ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

They are deceiving people by offering guarantee schemes: Nikhil Kumaraswamy

ಕೋಲಾರ: ಕಳೆದ ಎರಡು ವರ್ಷಗಳಿಂದ ಶಾಸಕರಿಗೆ ಸಿಗಬೇಕಾದ ಅನುದಾನಗಳನ್ನು ತಡೆ ಹಿಡಿಯುತ್ತಿದ್ದಾರೆ. ಆದ್ದರಿಂದ ಶಾಸಕರು ಹೋದಲ್ಲಿ ಬಂದಲ್ಲೆಲ್ಲಾ ಜನತೆ ಕಾಂಗ್ರೆಸ್ ಶಾಸಕರನ್ನೊಳಗೊಂಡಂತೆ ಎಲ್ಲರನ್ನೂ ಕೇಳುತ್ತಿದ್ದಾರೆ ಇದರಿಂದ ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

ಕೋಲಾರದಲ್ಲಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಮಾತನಾಡಿರು.

ಯಾವುದೆ ಚುನಾವಣೆ ಇಲ್ಲದಿದ್ದರೂ ಶ್ರೀನಿವಾಸಪುರ ತಾಲ್ಲೂಕಿನ ಕಾರ್ಯಕರ್ತರು ಅದ್ದೂರಿಯಾಗಿ ನನ್ನನ್ನು ಬರಮಾಡಿಕೊಂಡಿದ್ದು ತುಂಬಾ ಸಂತೋಷವಾಯಿತು ಎಂದು ತಿಳಿಸಿದರು.

ರಾಜ್ಯದ ಉಪಮುಖ್ಯಮಂತ್ರಿ ಜೆಡಿಎಸ್ ಪಕ್ಷದ ಶಾಸಕರಿಗೆ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಅನುದಾನ ಕೊಡುತ್ತೇವೆ ಎಂದು ಕರೆಸಿ ಅನುದಾನದ ಬಗ್ಗೆ ಹೊರೆತುಪಡಿಸಿ ಕುಮಾರಣ್ಣನ ಆರೋಗ್ಯದ ಬಗ್ಗೆ ಲೇವಡಿ ಮಾಡಿದರು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ನಿಖಿಲ್ ಕುಮಾರಸ್ವಾಮಿಯವರು ರಾಜ್ಯಾಧ್ಯಕ್ಷರಾಗುತ್ತಾರಂತೆ ಎಂದು ಕೇವಲವಾಗಿ ಮಾತನಾಡಿ ಪೊಟೋ ತೆಗೆದುಕೊಂಡು ಪ್ರಚಾರ ಮಾಡಿ ಕಳುಹಿಸಿದ್ದು ಹೊರೆತುಪಡಿಸಿದರೆ ಡಿಕೆ ಶಿವಕುಮಾರ್ ಅವರು ಯಾವುದೇ ಅನುದಾನ ಕೊಟ್ಟಿಲ್ಲ, ಇದು ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಎಂದು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಶ್ರೀನಿವಾಸಪುರ ತಾಲ್ಲೂಕಿನಲ್ಲಿ ರೋಡ್ ಮೂಲಕ ಬಂದಾಗ ರಸ್ತೆಗಳ ಬದಿಗಳಲ್ಲಿ ಮಾವಿನ ಹಣ್ಣನ್ನು ಚೆಲ್ಲಿರುವುದನ್ನು ನೋಡಿ ಮನಸ್ಸಿಗೆ ತುಂಬಾ ನೋವಾಯಿತು ಹಾಗೂ ಕುಮಾರಸ್ವಾಮಿಯವರು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಪರಿಹಾರಕ್ಕೆ ಒತ್ತಾಯ ಮಾಡಿದಾಗ ಕೇಂದ್ರ ಕೃಷಿ ಸಚಿವರು ಪರಿಹಾರ ಘೋಷಿಸಿದಾಗ ಮಾತ್ರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ, ಅಲ್ಲಿಯವರೆವಿಗೂ ರಾಜ್ಯ ಸರ್ಕಾರ ಮಾವು ಬೆಳೆಗಾರರ ಸಂಕಷ್ಟಕ್ಕೆ ಧಾವಿಸದೆ ನಿರ್ಲಕ್ಷ ತೋರಿತ್ತು ಎಂದು ಹೇಳಿದರು.

ಮೇಕೆದಾಟು ಯೋಜನೆ ಜಾರಿಗೆ ಜೆಡಿಎಸ್ ಪಕ್ಷದ ನಾಯಕರು ಸಂಪೂರ್ಣವಾಗಿ ಬೆಂಬಲಿಸಲು ಸಿದ್ದರಿದ್ದೇವೆ. ಕಾಂಗ್ರೆಸ್ ನಾಯಕರು ತಮಿಳುನಾಡಿನ ನಿಮ್ಮ ಮಿತ್ರ ಪಕ್ಷದ ನಾಯಕರೊಂದಿಗೆ ಅಣೆಕಟ್ಟಿಗೆ ಅನುಮತಿ‌ ಕೊಡಿಸಿದರೆ ಕೇಂದ್ರ ಸರ್ಕಾರದಿಂದ ಕುಮಾರಣ್ಣನವರು ಎಲ್ಲಾ ರೀತಿಯ ಸೌಲಭ್ಯಗಳು ಒದಗಿಸಲಿದ್ದಾರೆ ಎಂದರು.

ಒಂದು ಕಾಲದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ತರಕಾರಿ ಮತ್ತು ಹಣ್ಣುಗಳು ಇಡೀ ದೇಶದಲ್ಲಿಯೇ ಉತ್ತಮ ಗುಣಮಟ್ಟದ್ದಾಗಿತ್ತು ಆದರೆ ಕೆಸಿ ವ್ಯಾಲಿ ಮತ್ತು ಹೆಚ್ ಎನ್ ವ್ಯಾಲಿ ನೀರು ಜಿಲ್ಲೆಗೆ ಬಂದಾಗಿನಿಂದ ಜಿಲ್ಲೆಯಲ್ಲಿ ಬೆಳೆಯುವ ಹಣ್ಣು ತರಕಾರಿಗಳು ತಮ್ಮ ಗುಣಮಟ್ಟವನ್ನು ಕಳೆದುಕೊಂಡಿವೆ ಎತ್ತಿನ ಹೊಳೆ ಯೋಜನೆಯ ನೀರನ್ನು ಅವಳಿ ಜಿಲ್ಲೆಗಳಿಗೆ ಹರಿಸದೆ ಯೋಜನೆಯ ಹೆಸರಿನಲ್ಲಿ ಹಣ ಹೊಡೆದುಕೊಂಡು ಕುಳಿತಿದ್ದಾರೆ ಎಂದರು

ಚುನಾವಣೆಗೆ ಮೊದಲು ಪ್ರತಿ ತಿಂಗಳು ಜನತೆಗೆ ಗ್ಯಾರಂಟಿ ಯೋಜನೆಗಳು ಕೊಡುತ್ತೇವೆ ಎಂದು ಪ್ರಚಾರ ಮಾಡಿ ಅಧಿಕಾರಕ್ಕೆ ಬಂದರು ಆದರೆ 4-5 ತಿಂಗಳು ಕಳೆದರೂ ಗ್ಯಾರಂಟಿ ಯೋಜನೆಗಳು ಜನತೆಗೆ ತಲುಪುತ್ತಿಲ್ಲ, ಈಗ ಕಾಂಗ್ರೆಸ್ ನಾಯಕರು ನಾವೇನು ಪ್ರತಿ ತಿಂಗಳು ಕೊಡುತ್ತೇವೆ ಎಂದು ಹೇಳಿಲ್ಲ, ಯಾವಾಗಲೋ ಕೊಡುತ್ತೇವೆ ತೆಗೆದುಕೊಳ್ಳಿ ಎಂದು ಉಡಾಫೆ ಉತ್ತರ ಕೊಡುತ್ತಿದ್ದಾರೆ‌ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಲೋಕಸಭೆ ಚುನಾವಣೆ, ಉಪ ಚುನಾವಣೆ ಹಾಗು ಸ್ಥಳೀಯ ಸಂಸ್ಥೆ ಚುನಾವಣೆಗಳು ಹತ್ತಿರ ಬಂದಾಗ ಮಾತ್ರ ಜನರ ಖಾತೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಜನರನ್ನು ಮರಳು ಮಾಡಿ ಚುನಾವಣೆಗಳನ್ನು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ ಆದರೆ ಜನ ಯಾವಾಗಲೂ ನಿಮ್ಮ ಆಟಗಳಿಗೆ ಮರಳಾಗುವುದಿಲ್ಲ ಜನರೂ ಎಚ್ಚೆತ್ತುಕೊಂಡಿದ್ದಾರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]