ಶಕ್ತಿ ಯೋಜನೆಯ 500 ಕೋಟಿ ಉಚಿತ ಟಿಕೆಟ್ ವಿತರಣೆ: ದೊಡ್ಡಬಳ್ಳಾಪುರದಲ್ಲಿ ಶಕ್ತಿ ಸಂಭ್ರಮ

Guarantee scheme: Shakti celebrations in Doddaballapur

ದೊಡ್ಡಬಳ್ಳಾಪುರ: ಗ್ಯಾರಂಟಿ ಯೋಜನೆಗಳ (Guarantee scheme) ಅನುಷ್ಟಾನ ಸಮಿತಿವತಿಯಿಂದ ನಗರದ KSRTC ಬಸ್ ನಿಲ್ದಾಣದಲ್ಲಿ ಬಸ್ ಗಳಿಗೆ ವಿಶೇಷ ಅಲಂಕಾರ ಮಾಡಿ, ಪೂಜೆ ಸಲ್ಲಿಸಿ, ಬಸ್ ನಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬಳಿಕ ಶಕ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಗೆ ಅಭೂತಪೂರ್ವ ಬೆಂಬಲ ದೊರೆತಿದ್ದು, ಈವರೆಗೆ ರಾಜ್ಯದಾದ್ಯಂತ ಸುಮಾರು 500ಕೋಟಿ ಮಹಿಳಾ ಪ್ರಯಾಣಿಕರು ಈ ಯೋಜನೆಯ ಲಾಭ ಪಡೆದಿರುವುದು ಸಂತಸದ ಸಂಗತಿಯಾಗಿದೆ.

ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ನಾರಿಯರ ಸಬಲೀಕರಣಕ್ಕೆ ಪುಷ್ಠಿ ನೀಡಿದೆ. ರಾಜ್ಯದಾದ್ಯಂತ ಪ್ರತಿದಿನ ಸುಮಾರು 50-60ಲಕ್ಷ ಮಹಿಳೆಯರಿಗೆ ಈ ಯೋಜನೆಯ ಲಾಭ ದೊರೆಯುತ್ತಿದೆ.

ಕಾಂಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಗೃಹಜ್ಯೋತಿ, ಯುವನಿಧಿ ಈ ರೀತಿಯ ಯೋಜನೆಗಳನ್ನು ಹಿಂದಿನ ಯಾವ ಸರ್ಕಾರವು ಮಾಡಿರಲಿಲ್ಲ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಎನ್ ವಿಶ್ವನಾಥ್ ರೆಡ್ಡಿ ಮಾತನಾಡಿ, ಶಕ್ತಿ ಯೋಜನೆಯ ಕುರಿತು ರಾಷ್ಟ್ರೀಯ-ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಅಧ್ಯಯನಗಳು ನಡೆದಿದ್ದು ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ನೆರೆಯ ರಾಜ್ಯಗಳೂ ಕೂಡ ಈ ಯೋಜನೆಯನ್ನು ಮಾದರಿಯಾಗಿ ಇಟ್ಟುಕೊಂಡು ಅನುಷ್ಠಾನಕ್ಕೆ ಮುಂದಾಗಿರುವುದು ಯೋಜನೆಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ.

ಒಟ್ಟಾರೆಯಾಗಿ ಶಕ್ತಿ ಯೋಜನೆ ಮಹಿಳೆಯರ ಆರ್ಥಿಕ ಶಕ್ತಿಗೆ ನವಚೈತನ್ಯ ತುಂಬಿದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದ ಅವರು, ಕಾಲಕಾಲಕ್ಕೆ ಬೆಲೆ ಏರಿಕೆಯ ಬಿಸಿ, ನಿರುದ್ಯೋಗ ಮತ್ತಿತರ ಹಲವು ಕಾರಣಗಳಿಂದಾಗಿ ಸಂಕಷ್ಟದಲ್ಲಿದ್ದ ಜನರ ಸ್ಥಿತಿಗತಿಗಳನ್ನು ಅರಿತು, ಆಡಳಿತಾರೂಢ ಸರ್ಕಾರವು ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಶಕ್ತಿ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಸ್ ಚಾಲಕ, ನಿರ್ವಾಹಕರಿಗೆ ಹಾಗೂ ಡಿಪೋ ವ್ಯವಸ್ಥಾಪಕರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಸದಸ್ಯ ಅಂಜನ ಮೂರ್ತಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಪಿ ಜಗನಾಥ್, ಕೆಪಿಸಿಸಿ ಸದಸ್ಯ ಹೇಮಂತ್ ರಾಜ್, ಕಸಬ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ನಗರಸಭೆ ನಾಮಿನಿ ಸದಸ್ಯ ಅಖಿಲೇಶ್, ಕಾಂತರಾಜ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರೇವತಿ ಅನಂತ್ ರಾಮ್, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶ್ರೀನಗರ ಬಶೀರ್, ಮುಖಂಡರಾದ ಆದಿತ್ಯ ನಾಗೇಶ್, ನೂರುಲ್ಲಾ, ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ರಾಘವ ಮತ್ತಿತರರಿದ್ದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]