Doddaballapura: SSLC, PUC achievers honored by Chalavadi Mahasabha

ದೊಡ್ಡಬಳ್ಳಾಪುರ: SSLC, PUC ಸಾಧಕರಿಗೆ ಛಲವಾದಿ ಮಹಾಸಭಾದಿಂದ ಸನ್ಮಾನ

ದೊಡ್ಡಬಳ್ಳಾಪುರ: ನಗರದ ಕನ್ನಡ ಜಾಗೃತ ಭವನದಲ್ಲಿ ಛಲವಾದಿ ಮಹಾಸಭಾದ ವತಿಯಿಂದ 2024-25ನೇ ಸಾಲಿನ ಎಸ್ಎಸ್ಎಲ್‌ಸಿ (SSLC)ಮತ್ತು ಪಿಯುಸಿಯಲ್ಲಿ (PUC) ಅತಿ ಹೆಚ್ಚು ಅಂಕ ಪಡೆದ ಛಲವಾದಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ, ಬೋದಿವೃಕ್ಷಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ಮಾಡಿದ ಛಲವಾದಿ ಮಹಾಸಭಾದ ರಾಜ್ಯಧ್ಯಕ್ಷರಾದ ಶ್ರೀ ವಾಣಿ ಕೆ. ಶಿವರಾಮ್ ಮಾತನಾಡಿದರು.

ಕಡುಬಡತನದ ವಾತಾವರಣದಲ್ಲಿ ಹುಟ್ಟಿಬೆಳೆದು, ಶಿಕ್ಷಣದ ಮಹತ್ವವನ್ನು ಅರ್ಥ ಮಾಡಿಕೊಂಡು, ಇಡೀ ಕರ್ನಾಟಕದಲ್ಲೇ ಮೊದಲಿಗರಾಗಿ, ಕನ್ನಡ ಭಾಷೆಯಲ್ಲಿ ಐಎಎಸ್ ಪರೀಕ್ಷೆಯನ್ನು ಪಾಸು ಮಾಡಿ, ಉನ್ನತ ಅಧಿಕಾರಿಯಾಗಿ, ಬಹುತೇಕ ಬಡವರಿಗಾಗಿ ಉತ್ತಮ ಸೇವೆಯನ್ನು ನೀಡಿ, ಉತ್ತಮ ಸಮಾಜಸೇವಕರಾಗಿ ಖ್ಯಾತಿಗಳಿಸಿದ ಕೆ.ಶಿವರಾಮ್ ರವರನ್ನು ಛಲವಾದಿ ಸಮುದಾಯದ ವಿದ್ಯಾರ್ಥಿಗಳು ಅನುಸರಿಸುವ ಮೂಲಕ ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು ಎಂದ ಅವರು ಛಲವಾದಿ ಸಮುದಾಯದ ಎಲ್ಲರೂ ಒಗ್ಗಟ್ಟಿನಿಂದ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಾಗವಹಿಸಿ, ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಡಾ ದೇವರಾಜ್, ಎಲ್ಲಾ ಸಮಾಜದ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಗುಣಮಟ್ಟದ ಶಿಕ್ಷಣ ಕೊಡಿಸಲು ಉತ್ತಮವಾದ ವಾತಾವರಣ ಕಲ್ಪಿಸಿಕೊಡುವುದಲ್ಲದೇ, ವಿದ್ಯಾರ್ಥಿಗಳ ಕಡೆಗೆ ಹೆಚ್ಚು ಗಮನ ವಹಿಸಬೇಕಿದೆ.

ಮಹಿಳೆಯರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಹೆಚ್ಚು ಕಾಳಜಿ ವಹಿಸಬೇಕಿದೆ ಎಂದು ಕಿವಿ ಮಾತು ಹೇಳಿದ ಅವರು ಸರ್ಕಾರವು ಸಮಾಜ ಕಲ್ಯಾಣ ಇಲಾಖೆವತಿಯಿಂದ ಉನ್ನತ ಶಿಕ್ಷಣಕ್ಕಾಗಿ sc/st ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಕೋಟಿ ರೂಪಾಯಿಗಳವರೆಗೆ ಪ್ರೋತ್ಸಾಹ ಧನ ನೀಡುತ್ತಿದೆ. ಈ ಯೋಜನೆಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸುತ್ತಾ, ಸರ್ಕಾರದ ಯೋಜನೆಗಳ ಕುರಿತು ವಿವರಣೆ ನೀಡಿದರು.

ಆಕಾಶವಾಣಿ ಕಾರ್ಯಕ್ರಮ ಗಳ ನಿರ್ಮಾಪಕರು ಹಾಗೂ ನಿವೃತ್ತ ನಿರ್ದೇಶಕರು ಮತ್ತು ಕವಿಗಳು, ಚಿಂತಕರೂ ಆದ “ಸುಬ್ಬು ಹೊಲೆಯಾರ್ ” ಮಾತನಾಡಿ, ನಮ್ಮನ್ನ ಆಳುತ್ತಿರುವ ಸರ್ಕಾರಗಳು ನೈಜ ಬದುಕಿಗೆ ಉತ್ತಮ ಮಾರ್ಗದರ್ಶನ ನೀಡುವ ಶಿಕ್ಷಣದ ದಿಕ್ಕನ್ನೇ ಬದಲಾಯಿಸಿ, ಪುರಾತನ ಕಾಲದ ಶಿಕ್ಷಣ ಪದ್ದತಿಯ ಕಡೆಗೆ ಎಳೆದು ತರುವ ಪ್ರಯತ್ನ ನಡೆಸಲಾಗುತ್ತಿದೆ. ಇದು ನಿಲ್ಲಬೇಕು?. ಮೌಲ್ಯಯುತ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದ ಅವರು ಇತ್ತೀಚಿಗೆ ಕೃತಕ ಬುದ್ದಿಮತ್ತೆಯಂತಹ ಶಿಕ್ಷಣದ ಕಡೆಗೆ ವಿದ್ಯಾರ್ಥಿಗಳು ನೋಡುತ್ತಿರುವುದನ್ನು ಗಮನಿಸಿದ್ದೆನೇ. ಇದರ ಕಡೆಗೆ ಹೆಚ್ಚು ಗಮನ ನೀಡದೆ, ಎಲ್ಲಾ ಮಾಹಿತಿಗಳಿಗೂ ಮೊಬೈಲ್ ಗಳ ಮೊರೆ ಹೋಗದೇ, ವಿಕ್ಷಣೆ ನಿಲ್ಲಿಸಿ, ಒಳ್ಳೆಯದನ್ನಷ್ಟೇ ಉಪಯೋಗಿಸಿಕೊಂಡು, ಒಂದು ದಿನಕ್ಕೆ ಕನಿಷ್ಠ ಐದು ಗಂಟೆಗಳ ಕಾಲ ಓದಿನ ಕಡೆಗೆ ಗಮನ ಹರಿಸಬೇಕು ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಛಲವಾದಿ ಸಮುದಾಯದ ವಿದ್ಯಾರ್ಥಿಗಳಿಗೆ ಶ್ರೀ ದೀಪಂಕರ ಮೈತ್ರೆಯ ಸೋಷಿಯಲ್ ಅಂಡ್ ಚಾರಿಟಬಲ್ ಟ್ರಸ್ಟ್ ನ ವತಿಯಿಂದ ಪುರಸ್ಕೃತ ವಿದ್ಯಾರ್ಥಿಗಳಿಗೆ ಕಿರು ಕಾಣಿಕೆ ನೀಡಿ, ಪ್ರೋತ್ಸಾಹಿಸಲಾಯಿತು.

ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ಘಟಕದ ಅಧ್ಯಕ್ಷಸಿ. ಗುರುರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೋಲಿಗೆರೆಯ ನಿವೃತ್ತ ಅಭಿಯಂತರರಾದ ಕುಮಾರಸ್ವಾಮಿ ಮತ್ತು ಹೊಸಕೋಟೆಯ ಸಾದರಬೀದಿಯ ಮುರಳಿ ವೇದಿಕೆಯಲ್ಲಿದ್ದರು.

ಕಾರ್ಯಕ್ರಮವನ್ನು ಹಿರಿಯರಾದ ಬಿ. ದೊಡ್ಡರಂಗಪ್ಪ ನಿರೂಪಿಸಿದರೆ, ಮಹಾಸಭಾದ ಪ್ರಧಾನ ಕಾರ್ಯದರ್ಶಿ ಡಿ ಎನ್ ಎಲ್ ಎನ್ ಮೂರ್ತಿ ಸ್ವಾಗತಿಸಿ, ವಂದಿಸಿದರು.

ಉಪಾಧ್ಯಕ್ಷರಾದ ಕೊನಘಟ್ಟದ ಎ. ಮುನಿಕೃಷ್ಣ ಪ್ಪ, ಗೂಳ್ಯ ಮುನಿದಾಸಪ್ಪ, ಸಕ್ಕರೆ ಗೊಲ್ಲಹಳ್ಳಿಯ ಹನುಮಂತಯ್ಯ, ಆರೂಢಿಯ ಲಕ್ಷ್ಮೀಪತಿ, ಕೃಷ್ಣಪ್ಪ, ದೊಡ್ಡಬೆಳವಂಗಲ ಹೋಬಳಿ ಘಟಕದ ಎನ್. ಉದಯಶಂಕರ್, ಮಧುರೆ ಹೋಬಳಿಯ ವೆಂಕಟೇಶ್, ತೂಬಗೆರೆಯ ವೆಂಕಟೇಶ್,ದಯಾನಂದ, ಶಂಕರ್ ಕಚೇರಿಪಾಳ್ಯ,ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮೇನಕಮ್ಮ, ಹಮಾಮ್ ರತ್ನಮ್ಮ,ಲಕ್ಷ್ಮಣ, ಗಂಟಿಗಾನಳ್ಳಿಯ ಮುನಿಯಮ್ಮ, ರವಿ, ಕೊನಘಟ್ಟದ ಹರೀಶ್ ಮತ್ತು ಸಂಗಡಿಗರು ಹಾಗೂ ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!