ಹರಿತಲೇಖನಿ ದಿನಕ್ಕೊಂದು ಕಥೆ: ಸುಂದರವಾದ ಮಂಚವನ್ನೇ ಮುರಿದ ಕರ್ಣ..!

Karna broke the beautiful couch..!

Harithalekhani: ಕರ್ಣನು ದುರ್ಯೋಧನನ ಸ್ನೇಹಿತನಾಗಿದ್ದನು. ಅವನು ಒಬ್ಬ ಶ್ರೇಷ್ಟ ದಾನಿ ಎಂದು ಪ್ರಸಿದ್ಧನಾಗಿದ್ದಾರೆ.

ಅವರ ಬಳಿ ಸಹಾಯ ಬೇಡಿ ಬಂದ ಯಾರನ್ನೂ ಅವನು ಬರಿಗೈಯಲ್ಲಿ ಕಳಿಸುತ್ತಿರಲಿಲ್ಲ. ಅವನು ಪ್ರತಿದಿನ ನದಿಗೆ ಸ್ನಾನ ಮಾಡಲು ಹೋಗುತ್ತಿದ್ದನು. ನೀರಿನಲ್ಲಿ ಇಳಿದು ಸೂರ್ಯನಿಗೆ ಅರ್ಘ್ಯವನ್ನು ನೀಡುತ್ತಿದ್ದನು ಮತ್ತು ಅವನ ಬಳಿ ಬಂದ ಯಾಚಕರಿಗೆ ಬೇಡಿದನ್ನು ನೀಡುತ್ತಿದ್ದನು.

ಒಂದು ಸಲ ಭಗವಾನ ಶ್ರೀಕೃಷ್ಣ ಮತ್ತು ಅರ್ಜುನ ಕುಳಿತು ಮಾತಾಡುತ್ತಿದ್ದರು. ಮಾತಾಡುತ್ತಾ ಮಾತಾಡುತ್ತಾ ಕರ್ಣನ ದಾನಶೂರತೆಯ ಬಗ್ಗೆ ಚರ್ಚೆಯಾಯಿತು. ಶ್ರೀ ಕೃಷ್ಣನು ಕರ್ಣನ ದಾನಶೂರತೆಯನ್ನು ಪ್ರಶಂಸಿಸಿದನು. ಶ್ರೀಕೃಷ್ಣನು ಹೇಳಿದನು, “ಕರ್ಣನಂತ ಉದಾರಿ ವ್ಯಕ್ತಿಯು ಯಾರೂ ಇಲ್ಲ.”

ಇದನ್ನು ಕೇಳಿ ಅರ್ಜುನನು ಆಶ್ಚರ್ಯಚಕಿತನಾದನು ಮತ್ತು ಹೇಳಿದನು, “ಶ್ರೀಕೃಷ್ಣಾ, ಧರ್ಮರಾಜ ಕೂಡ ದಾನವೀರನೇ ಇದ್ದಾನೆ”. ಹಾಗಿದ್ದರೆ ಯಾರು ಹೆಚ್ಚು ದಾನವೀರರಿದ್ದಾರೆ ಎಂದು ಅವರು ಚರ್ಚಿಸಲು ಪ್ರಾರಂಭಿಸಿದರು. ಆಗ ಶ್ರೀಕೃಷ್ಣನು, “ಸರಿ ಹಾಗಿದ್ದರೆ, ನಾಳೆಯೇ ನಾವು ಕರ್ಣ ಮತ್ತು ಧರ್ಮರಾಜರ ಬಳಿ ಹೋಗಿ ಪರೀಕ್ಷಿಸೋಣ” ಎಂದು ಹೇಳಿದರು.

ಆಗ ಮಳೆಗಾಲವಿತ್ತು. ಮರುದಿನ ಸೂರ್ಯನು ಉದಯಿಸುತ್ತಿದ್ದಂತೆಯೇ ಶ್ರೀಕೃಷ್ಣ ಮತ್ತು ಅರ್ಜುನರು ಧರ್ಮರಾಜರ ಬಳಿಗೆ ಹೋದರು. ಅವರನ್ನು ನೋಡಿ ಧರ್ಮರಾಜನಿಗೆ ತುಂಬಾ ಆನಂದವಾಯಿತು. ಅವರನ್ನು ಆದರದಿಂದ ಸತ್ಕರಿಸಿದನು ಮತ್ತು ಅಲ್ಲಿಗೆ ಆಗಮಿಸಿದ ಕಾರಣವನ್ನು ಕೇಳಿದನು. ಆಗ ಶ್ರೀಕೃಷ್ಣನು ಹೇಳಿದನು, “ರಾಜ್ಯದಲ್ಲಿ ತಕ್ಷಣ ಒಂದು ಬೃಹತ್ ನಿರ್ಮಾಣ ಕಾರ್ಯ ಮಾಡಬೇಕಿದೆ. ಅದಕ್ಕಾಗಿ ಕಟ್ಟಿಗೆ ಬೇಕಾಗಿದೆ”. ತಕ್ಷಣ ಧರ್ಮರಾಯನು ತನ್ನ ಸೇವಕರನ್ನು ಕರೆದನು ಮತ್ತು ನಿರ್ಮಾಣಕ್ಕಾಗಿ ಅತ್ಯಂತ ಒಳ್ಳೆಯ ಗುಣಮಟ್ಟದ ಕಟ್ಟಿಗೆಯನ್ನು ತನ್ನಿರಿ ಎಂದು ಆಜ್ಞಾಪಿಸಿದನು. ತುಂಬಾ ಹೊತ್ತಾದರೂ ಸೇವಕರು ಹಿಂತಿರುಗಲಿಲ್ಲ.

ಸ್ವಲ್ಪ ಸಮಯದ ನಂತರ ಸೇವಕರು ತಲೆಯನ್ನು ಬಗ್ಗಿಸಿ ಖಾಲಿ ಕೈಯಲ್ಲಿ ಹಿಂತಿರುಗಿದರು. ಆಗ ಧರ್ಮರಾಜನು ಕೇಳಿದನು, “ಏನಾಯಿತು? ಕಟ್ಟಿಗೆಯು ಸಿಗಲಿಲ್ಲವೇ?”. ಸೇವಕರು ಹೇಳಿದರು, “ಮಳೆಯ ಕಾರಣದಿಂದಾಗಿ ಎಲ್ಲಾ ಕಟ್ಟಿಗೆಗಳು ಒದ್ದೆಯಾಗಿ ಬಿಟ್ಟಿದೆ. ಹಾಗಾಗಿ ನಾವು ಕಟ್ಟಿಗೆಯನ್ನು ತರಲಿಲ್ಲ”. ಧರ್ಮರಾಯನು ವಿಧಿ ಇಲ್ಲದೇ ಅರ್ಜುನ ಮತ್ತು ಕೃಷ್ಣನಿಗೆ ಕಟ್ಟಿಗೆ ಸಿಗಲಿಲ್ಲ ಎಂದು ತಿಳಿಸಿದನು.

ಅರ್ಜುನ ಮತ್ತು ಕೃಷ್ಣ ಹಿಂತಿರುಗಿದರು. ನಂತರ ಅವರು ಕರ್ಣನ ಬಳಿ ಹೋದರು. ಕರ್ಣನು ಅವರಿಗೆ ಆದರದಿಂದ ಕೂರಲು ಹೇಳಿದನು ಮತ್ತು ಅವರ ಕ್ಷೇಮ ಸಮಾಚಾರ ವಿಚಾರಿಸಿಕೊಂಡನು. ಆಗ ಅರ್ಜುನನು ಕಟ್ಟಿಗೆಯ ಕುರಿತು ಹೇಳಿದನು. ಆಗ ಕರ್ಣನು, “ಇಷ್ಟೇ ತಾನೇ? ಇದರಲ್ಲಿ ಇಷ್ಟು ಚಿಂತೆ ಮಾಡಲು ಏನಿದೆ?” ಎಂದು ಹೇಳುತ್ತಾ ತನ್ನ ಸೇವಕರನ್ನು ಕಟ್ಟಿಗೆ ತರಲು ಕಳಿಸಿದನು.

ಸ್ವಲ್ಪ ಸಮಯದಲ್ಲಿ ಆ ಸೇವಕರು ಹಿಂತಿರುಗಿದರು ಮತ್ತು ಹೇಳಿದರು, “ಮಳೆಯಲ್ಲಿ ಎಲ್ಲಾ ಕಟ್ಟಿಗೆಯು ಒದ್ದೆಯಾದ ಕಾರಣ ಯಾವುದೇ ಕಟ್ಟಿಗೆ ಸಿಗಲಿಲ್ಲ”.

ಇದನ್ನು ಕೇಳಿದ ಕರ್ಣನು ಅರಮನೆಯ ಒಳಗೆ ಹೋದನು ಮತ್ತು ಎಷ್ಟು ಹೊತ್ತಾದರೂ ಹೊರಗೆ ಬರದಿದ್ದಾಗ ಶ್ರೀಕೃಷ್ಣನು ಅರ್ಜುನನನ್ನು ಕರೆದುಕೊಂಡು ಒಳಗೆ ಹೋದನು. ಅಲ್ಲಿ ನೋಡಿದರೆ ಕರ್ಣನು ತನ್ನ ಮಂಚದ ಮರವನ್ನು ಕಡಿಯುತ್ತಿದ್ದನು. ಅಕ್ಕಪಕ್ಕದಲ್ಲಿ ಅನೇಕ ಮರದ ಸಾಮಾನು ಮುರಿದು ಇಡಲಾಗಿತ್ತು.

ಆಗ ಅವರಿಗೆ ತಿಳಿಯಿತು ಕರ್ಣ ಇಷ್ಟು ಹೊತ್ತು ಏನು ಮಾಡುತ್ತಿದ್ದನೆಂದು. ಅರ್ಜುನನು ಕೇಳಿದನು, “ಕರ್ಣಾ, ಇಷ್ಟು ಸಣ್ಣ ವಿಷಯಕ್ಕಾಗಿ ನೀನು ಚಂದನದ ಮರದ, ಕರಕುಶಲ ಕೆತ್ತನೆಯನ್ನು ಮಾಡಲಾಗಿರುವ, ಸುಂದರವಾದ ಮಂಚವನ್ನೇಕೆ ಮುರಿದೆ?”.

ಆಗ ಕರ್ಣನು ಹೇಳಿದನು, “ಈ ವಸ್ತುಗಳನ್ನು ಪುನಃ ಮಾಡಿಸಿಕೊಳ್ಳಬಹುದು ಆದರೆ ಯಾರಿಗಾದರು ಸಹಾಯ ಮಾಡುವಂತಹ ಅವಕಾಶವನ್ನು ಕಳೆದುಕೊಂಡರೆ ಅದಕ್ಕಿಂತ ದುಃಖದ ವಿಷಯವೇನಿದೆ?”.

ಕೃಪೆ. ಹಿಂದೂ ಜಾಗೃತಿ (ಸಾಮಾಜಿಕ ಜಾಲತಾಣ)

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]