ದೊಡ್ಡಬಳ್ಳಾಪುರ: ಕಸಾಪದಿಂದ ಆಲೂರು ವೆಂಕಟರಾಯರು ಜನ್ಮದಿನಾಚರಣೆ

Doddaballapura: Alur Venkatarayaru 's birthday celebrated with a kasapa

ದೊಡ್ಡಬಳ್ಳಾಪುರ; ಕರ್ನಾಟಕ ಏಕೀಕರಣ ಚಳುವಳಿ ಮೂಲಕ‌ ಕನ್ನಡ ನಾಡನ್ನು ಒಗ್ಗೂಡಿಸಿದವರು ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾಯರು (Alur Venkatarayaru) ಎಂದು ಹಿರಿಯ ಸಾಹಿತಿ ಶರಣಯ್ಯ ಹಿರೇಮಠ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಆಲೂರು ವೆಂಕಟರಾಯರು ಜನ್ಮದಿನಾಚರಣೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕರ್ನಾಟಕ ಇತಿಹಾಸ ಮತ್ತು ಕನ್ನಡ ಸಾಹಿತ್ಯದ  ಬಗ್ಗೆ ಅಪಾರ ಆಸಕ್ತಿ,  ಅಧ್ಯಯನಶೀಲರಾಗಿದ್ದ  ಆಲೂರು ವೆಂಕಟರಾಯರು ಕನ್ನಡ ಸಾಹಿತಿಗಳಿಗೆ ಮತ್ತು  ಅವರ ಪುಸ್ತಕ ಪ್ರಕಟಣೆಗೆ ಪ್ರೋತ್ಸಾಹ ನೀಡಿದರು ಎಂದರು.

ಜಯಕರ್ನಾಟಕ ಪತ್ರಿಕೆಯ ಮೂಲಕ ದ.ರಾ ಬೇಂದ್ರೆ, ಬೆಟಗೇರಿ ಕೃಷ್ಣಶರ್ಮ, ಶ್ರೀರಂಗ, ಶಂ.ಭಾ ಜೋಷಿ  ಮುಂತಾದ ಹಲವು ಸಾಹಿತಿಗಳಲ್ಲದೆ ಕನ್ನಡ ನಾಡಿನ ಎಲ್ಲಾ ಪ್ರದೇಶದ ಸಾಹಿತಿಗಳ ಸಾಹಿತ್ಯ ರಚನೆಗೆ ಸಹಕಾರ ನೀಡಿದರು.  

ಆಲೂರು ವೆಂಕಟರಾಯರ  ಬಹುಮುಖ ಪ್ರತಿಭೆ,   ಕನ್ನಡ ಮತ್ತು ಕನ್ನಡಿಗರ ಬಗ್ಗೆ ಅವರಿಗಿದ್ದ ಕಾಳಜಿ, ಕಾರ್ಯಪ್ರವೃತ್ತಿ   ಅನನ್ಯವಾದದ್ದು.  ಇದರಿಂದಾಗಿ ಆಲೂರು ವೆಂಕಟರಾಯರನ್ನು  ಕರ್ನಾಟಕದ ಪ್ರಾಣೋಪಾಸಕರು   ಎಂದು  ವರಕವಿ ದ.ರಾ.ಬೇಂದ್ರೆ ಕರೆದಿದ್ದಾರೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ  ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ, ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆಯಲ್ಲಿ  ಆಲೂರು ವೆಂಕಟರಾಯರು ಮಹತ್ವದ ಪಾತ್ರ ವಹಿಸಿದ್ದಾರೆ.  ಕನ್ನಡ  ಗ್ರಂಥಕರ್ತರ  ಸಮ್ಮೇಳನ ನಡೆಸುವ ಮೂಲಕ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಟುವಟಿಕೆಗಳನ್ನು ವಿಸ್ತಾರಗೊಳಿಸಿದರು.

ಕರ್ನಾಟಕ ಗತವೈಭವ ಸೇರಿದಂತೆ ಹಲವಾರು ಮಹತ್ವದ ಕೃತಿಗಳನ್ನು  ಆಲೂರು ವೆಂಕಟರಾಯರು ರಚಿಸಿದ್ದಾರೆ.     ಕರ್ನಾಟಕದ ಏಕೀಕರಣ ಮತ್ತು  ಭಾರತದ ಸ್ವಾತಂತ್ರ್ಯ ಹೋರಾಟ ಎರಡು ಚಳವಳಿಗಳಲ್ಲಿ  ಸಕ್ರಿಯವಾಗಿ ಭಾಗವಹಿಸಿದ್ದರು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿಗಳಾದ ಪ್ರೊ.ಕೆ.ಆರ್.ರವಿಕಿರಣ್, ಎ.ಎಸ್. ಅಶ್ವತ್ಥಗೌಡ, ಕೋಶಾಧ್ಯಕ್ಷ ಡಾ.ಮುನಿರಾಜು, ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ, ಪ್ರತಿನಿಧಿ ರಮೇಶ್ ಕುಮಾರ್, ನೆಲಮಂಗಲ ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ಪ್ರಕಾಶಮೂರ್ತಿ, ಗೌರವ ಕಾರ್ಯದರ್ಶಿ ಭಾನುಪ್ರಕಾಶ್, ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಜಿ.ಸುರೇಶ್, ಹೊಸಕೋಟೆ ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿ ತಾವರೆಕೆರೆ ನಾಗರಾಜು, ಪ್ರತಿನಿಧಿಗಳಾದ  ಮುನಿವೀರಪ್ಪ, ಮಾರ್ಕೊಂಡಪ್ಪ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!