Shakti scheme provides free travel to women in the state

ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ, ಡಿಸಿಎಂ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ(Shakti scheme) 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.

ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ

ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು.

ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ.

ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ.

ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.

ಕನ್ನಡದ ಮೇರುನಟಿ ಬಿ.ಸರೋಜಾದೇವಿ ನಿಧನ: ಮುಖ್ಯಮಂತ್ರಿಗಳ ಸಂತಾಪ

ಭಾರತೀಯ ಚಿತ್ರರಂಗದ ಖ್ಯಾತ ಚಿತ್ರನಟಿ ಬಿ.ಸರೋಜಾದೇವಿ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುತ್ತಾ ಮಾತನಾಡಿದ ಮುಖ್ಯಮಂತ್ರಿಗಳು, ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು.

ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ.

ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!