Veteran Telugu film actor Kota Srinivasa Rao is no more..!

ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ಇನ್ನಿಲ್ಲ..!

ಹೈದರಾಬಾದ್: ತೆಲುಗು ಚಿತ್ರರಂಗ ಮತ್ತೊಮ್ಮೆ ದುಃಖದಲ್ಲಿ ಮುಳುಗಿದೆ. ಕಳೆದ ನಾಲ್ಕು ದಶಕಗಳಿಂದ ತಮ್ಮ ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ (Kota Srinivasa Rao) ಅವರು ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಫಿಲ್ಮ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಕೋಟಾ ಶ್ರೀನಿವಾಸ ರಾವ್ ಅವರು ಪತ್ನಿ ರುಕ್ಕಿಣಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಕೋಟಾ ಶ್ರೀನಿವಾಸ ರಾವ್ ಅವರ ಅಗಲಿಕೆಯಿಂದ ತೆಲುಗು ಚಿತ್ರರಂಗದಲ್ಲಿ ಶೂನ್ಯತೆ ಮೂಡಿದೆ.

ವಯಸ್ಸಾದ ಕಾರಣ ನಡೆಯಲು ಕಷ್ಟವಾಗುತ್ತಿದ್ದರೂ, ಅವರು ಎರಡು ವರ್ಷಗಳ ಹಿಂದಿನವರೆಗೂ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು. 2023ರಲ್ಲಿ ತೆರೆಕಂಡ ‘ಸುವರ್ಣ ಸುಂದರಿ’ ಅವರ ಕೊನೆಯ ಸಿನಿಮಾ.

ತಮ್ಮ ಸುದೀರ್ಘ ಸಿನಿ ಪಯಣದಲ್ಲಿ ಕೋಟಾ ಶ್ರೀನಿವಾಸ ರಾವ್ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕೇವಲ ವಿಭಿನ್ನ ಪಾತ್ರಗಳನ್ನು ನಿರ್ವಹಿಸಲಿಲ್ಲ, ಬದಲಿಗೆ ಆ ಪಾತ್ರಗಳಲ್ಲಿ ಜೀವಿಸಿದರು ಎಂದರೆ ತಪ್ಪಾಗಲಾರದು.

ಅವರ ನಟನೆ ಹಾಸ್ಯ ಮತ್ತು ವಿಲನ್ ಪಾತ್ರದ ವಿಶಿಷ್ಟ ಮಿಶ್ರಣವಾಗಿತ್ತು. ವಿಲನ್ ಪಾತ್ರಗಳಲ್ಲೂ ಹಾಸ್ಯವನ್ನು ತರುವುದು ಅವರ ವಿಶೇಷತೆಯಾಗಿತ್ತು.

‘ಆಡವಾರಿ ಮಾಟಲಕು ಅರ್ಥಾಲೇ ವೇರು ಲೇ ಸಿನಿಮಾದಲ್ಲಿನ ತಂದೆಯ ಪಾತ್ರ, ಆಹ ನಾ ಪೆಳ್ಳಂಟ’ದಲ್ಲಿ ಕಂಜೂಸ್ ಪಾತ್ರವಿರಲಿ, ‘ಗಣೇಶ್’ ಚಿತ್ರದಲ್ಲಿ ರಾಜಕಾರಣಿಯ ಪಾತ್ರವಿರಲಿ, ನುವ್ವು ವಸ್ತಾವನಿ ಚಿತ್ರದ ಮದ್ಯವ್ಯಸನಿ ಪೋಷಕ ಪಾತ್ರ ಸೇರಿದಂತೆ ಪ್ರತಿಯೊಂದು ಪಾತ್ರಕ್ಕೂ ಅವರು ತಮ್ಮದೇ ಆದ ವಿಶಿಷ್ಟ ಸ್ಪರ್ಶವನ್ನು ನೀಡುತ್ತಿದ್ದರು.

ಕೋಟಾ ಶ್ರೀನಿವಾಸ ರಾವ್ ಅವರು 1942ರ ಜುಲೈ 10ರಂದು ಕೃಷ್ಣಾ ಜಿಲ್ಲೆಯ ಕಂಕಿಪಡು ಎಂಬಲ್ಲಿ ಜನಿಸಿದರು. ಅವರ ತಂದೆ ಸೀತಾರಾಮಾಂಜನೇಯಲು ವೈದ್ಯರಾಗಿದ್ದರು.

ಕೋಟಾ ಅವರು ಚಿಕ್ಕ ವಯಸ್ಸಿನಲ್ಲಿ ವೈದ್ಯರಾಗಬೇಕೆಂದು ಕನಸು ಕಂಡರೂ, ಶಾಲಾ ದಿನಗಳಲ್ಲಿ ನಾಟಕಗಳಲ್ಲಿ ಸಕ್ರಿಯರಾದ ನಂತರ ನಟನೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಪದವಿ ನಂತರ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಸಿಕ್ಕರೂ, ನಟನೆಯನ್ನೇ ತಮ್ಮ ವೃತ್ತಿಯನ್ನಾಗಿ ಆರಿಸಿಕೊಂಡರು.

ಅವರು ಕೇವಲ ತೆಲುಗು ಮಾತ್ರವಲ್ಲದೆ, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳ ಚಲನಚಿತ್ರಗಳಲ್ಲೂ ನಟಿಸಿದ್ದಾರೆ. ಕನ್ನಡದಲ್ಲಿ ‘ಲೇಡಿ ಕಮಿಷನರ್’, ‘ರಕ್ತ ಕಣ್ಣೀರು’, ‘ಲವ್’, ‘ನಮ್ಮ ಬಸವ’, ‘ನಮ್ಮಣ್ಣ’, ‘ಶ್ರೀಮತಿ’, ‘ಕಬ್ಬಾ’ ಸೇರಿದಂತೆ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೋಟಾ ಶ್ರೀನಿವಾಸ ರಾವ್ ಅವರು ನಟನೆಯ ಜೊತೆಗೆ ರಾಜಕೀಯದಲ್ಲೂ ತೊಡಗಿಕೊಂಡಿದ್ದರು. 1999ರಿಂದ 2004ರವರೆಗೆ ವಿಜಯವಾಡ ಪೂರ್ವ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

ಅವರ ಮಗ ಕೋಟಾ ವೆಂಕಟ ಆಂಜನೇಯ ಪ್ರಸಾದ್ ತಂದೆಯ ಹೆಜ್ಜೆ ಹಿಡಿದು ಚಿತ್ರರಂಗಕ್ಕೆ ಬಂದಿದ್ದರೂ, ದುರದೃಷ್ಟವಶಾತ್ ಅಪಘಾತವೊಂದರಲ್ಲಿ ಅಕಾಲಿಕವಾಗಿ ನಿಧನರಾದರು. ಮಗನ ಸಾವಿನಿಂದ ಕೋಟಾ ಅವರು ತೀವ್ರವಾಗಿ ನೊಂದಿದ್ದರು.

ಅವರ ಸಹೋದರ ಶಂಕರ್ ರಾವ್ ಕೂಡ ನಟರಾಗಿದ್ದಾರೆ. ಕೋಟಾ ಶ್ರೀನಿವಾಸ ರಾವ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಮತ್ತು ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!