ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

Intention to loot biryani scheme for street dogs: R. Ashoka

ಬೆಂಗಳೂರು: ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಿಎಂ ಕುರ್ಚಿಯ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ಊಟ ನೀಡುವ ಯೋಜನೆ ತರಲಾಗಿದೆ.

ಬೀದಿನಾಯಿಗಳ ಉಪಟಳದಿಂದ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಅದಕ್ಕಾಗಿ ನಾಯಿಗಳ ಸಂಖ್ಯೆ ಕಡಿಮೆ ಮಾಡಬೇಕು ಎಂಬ ಉದ್ದೇಶದ ಯೋಜನೆ ಬಿಬಿಎಂಪಿಯಲ್ಲಿದೆ. ಜನರು ಹಾಗೂ ಸಂಘಟನೆಗಳು ಈಗಾಗಲೇ ಬೀದಿನಾಯಿಗಳಿಗೆ ಊಟ ಹಾಕುತ್ತಿದ್ದಾರೆ. ಈಗ ಬೌ ಬೌ ಬಿರಿಯಾನಿ ಹಾಕುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದರು.

ಪ್ರತಿ ಬೀದಿಗಳಲ್ಲಿ ಜನರು ಬೀದಿನಾಯಿಗಳಿಗೆ ಊಟ ಹಾಕುವುದು ಸಾಮಾನ್ಯವಾಗಿದೆ. ಈಗ ಹಣ ಲೂಟಿ ಮಾಡಲು ಇಂತಹ ಯೋಜನೆ ತರಲಾಗಿದೆ. ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದೆ. ಉದ್ಯಾನಗಳ ನಿರ್ವಹಣೆ ಆಗುತ್ತಿಲ್ಲ.

ಬಿಬಿಎಂಪಿ ಆಸ್ಪತ್ರೆಗಳಲ್ಲಿ ಸಂಬಳ ಕೊಡಲು ಹಣವಿಲ್ಲ. ಶಾಲೆಗಳ ಶಿಕ್ಷಕರಿಗೆ ಸಂಬಳ ನೀಡುತ್ತಿಲ್ಲ. ಯಾವುದಕ್ಕೂ ಹಣ ಇಲ್ಲ ಎಂದಾಗಿರುವಾಗ, ಬೀದಿನಾಯಿಗಳಿಗೆ ಬಿರಿಯಾನಿ ನೀಡಿ, ಅದರಲ್ಲಿ ಹಣ ಕೊಳ್ಳೆ ಹೊಡೆಯುವ ಸ್ಕೀಮ್‌ ತರಲಾಗಿದೆ ಎಂದರು.

ಬೀದಿನಾಯಿಗಳ ಆರೋಗ್ಯದ ಆರೈಕೆಗೆ ಪಶು ಆಸ್ಪತ್ರೆ ನಿರ್ಮಿಸಬಹುದಿತ್ತು. ಬೀದಿ ಬದಿಯಲ್ಲಿ ಬಿದ್ದಿರುವ ನಾಯಿ ಅಥವಾ ಅಪಘಾತಕ್ಕೊಳಗಾದ ನಾಯಿಗಳನ್ನು ತಂದು ಚಿಕಿತ್ಸೆ ನೀಡಬಹುದು. ಅದನ್ನು ಬಿಟ್ಟು ಆಹಾರ ನೀಡುವ ಯೋಜನೆ ತಂದಿರುವುದು ಸರಿಯಲ್ಲ.

ಬೀದಿನಾಯಿಗಳಿಗೆ ಮಾಂಸ ನೀಡುವುದರಿಂದ ಅವು ಕ್ರೂರವಾಗಿ ವರ್ತಿಸಬಹುದು. ಈಗಾಗಲೇ ನಮ್ಮ ಸಾಮಾನ್ಯ ಆಹಾರಕ್ಕೆ ಹೊಂದಿಕೊಂಡಿರುವ ಅವುಗಳಿಗೆ ಇಂತಹ ಆಹಾರ ನೀಡುವುದರಿಂದ ಸಮಸ್ಯೆ ಉಂಟಾಗಬಹುದು.

ಬಿಬಿಎಂಪಿಯ ಹಣವನ್ನು ತಿನ್ನಲು ದಾರಿ ಹುಡುಕಿಕೊಂಡಿದ್ದಾರೆ. ಬೆಕ್ಕು, ಹೆಗ್ಗಣಗಳಿಗೂ ಊಟ ನೀಡಬಹುದು ಎಂದರು.

ಈ ಯೋಜನೆಯಲ್ಲಿ ಇನ್ನು ಮುಂದೆ ಹಗರಣವಾಗಲಿದೆ. ಆಗ ಯಾವುದೋ ತನಿಖಾ ಸಮಿತಿಯನ್ನು ನೇಮಿಸುತ್ತಾರೆ. ಕೊನೆಗೆ ವರದಿ ಮುಚ್ಚಿಹೋಗುತ್ತದೆ. ಇಂತಹ ಅಕ್ರಮಗಳಿಗೆ ಇದು ಕಾರಣವಾಗಲಿದೆ ಎಂದರು.

ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಪೊಲೀಸರನ್ನು ಬಲಿಪಶು ಮಾಡಲಾಗಿದೆ. ಆಯುಕ್ತರು, ಡಿಸಿಪಿ ಮೇಲೆ ಆರೋಪ ಹೊರೆಸಿ ಕೈ ತೊಳೆದುಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು, ಗೃಹ ಸಚಿವರು ಎಲ್ಲ ಬಂದೋಬಸ್ತ್‌ ಮಾಡಿದ್ದರೆ, ಈ ಸಮಸ್ಯೆ ಆಗುತ್ತಿರಲಿಲ್ಲ. ಏನೂ ಮಾಡದೆ ಪೊಲೀಸರ ಮೇಲೆ ತಪ್ಪು ಹೊರಿಸಲಾಗಿದೆ. ಕ್ರಿಕೆಟಿಗ ವಿರಾಟ್‌ ಕೊಹ್ಲಿ ಅವರ ತಪ್ಪು ಕೂಡ ಇಲ್ಲ. ಸರ್ಕಾರದ ಮೇಲೆ ಆರೋಪ ಬರಬಾರದೆಂದು ಮೊದಲೇ ಹೇಳಿ ವರದಿ ಬರೆಸಲಾಗಿದೆ. ಇದು ಯೋಗ್ಯವಾದ ವರದಿ ಅಲ್ಲ. ಕೋರ್ಟ್‌ನಲ್ಲಿ ಬರುವ ತೀರ್ಪಿನ ಬಗ್ಗೆ ಮಾತ್ರ ನಂಬಿಕೆ ಇದೆ ಎಂದರು.

ಡಿ.ಕೆ.ಶಿವಕುಮಾರ್‌ (D.K. Shivakumar) ಸಿಎಂ ಆಗುತ್ತೇನೆ ಎಂದು ತಿಳಿದು ದೇವಾಲಯಗಳನ್ನು ಸುತ್ತುತ್ತಿದ್ದಾರೆ. ಬದಲಾವಣೆ ಬಗ್ಗೆ ಹೈಕಮಾಂಡ್‌ನಲ್ಲಿ ಚರ್ಚೆಯಾಗಿದೆ. ಡಿ.ಕೆ.ಶಿವಕುಮಾರ್‌ ಪಟ್ಟು ಬಿಡದೆ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತಾರೆ. ಸಿಎಂ ಬದಲಾವಣೆ ಖಂಡಿತ ಆಗಲಿದೆ ಎಂದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]