜಿಸಲಿದೆ ಉಕ್ಕು ಪ್ರಾಧಿಕಾರ

ವಿದ್ಯುತ್ ಚಾಲಿತ ಟ್ರಕ್ ಗಳ ಬಳಕೆಯಲ್ಲಿ ದೊಡ್ಡ ಹೆಜ್ಜೆ ಇರಿಸಿರುವ ಉಕ್ಕು ಸಚಿವಾಲಯದ ಅಧೀನ ಸಂಸ್ಥೆಯಾಗಿರುವ ಭಾರತೀಯ ಉಕ್ಕು ಪ್ರಾಧಿಕಾರ (SAIL) ಮುಂದಿನ ಎರಡು ವರ್ಷಗಳಲ್ಲಿ 150 ಇ-ಟ್ರಕ್‌ಗಳನ್ನು ತನ್ನ ಕಾರ್ಯಾಚರಣೆಯ ವಿವಿಧ ವ್ಯೂಹಾತ್ಮಕ ಸ್ಥಳಗಳಲ್ಲಿ ನಿರ್ಧರಿಸಿದೆ. ಅಲ್ಲದೆ, ವಿವಿಧ ಉದ್ದೇಶಗಳಿಗೆ ತಾನು ಬಳಕೆ ಮಾಡುತ್ತಿರುವ ಒಟ್ಟಾರೆ ಟ್ರಕ್ ಗಳ ಪೈಕಿ ಕನಿಷ್ಠ 15% ವಿದ್ಯುತ್ ಚಾಲಿತ ಟ್ರಕ್ ಗಳನ್ನೇ ಬಳಕೆ ಮಾಡಲು ಪ್ರಾಧಿಕಾರ ನಿರ್ಧರಿಸಿದೆ.

ಇದರ ಜತೆಯಲ್ಲಿ, ಪ್ರೋತ್ಸಾಹ ಧನಕ್ಕೆ ಅರ್ಹತೆ ಪಡೆಯಲು ಹಾಗೂ ತಾನು ಬಳಕೆ ಮಾಡುತ್ತಿರುವ ಅವಧಿ ಮೀರಿದ ಹಳೆಯ ಮಾಲಿನ್ಯಕಾರಕ ಟ್ರಕ್‌ಗಳನ್ನು ವಿಲೇವಾರಿ ಮಾಡಲಿದೆ ಎಂದು ಇದೇ ಸಂದರ್ಭದಲ್ಲಿ ಉಕ್ಕು ಸಚಿವರೂ ಆಗಿರುವ ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವಿ ಹಾಗೂ ಹೆಚ್ಚುವರಿ ಕಾರ್ಯದರ್ಶಿ ಹನೀಫ್ ಖುರೇಷಿ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]