Girls are making progress in education: Cmsiddaramaiah praises

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಬೆಂಗಳೂರು: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಮೆಚ್ಚುಗೆ ವ್ಯಕ್ತಪಡಿಸಿದರು.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.

ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು.

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದರು.

ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು ಎಂದರು.

ಜಾತ್ಯತೀತ ಮನೋಭಾವ ಹೊಂದಿದ್ದ ಅಹಲ್ಯಾ ಬಾಯಿ ಆಗಲೇ ಅಂತರ್ಜಾತಿ ವಿವಾಹ ಮಾಡಿಸಿದ್ದರು ಎಂದು ವಿವರಿಸಿದರು.

ಶಿಕ್ಷಣ ಪಡೆದು ಆರ್ಥಿಕವಾಗಿ ಸಾಮಾಜಿಕವಾಗಿ ಸಭಲರಾದರೆ ಮಾತ್ರ ಅಸಮಾನತೆ ಅಳಿಸಿ ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.

ನಮ್ಮ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ. ಬದಲಿಗೆ ಸಾಮಾಜಿಕವಾಗಿ ಸಬಲರಾಗುತ್ತಾರೆ ಎಂದರು.

ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.

ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಸಿ.ಎಂ ಘೋಷಣೆ ಮಾಡಿದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!